<p>ಪ್ರಜಾವಾಣಿ ವಾರ್ತೆ</p>.<p><strong>ಕಾರವಾರ</strong>: ‘ಉಳಿತಾಯ ಖಾತೆಯಲ್ಲಿದ್ದ ಹಣ ಮರಳಿಸಲು ಸತಾಯಿಸುತ್ತಿರುವ ಕಾರವಾರ ಅರ್ಬನ್ ಸಹಕಾರ ಬ್ಯಾಂಕ್ ಆಡಳಿತ ಮಂಡಳಿ ವಿರುದ್ಧ ದೂರು ದಾಖಲಿಸಿದ್ದೇನೆ’ ಎಂದು ಕರುನಾಡ ರಕ್ಷಣಾ ವೇದಿಕೆ ಅಧ್ಯಕ್ಷ ಎನ್.ದತ್ತಾ ಹೇಳಿದರು.</p>.<p>ಇಲ್ಲಿ ಗುರುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಖಾತೆಯಲ್ಲಿರುವ ಸುಮಾರು ₹4 ಲಕ್ಷ ಹಿಂಪಡೆಯಲು ಚೆಕ್ ನೀಡಿ ವಿನಂತಿಸಿದಾಗ ಹಣ ನೀಡಲು ನಿರಾಕರಿಸಿದ್ದಾರೆ. ಬ್ಯಾಂಕಿಗೆ ವಂಚನೆಯಾಗಿದೆ, ಹಣ ಈಗ ಕೊಡಲು ಸಾಧ್ಯವಿಲ್ಲ ಎಂದು ಬ್ಯಾಂಕಿನ ವ್ಯವಸ್ಥಾಪಕರು ಹೇಳಿದ್ದರು. ನನ್ನಂತೆ ಹಲವರಿಗೆ ಇದೇ ರೀತಿ ಅನ್ಯಾಯವಾಗಿದೆ. ಈ ಕಾರಣಕ್ಕಾಗಿ ಪೊಲೀಸ್ ದೂರು ದಾಖಲಿಸಿದ್ದೇನೆ’ ಎಂದರು.</p>.<p>‘ಬ್ಯಾಂಕ್ ಆಡಳಿತ ಮಂಡಳಿ ಅಧ್ಯಕ್ಷ ಚಂದ್ರಹಾಸ ಸ್ವಾರ, ನಿರ್ದೇಶಕರು, ವ್ಯವಸ್ಥಾಪಕ ವಾಸುದೇಗ ಪಂಗಮ್, ಸಿಬ್ಬಂದಿ ವಿರುದ್ದವೂ ದೂರು ನೀಡಲಾಗಿದೆ’ ಎಂದರು.</p>.<p>‘ಬ್ಯಾಂಕಿನ ಆಡಳಿತ ಮಂಡಳಿ ಮೃತಪಟ್ಟವರು, ನಿವೃತ್ತ ಸಿಬ್ಬಂದಿ ಮೇಲೆ ಆರೋಪ ಹೊರಿಸುತ್ತಿದೆ. ಮೇಲ್ನೋಟಕ್ಕೆ ನೋಡಿದರೆ ಎರಡು ವರ್ಷಗಳಿಂದ ಈಚೆಗೆ ವಂಚನೆ ನಡೆದಿರುವುದು ಕಾಣಸಿಗುತ್ತಿದೆ. ಪೊಲೀಸರು ರಾಜಕೀಯ ಒತ್ತಡಕ್ಕೆ ಒಳಗಾಗದೆ ಸೂಕ್ತ ತನಿಖೆ ನಡೆಸಬೇಕು’ ಎಂದು ಒತ್ತಾಯಿಸಿದರು.</p>.<p>ಅರವಿಂದ ಗುನಗಿ, ಸುನೀಲ ನಾಯ್ಕ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಪ್ರಜಾವಾಣಿ ವಾರ್ತೆ</p>.<p><strong>ಕಾರವಾರ</strong>: ‘ಉಳಿತಾಯ ಖಾತೆಯಲ್ಲಿದ್ದ ಹಣ ಮರಳಿಸಲು ಸತಾಯಿಸುತ್ತಿರುವ ಕಾರವಾರ ಅರ್ಬನ್ ಸಹಕಾರ ಬ್ಯಾಂಕ್ ಆಡಳಿತ ಮಂಡಳಿ ವಿರುದ್ಧ ದೂರು ದಾಖಲಿಸಿದ್ದೇನೆ’ ಎಂದು ಕರುನಾಡ ರಕ್ಷಣಾ ವೇದಿಕೆ ಅಧ್ಯಕ್ಷ ಎನ್.ದತ್ತಾ ಹೇಳಿದರು.</p>.<p>ಇಲ್ಲಿ ಗುರುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಖಾತೆಯಲ್ಲಿರುವ ಸುಮಾರು ₹4 ಲಕ್ಷ ಹಿಂಪಡೆಯಲು ಚೆಕ್ ನೀಡಿ ವಿನಂತಿಸಿದಾಗ ಹಣ ನೀಡಲು ನಿರಾಕರಿಸಿದ್ದಾರೆ. ಬ್ಯಾಂಕಿಗೆ ವಂಚನೆಯಾಗಿದೆ, ಹಣ ಈಗ ಕೊಡಲು ಸಾಧ್ಯವಿಲ್ಲ ಎಂದು ಬ್ಯಾಂಕಿನ ವ್ಯವಸ್ಥಾಪಕರು ಹೇಳಿದ್ದರು. ನನ್ನಂತೆ ಹಲವರಿಗೆ ಇದೇ ರೀತಿ ಅನ್ಯಾಯವಾಗಿದೆ. ಈ ಕಾರಣಕ್ಕಾಗಿ ಪೊಲೀಸ್ ದೂರು ದಾಖಲಿಸಿದ್ದೇನೆ’ ಎಂದರು.</p>.<p>‘ಬ್ಯಾಂಕ್ ಆಡಳಿತ ಮಂಡಳಿ ಅಧ್ಯಕ್ಷ ಚಂದ್ರಹಾಸ ಸ್ವಾರ, ನಿರ್ದೇಶಕರು, ವ್ಯವಸ್ಥಾಪಕ ವಾಸುದೇಗ ಪಂಗಮ್, ಸಿಬ್ಬಂದಿ ವಿರುದ್ದವೂ ದೂರು ನೀಡಲಾಗಿದೆ’ ಎಂದರು.</p>.<p>‘ಬ್ಯಾಂಕಿನ ಆಡಳಿತ ಮಂಡಳಿ ಮೃತಪಟ್ಟವರು, ನಿವೃತ್ತ ಸಿಬ್ಬಂದಿ ಮೇಲೆ ಆರೋಪ ಹೊರಿಸುತ್ತಿದೆ. ಮೇಲ್ನೋಟಕ್ಕೆ ನೋಡಿದರೆ ಎರಡು ವರ್ಷಗಳಿಂದ ಈಚೆಗೆ ವಂಚನೆ ನಡೆದಿರುವುದು ಕಾಣಸಿಗುತ್ತಿದೆ. ಪೊಲೀಸರು ರಾಜಕೀಯ ಒತ್ತಡಕ್ಕೆ ಒಳಗಾಗದೆ ಸೂಕ್ತ ತನಿಖೆ ನಡೆಸಬೇಕು’ ಎಂದು ಒತ್ತಾಯಿಸಿದರು.</p>.<p>ಅರವಿಂದ ಗುನಗಿ, ಸುನೀಲ ನಾಯ್ಕ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>