<p>ಕಾರವಾರ: ಮನೆಯ ಉತಾರು ಪತ್ರ ವಿತರಿಸಲು ಲಂಚ ಪಡೆದಿದ್ದ ಯಲ್ಲಾಪುರ ಪಟ್ಟಣ ಪಂಚಾಯಿತಿಯ ತೆರಿಗೆ ವಸೂಲಿ ಸಹಾಯಕ ಪ್ರತಾಪ ಸಿಂಗ್ ಭವಾನಿಸಿಂಗ್ ರಜಪೂತ್ ಎಂಬಾತನಿಗೆ ಒಂದೂವರೆ ವರ್ಷ ಜೈಲು ಮತ್ತು ₹2 ಸಾವಿರ ದಂಡ ವಿಧಿಸಿ ಜಿಲ್ಲಾ ಸೆಷನ್ಸ್ ನ್ಯಾಯಾಲಯ ತೀರ್ಪು ನೀಡಿದೆ.</p>.<p>ಯಲ್ಲಾಪುರ ಪಟ್ಟಣದ ಉದ್ಯಮ ನಗರ ನಿವಾಸಿ ಮಂಜುನಾಥ ಹೆಗಡೆ ಎಂಬುವವರು ತಮ್ಮ ತಾಯಿ ಹೆಸರಿನಲ್ಲಿದ್ದ ಮನೆಗೆ ಹೊಸದಾಗಿ ವಿದ್ಯುತ್ ಸಂಪರ್ಕ ಅಳವಡಿಸಿಕೊಳ್ಳುವುದಕ್ಕಾಗಿ ಹೆಸ್ಕಾಂಗೆ ಅರ್ಜಿ ಸಲ್ಲಿಸುವ ಸಲುವಾಗಿ ಅಗತ್ಯವಿರುವ ಉತಾರು ಪತ್ರಕ್ಕೆ ಪಟ್ಟಣ ಪಂಚಾಯಿತಿಗೆ ಅರ್ಜಿ ಸಲ್ಲಿಸಿದ್ದರು.</p>.<p>ಉತಾರು ಪತ್ರ ಒದಗಿಸಲು ತೆರಿಗೆ ವಸೂಲಿ ಸಹಾಯಕ ಪ್ರಕಾಶ ನಾಯ್ಕ ಎಂಬುವವರು ₹6 ಸಾವಿರ ನೀಡುವಂತೆ ಬೇಡಿಕೆ ಇಟ್ಟಿದ್ದರು. ಮುಂಗಡವಾಗಿ ₹4 ಸಾವಿರವನ್ನು ಇನ್ನೋರ್ವ ಸಿಬ್ಬಂದಿ ಪ್ರತಾಪ ಸಿಂಗ್ ಭವಾನಿಸಿಂಗ್ ರಜಪೂತ್ಗೆ ನೀಡಲು ಸೂಚಿಸಿದ್ದರು. ಲಂಚ ಪಡೆಯುವ ವೇಳೆ ಪ್ರತಾಪ ಲೋಕಾಯುಕ್ತ ಪೊಲೀಸರಿಗೆ ಸಿಕ್ಕಿ ಬಿದ್ದಿದ್ದರು. ಅವರ ವಿರುದ್ಧ ನ್ಯಾಯಾಲಯಕ್ಕೆ ದೋಷಾರೋಪಣೆ ಪಟ್ಟಿ ಸಲ್ಲಿಕೆಯಾಗಿತ್ತು.</p>.<p>ಪ್ರಕರಣದ ವಿಚಾರಣೆ ನಡೆಸಿದ ಜಿಲ್ಲಾ ಸೆಷನ್ಸ್ ನ್ಯಾಯಾಧೀಶ ಡಿ.ಎಸ್.ವಿಜಯಕುಮಾರ ಅವರು ಶಿಕ್ಷೆ ಪ್ರಮಾಣ ಪ್ರಕಟಿಸಿದರು. ಲೋಕಾಯುಕ್ತ ಸಂಸ್ಥೆಯ ಪರವಾಗಿ ವಿಶೇಷ ಸರ್ಕಾರಿ ಆಭಿಯೋಜಕ ಲಕ್ಷ್ಮೀಕಾಂತ ಎಂ.ಪ್ರಭು ವಾದ ಮಂಡಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಕಾರವಾರ: ಮನೆಯ ಉತಾರು ಪತ್ರ ವಿತರಿಸಲು ಲಂಚ ಪಡೆದಿದ್ದ ಯಲ್ಲಾಪುರ ಪಟ್ಟಣ ಪಂಚಾಯಿತಿಯ ತೆರಿಗೆ ವಸೂಲಿ ಸಹಾಯಕ ಪ್ರತಾಪ ಸಿಂಗ್ ಭವಾನಿಸಿಂಗ್ ರಜಪೂತ್ ಎಂಬಾತನಿಗೆ ಒಂದೂವರೆ ವರ್ಷ ಜೈಲು ಮತ್ತು ₹2 ಸಾವಿರ ದಂಡ ವಿಧಿಸಿ ಜಿಲ್ಲಾ ಸೆಷನ್ಸ್ ನ್ಯಾಯಾಲಯ ತೀರ್ಪು ನೀಡಿದೆ.</p>.<p>ಯಲ್ಲಾಪುರ ಪಟ್ಟಣದ ಉದ್ಯಮ ನಗರ ನಿವಾಸಿ ಮಂಜುನಾಥ ಹೆಗಡೆ ಎಂಬುವವರು ತಮ್ಮ ತಾಯಿ ಹೆಸರಿನಲ್ಲಿದ್ದ ಮನೆಗೆ ಹೊಸದಾಗಿ ವಿದ್ಯುತ್ ಸಂಪರ್ಕ ಅಳವಡಿಸಿಕೊಳ್ಳುವುದಕ್ಕಾಗಿ ಹೆಸ್ಕಾಂಗೆ ಅರ್ಜಿ ಸಲ್ಲಿಸುವ ಸಲುವಾಗಿ ಅಗತ್ಯವಿರುವ ಉತಾರು ಪತ್ರಕ್ಕೆ ಪಟ್ಟಣ ಪಂಚಾಯಿತಿಗೆ ಅರ್ಜಿ ಸಲ್ಲಿಸಿದ್ದರು.</p>.<p>ಉತಾರು ಪತ್ರ ಒದಗಿಸಲು ತೆರಿಗೆ ವಸೂಲಿ ಸಹಾಯಕ ಪ್ರಕಾಶ ನಾಯ್ಕ ಎಂಬುವವರು ₹6 ಸಾವಿರ ನೀಡುವಂತೆ ಬೇಡಿಕೆ ಇಟ್ಟಿದ್ದರು. ಮುಂಗಡವಾಗಿ ₹4 ಸಾವಿರವನ್ನು ಇನ್ನೋರ್ವ ಸಿಬ್ಬಂದಿ ಪ್ರತಾಪ ಸಿಂಗ್ ಭವಾನಿಸಿಂಗ್ ರಜಪೂತ್ಗೆ ನೀಡಲು ಸೂಚಿಸಿದ್ದರು. ಲಂಚ ಪಡೆಯುವ ವೇಳೆ ಪ್ರತಾಪ ಲೋಕಾಯುಕ್ತ ಪೊಲೀಸರಿಗೆ ಸಿಕ್ಕಿ ಬಿದ್ದಿದ್ದರು. ಅವರ ವಿರುದ್ಧ ನ್ಯಾಯಾಲಯಕ್ಕೆ ದೋಷಾರೋಪಣೆ ಪಟ್ಟಿ ಸಲ್ಲಿಕೆಯಾಗಿತ್ತು.</p>.<p>ಪ್ರಕರಣದ ವಿಚಾರಣೆ ನಡೆಸಿದ ಜಿಲ್ಲಾ ಸೆಷನ್ಸ್ ನ್ಯಾಯಾಧೀಶ ಡಿ.ಎಸ್.ವಿಜಯಕುಮಾರ ಅವರು ಶಿಕ್ಷೆ ಪ್ರಮಾಣ ಪ್ರಕಟಿಸಿದರು. ಲೋಕಾಯುಕ್ತ ಸಂಸ್ಥೆಯ ಪರವಾಗಿ ವಿಶೇಷ ಸರ್ಕಾರಿ ಆಭಿಯೋಜಕ ಲಕ್ಷ್ಮೀಕಾಂತ ಎಂ.ಪ್ರಭು ವಾದ ಮಂಡಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>