ಬುಧವಾರ, 8 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸಿದ್ದಾಪುರ | ಬಸ್ ಪಲ್ಟಿ: 47 ಪ್ರಯಾಣಿಕರು ಪಾರು

Last Updated 4 ಏಪ್ರಿಲ್ 2023, 11:17 IST
ಅಕ್ಷರ ಗಾತ್ರ

ಸಿದ್ದಾಪುರ: ಚಲಿಸುತ್ತಿದ್ದ ಬಸ್ ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಪಕ್ಕದ ಕಂದಕಕ್ಕೆ ಉರುಳಿದ ಘಟನೆ ತಾಲ್ಲೂಕಿನ 16ನೇ ಮೈಲಿಕಲ್ ಬಳಿ ಮಂಗಳವಾರ ನಡೆದಿದೆ.

ಹಳಿಯಾಳದಿಂದ ಸಿದ್ದಾಪುರ ಮಾರ್ಗವಾಗಿ ಸಾಗರಕ್ಕೆ ಸಂಚರಿಸುತ್ತಿದ್ದ ಬಸ್ ಈ ರೀತಿ ಅಪಘಾತಕ್ಕೆ ತುತ್ತಾಗಿದೆ. ಬಸ್‍ನಲ್ಲಿ ಪ್ರಯಾಣಿಸುತ್ತಿದ್ದ 47 ಮಂದಿಯಲ್ಲಿ ಇಬ್ಬರಿಗೆ ಗಾಯಗಳಾಗಿದ್ದು, ಉಳಿದವರು ಅಪಾಯದಿಂದ ಪಾರಾಗಿದ್ದಾರೆ ಎಂದು ಸ್ಥಳೀಯರು ತಿಳಿಸಿದ್ದಾರೆ.

‘ಬಸ್‍ನ ಸ್ಟಿಯರಿಂಗ್ ರಾಡ್ ತುಂಡಾದ ಪರಿಣಾಮ ನಿಯಂತ್ರಣಕ್ಕೆ ಸಿಗದೆ ಬಸ್ ಪಲ್ಟಿಯಾಗಿರುವುದು ಗೊತ್ತಾಗಿದೆ. ಕಂದಕದ ಪಕ್ಕದಲ್ಲಿದ್ದ ಮರಕ್ಕೆ ಬಡಿದು ನಿಂತಿದ್ದರಿಂದ ದೊಡ್ಡ ಮಟ್ಟದ ಅಪಾಯ ತಪ್ಪಿದೆ’ ಎಂದು ಸಿದ್ದಾಪುರ ಠಾಣೆ ಪೊಲೀಸರು ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT