<p><strong>ಕಾರವಾರ:</strong> ದಾಖಲೆ ಇಲ್ಲದೆ ಖಾಸಗಿ ಬಸ್ನಲ್ಲಿ ಸಾಗಿಸಲಾಗುತ್ತಿದ್ದ ₹99,99,500 ನಗದನ್ನು ತಾಲ್ಲೂಕಿನ ಮಾಜಾಳಿ ಚೆಕ್ಪೋಸ್ಟ್ನಲ್ಲಿ ಮಂಗಳವಾರ ನಸುಕಿನ ಜಾವ ಚಿತ್ತಾಕುಲ ಠಾಣೆ ಪೊಲೀಸರು ವಶಕ್ಕೆ ಪಡೆದಿದ್ದಾರೆ.</p>.ಲೇಖನ: ಆಗಾ ಖಾನ್ ಅರಮನೆ ಗಾಂಧೀಜಿ ಸೆರೆಮನೆ!.<p>'ರಾಜಸ್ಥಾನ ಮೂಲದ ಕಲ್ಪೇಶ್ ಮತ್ತು ಭಮ್ರುಕುಮಾರ ಎಂಬುವವರು ದಾಖಲೆ ಇಲ್ಲದೆ ಹಣ ಸಾಗಿಸುತ್ತಿದ್ದರು. ಪಣಜಿಯಿಂದ ಬೆಂಗಳೂರಿಗೆ ಸಂಚರಿಸುತ್ತಿದ್ದ ಖಾಸಗಿ ಬಸ್ನ್ನು ಚೆಕ್ಪೋಸ್ಟ್ನಲ್ಲಿ ತಪಾಸಣೆ ನಡೆಸುವ ವೇಳೆ ಹಣ ಪತ್ತೆಯಾಗಿದೆ' ಎಂದು ಚಿತ್ತಾಕುಲ ಠಾಣೆ ಪೊಲೀಸರು ತಿಳಿಸಿದ್ದಾರೆ.</p><p>'₹500 ಮುಖಬೆಲೆಯ ನೋಟಿನ ರಾಶಿಗಳನ್ನು ಎರಡು ಬ್ಯಾಗ್ಗಳಲ್ಲಿ ತುಂಬಿಸಿಡಲಾಗಿತ್ತು. ಹಣಕ್ಕೆ ಸೂಕ್ತ ದಾಖಲೆ ಇರಲಿಲ್ಲ. ತಮಿಳುನಾಡಿನ ಹೊಸೂರಿಗೆ ಹಣ ಸಾಗಿಸುತ್ತಿರುವುದಾಗಿ ಆರೋಪಿಗಳು ತಿಳಿಸಿದ್ದಾರೆ. ದಾಖಲೆ ಇಲ್ಲದೆ ಸಾಗಿಸುತ್ತಿದ್ದ ಕಾರಣಕ್ಕೆ ಪ್ರಕರಣ ದಾಖಲಿಸಿ, ಹಣ ವಶಕ್ಕೆ ಪಡೆಯಲಾಗಿದೆ' ಎಂದು ಮಾಹಿತಿ ನೀಡಿದ್ದಾರೆ.</p>. ಕಾರವಾರ: ಮಳೆ, ಗಾಳಿ ಅಬ್ಬರ; ವಾಣಿಜ್ಯ ಬಂದರಿನಲ್ಲಿ ದೋಣಿ ಲಂಗರು.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕಾರವಾರ:</strong> ದಾಖಲೆ ಇಲ್ಲದೆ ಖಾಸಗಿ ಬಸ್ನಲ್ಲಿ ಸಾಗಿಸಲಾಗುತ್ತಿದ್ದ ₹99,99,500 ನಗದನ್ನು ತಾಲ್ಲೂಕಿನ ಮಾಜಾಳಿ ಚೆಕ್ಪೋಸ್ಟ್ನಲ್ಲಿ ಮಂಗಳವಾರ ನಸುಕಿನ ಜಾವ ಚಿತ್ತಾಕುಲ ಠಾಣೆ ಪೊಲೀಸರು ವಶಕ್ಕೆ ಪಡೆದಿದ್ದಾರೆ.</p>.ಲೇಖನ: ಆಗಾ ಖಾನ್ ಅರಮನೆ ಗಾಂಧೀಜಿ ಸೆರೆಮನೆ!.<p>'ರಾಜಸ್ಥಾನ ಮೂಲದ ಕಲ್ಪೇಶ್ ಮತ್ತು ಭಮ್ರುಕುಮಾರ ಎಂಬುವವರು ದಾಖಲೆ ಇಲ್ಲದೆ ಹಣ ಸಾಗಿಸುತ್ತಿದ್ದರು. ಪಣಜಿಯಿಂದ ಬೆಂಗಳೂರಿಗೆ ಸಂಚರಿಸುತ್ತಿದ್ದ ಖಾಸಗಿ ಬಸ್ನ್ನು ಚೆಕ್ಪೋಸ್ಟ್ನಲ್ಲಿ ತಪಾಸಣೆ ನಡೆಸುವ ವೇಳೆ ಹಣ ಪತ್ತೆಯಾಗಿದೆ' ಎಂದು ಚಿತ್ತಾಕುಲ ಠಾಣೆ ಪೊಲೀಸರು ತಿಳಿಸಿದ್ದಾರೆ.</p><p>'₹500 ಮುಖಬೆಲೆಯ ನೋಟಿನ ರಾಶಿಗಳನ್ನು ಎರಡು ಬ್ಯಾಗ್ಗಳಲ್ಲಿ ತುಂಬಿಸಿಡಲಾಗಿತ್ತು. ಹಣಕ್ಕೆ ಸೂಕ್ತ ದಾಖಲೆ ಇರಲಿಲ್ಲ. ತಮಿಳುನಾಡಿನ ಹೊಸೂರಿಗೆ ಹಣ ಸಾಗಿಸುತ್ತಿರುವುದಾಗಿ ಆರೋಪಿಗಳು ತಿಳಿಸಿದ್ದಾರೆ. ದಾಖಲೆ ಇಲ್ಲದೆ ಸಾಗಿಸುತ್ತಿದ್ದ ಕಾರಣಕ್ಕೆ ಪ್ರಕರಣ ದಾಖಲಿಸಿ, ಹಣ ವಶಕ್ಕೆ ಪಡೆಯಲಾಗಿದೆ' ಎಂದು ಮಾಹಿತಿ ನೀಡಿದ್ದಾರೆ.</p>. ಕಾರವಾರ: ಮಳೆ, ಗಾಳಿ ಅಬ್ಬರ; ವಾಣಿಜ್ಯ ಬಂದರಿನಲ್ಲಿ ದೋಣಿ ಲಂಗರು.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>