<p><strong>ಕಾರವಾರ:</strong> ಅಂಕೋಲಾ ತಾಲ್ಲೂಕಿನ ಸುಂಕಸಾಳ ಬಳಿ ಗುರುವಾರ ನಸುಕಿನ ಜಾವ ಖಾಸಗಿ ಬಸ್ಗಳಿಗೆ ಲಾರಿ ಡಿಕ್ಕಿಯಾದ ಪರಿಣಾಮ ಬಸ್ನಲ್ಲಿದ್ದ 24 ಮಂದಿ ಗಾಯಗೊಂಡಿದ್ದಾರೆ.</p><p>ರಾಷ್ಟ್ರೀಯ ಹೆದ್ದಾರಿ-52ರಲ್ಲಿ ಈ ದುರ್ಘಟನೆ ಸಂಭವಿಸಿದೆ. ಬಳ್ಳಾರಿಯಿಂದ ಪಣಜಿಗೆ ಸಂಚರಿಸುತ್ತಿದ್ದ ಬಸ್, ಹುಬ್ಬಳ್ಳಿಯಿಂದ ಮಂಗಳೂರಿನತ್ತ ಸಂಚರಿಸುತ್ತಿದ್ದ ಬಸ್ಗೆ ಎದುರಿನಿಂದ ಬಂದ ಲಾರಿ ಡಿಕ್ಕಿಯಾಗಿದೆ ಎಂದು ಅಂಕೋಲಾ ಠಾಣೆ ಪೊಲೀಸರು ತಿಳಿಸಿದ್ದಾರೆ.</p><p>ಅಪಘಾತದ ಪರಿಣಾಮ ಹೆದ್ದಾರಿಯಲ್ಲಿ ಕಿಲೋ ಮೀಟರ್ಗಟ್ಟಲೆ ದೂರದವರೆಗೆ ಸಂಚಾರ ದಟ್ಟಣೆ ಉಂಟಾಯಿತು. ಯಲ್ಲಾಪುರ ತಾಲ್ಲೂಕಿನ ಅರೆಬೈಲ್ ಘಟ್ಟದಲ್ಲಿಯೂ ವಾಹನಗಳು ಸಾಲುಗಟ್ಟಿ ನಿಂತಿದ್ದವು. ಯಲ್ಲಾಪುರ ಜಾತ್ರೆ ಮುಗಿಸಿ ಕರಾವಳಿ ಭಾಗದ ಕಡೆಗೆ ಪ್ರಯಾಣಿಸುತ್ತಿದ್ದವರ ಸಂಖ್ಯೆ ಹೆಚ್ಚಿದ್ದರಿಂದ ನಸುಕಿನ ಜಾವದಲ್ಲಿ ದಟ್ಟಣೆ ಹೆಚ್ಚಾಯಿತು.</p><p>'ಮೂರ್ನಾಲ್ಕು ತಾಸುಗಳವರೆಗೆ ಅರಬೈಲ್ ಘಟ್ಟದಲ್ಲಿ ಬಸ್ ನಿಂತಿತ್ತು. ನಸುಕಿನ ಜಾವ ಅಂಕೋಲಾಕ್ಕೆ ತಲುಪಬೇಕಿದ್ದವರಿಗೆ ಮೂರು ತಾಸು ತಡವಾಯಿತು' ಎಂದು ಪ್ರಯಾಣಿಕರೊಬ್ಬರು ಬೇಸರ ವ್ಯಕ್ತಪಡಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕಾರವಾರ:</strong> ಅಂಕೋಲಾ ತಾಲ್ಲೂಕಿನ ಸುಂಕಸಾಳ ಬಳಿ ಗುರುವಾರ ನಸುಕಿನ ಜಾವ ಖಾಸಗಿ ಬಸ್ಗಳಿಗೆ ಲಾರಿ ಡಿಕ್ಕಿಯಾದ ಪರಿಣಾಮ ಬಸ್ನಲ್ಲಿದ್ದ 24 ಮಂದಿ ಗಾಯಗೊಂಡಿದ್ದಾರೆ.</p><p>ರಾಷ್ಟ್ರೀಯ ಹೆದ್ದಾರಿ-52ರಲ್ಲಿ ಈ ದುರ್ಘಟನೆ ಸಂಭವಿಸಿದೆ. ಬಳ್ಳಾರಿಯಿಂದ ಪಣಜಿಗೆ ಸಂಚರಿಸುತ್ತಿದ್ದ ಬಸ್, ಹುಬ್ಬಳ್ಳಿಯಿಂದ ಮಂಗಳೂರಿನತ್ತ ಸಂಚರಿಸುತ್ತಿದ್ದ ಬಸ್ಗೆ ಎದುರಿನಿಂದ ಬಂದ ಲಾರಿ ಡಿಕ್ಕಿಯಾಗಿದೆ ಎಂದು ಅಂಕೋಲಾ ಠಾಣೆ ಪೊಲೀಸರು ತಿಳಿಸಿದ್ದಾರೆ.</p><p>ಅಪಘಾತದ ಪರಿಣಾಮ ಹೆದ್ದಾರಿಯಲ್ಲಿ ಕಿಲೋ ಮೀಟರ್ಗಟ್ಟಲೆ ದೂರದವರೆಗೆ ಸಂಚಾರ ದಟ್ಟಣೆ ಉಂಟಾಯಿತು. ಯಲ್ಲಾಪುರ ತಾಲ್ಲೂಕಿನ ಅರೆಬೈಲ್ ಘಟ್ಟದಲ್ಲಿಯೂ ವಾಹನಗಳು ಸಾಲುಗಟ್ಟಿ ನಿಂತಿದ್ದವು. ಯಲ್ಲಾಪುರ ಜಾತ್ರೆ ಮುಗಿಸಿ ಕರಾವಳಿ ಭಾಗದ ಕಡೆಗೆ ಪ್ರಯಾಣಿಸುತ್ತಿದ್ದವರ ಸಂಖ್ಯೆ ಹೆಚ್ಚಿದ್ದರಿಂದ ನಸುಕಿನ ಜಾವದಲ್ಲಿ ದಟ್ಟಣೆ ಹೆಚ್ಚಾಯಿತು.</p><p>'ಮೂರ್ನಾಲ್ಕು ತಾಸುಗಳವರೆಗೆ ಅರಬೈಲ್ ಘಟ್ಟದಲ್ಲಿ ಬಸ್ ನಿಂತಿತ್ತು. ನಸುಕಿನ ಜಾವ ಅಂಕೋಲಾಕ್ಕೆ ತಲುಪಬೇಕಿದ್ದವರಿಗೆ ಮೂರು ತಾಸು ತಡವಾಯಿತು' ಎಂದು ಪ್ರಯಾಣಿಕರೊಬ್ಬರು ಬೇಸರ ವ್ಯಕ್ತಪಡಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>