ಕೋಸ್ಟ್ ಗಾರ್ಡ್ ಮತ್ತು ಬಂದರು ಅಧಿಕಾರಿಗಳ ನೆರವಿನಿಂದ ಜಿತೇಂದ್ರ ಅವರನ್ನು ಕೂಡಲೇ ಜಿಲ್ಲಾ ಆಸ್ಪತ್ರೆಗೆ ಕರೆದುಕೊಂಡು ಹೋಗಲಾಯಿತು. ಆದರೆ, ಅವರು ಅಷ್ಟರಲ್ಲೇ ಮೃತಪಟ್ಟಿದ್ದಾಗಿ ತಿಳಿಯಿತು. ಅವರಿಗೆ ಹೃದಯಾಘಾತ ಆಗಿರಬಹುದು. ಸಾವಿಗೆ ನಿಖರವಾದ ಕಾರಣವು ಶವದ ಮರಣೋತ್ತರ ಪರೀಕ್ಷೆಯ ನಂತರ ತಿಳಿಯಲಿದೆ. ಅವರ ಕುಟುಂಬದ ಸದಸ್ಯರಿಗೆ ಮಾಹಿತಿ ನೀಡಲಾಗಿದೆ. ಅವರು ಬಂದ ಕೂಡಲೇ ಕಾನೂನು ಪ್ರಕ್ರಿಯೆಗಳನ್ನು ಪೂರೈಸಿ ಪಾರ್ಥಿವ ಶರೀರವನ್ನು ಹಸ್ತಾಂತರಿಸಲಾಗುವುದು ಎಂದು ಬಂದರು ಅಧಿಕಾರಿಗಳು ತಿಳಿಸಿದ್ದಾರೆ. ನಗರ ಠಾಣೆ ಪೊಲೀಸರು ಪರಿಶೀಲನೆ ನಡೆಸಿದ್ದಾರೆ.