‘ನಗರದಲ್ಲಿ ಹಿಡಿಯಲಾದ ಬೀದಿನಾಯಿಗಳ ಸಂತಾನಶಕ್ತಿ ಹರಣ ಶಸ್ತ್ರಕ್ರಿಯೆಗೆ, ಶಿರವಾಡದ ಘನತ್ಯಾಜ್ಯ ವಿಲೇವಾರಿ ಘಟಕದ ಆವರಣದಲ್ಲಿ ವ್ಯವಸ್ಥೆ ಕಲ್ಪಿಸಲು ಉದ್ದೇಶಿಸಲಾಗಿತ್ತು. ಆದರೆ, ಅದಕ್ಕೆ ಸ್ಥಳೀಯರು ಆಕ್ಷೇಪಿಸಿದರು. ನಂತರ ಪಶು ಸಂಗೋಪನೆ ಇಲಾಖೆಯ ಉಪ ನಿರ್ದೇಶಕರ ಜೊತೆ ಚರ್ಚಿಸಿ, ಪಶು ವೈದ್ಯಕೀಯ ಆಸ್ಪತ್ರೆ ಆವರಣದಲ್ಲಿ ವ್ಯವಸ್ಥೆ ಮಾಡಲಾಗಿದೆ. ಆ ಪ್ರದೇಶದ ಆವರಣಕ್ಕೆ ಕಬ್ಬಿಣದ ಶೀಟುಗಳನ್ನು ಅಳವಡಿಸಿ ಸ್ಥಳೀಯ ನಿವಾಸಿಗಳಿಗೆ ತೊಂದರೆಯಾಗದಂತೆ ಕ್ರಮ ಕೈಗೊಳ್ಳಲಾಗಿದೆ’ ಎಂದರು.