<p><strong>ಕಾರವಾರ:</strong> ಉತ್ತರ ಕನ್ನಡದ ಹೊನ್ನಾವರದಲ್ಲಿ 2017ರಲ್ಲಿ ಯುವಕ ಪರೇಶ ಮೇಸ್ತ ಸಾವು ಪ್ರಕರಣದ ತನಿಖೆ ನಡೆಸಿದ ಸಿ.ಬಿ.ಐ ಅಧಿಕಾರಿಗಳು, ನ್ಯಾಯಾಲಯಕ್ಕೆ ‘ಬಿ’ ರಿಪೋರ್ಟ್ ಸಲ್ಲಿಕೆ ಮಾಡಿದ್ದಾರೆ. ಇದು ಕೊಲೆಯಲ್ಲ, ಆಕಸ್ಮಿಕ ಸಾವು ಎಂದು ವರದಿಯಲ್ಲಿ ಉಲ್ಲೇಖಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ.</p>.<p>ನಾಲ್ಕು ವರ್ಷಕ್ಕೂ ಅಧಿಕ ಕಾಲ ತನಿಖೆ ನಡೆಸಿದ ಸಿ.ಬಿ.ಐ ಅಧಿಕಾರಿಗಳು, ಸುಮಾರು 1,500 ಪುಟಗಳ ವರದಿಯನ್ನು ಹೊನ್ನಾವರದ ನ್ಯಾಯಾಲಯಕ್ಕೆ ಭಾನುವಾರ ಸಲ್ಲಿಸಿದ್ದರು. ಅದನ್ನು ನ್ಯಾಯಾಲಯವು ಸೋಮವಾರ ಸ್ವೀಕೃತಗೊಳಿಸಿದೆ. ಮುಂದಿನ ವಿಚಾರಣೆಯನ್ನು ನ.16ಕ್ಕೆ ಮುಂದೂಡಿದೆ.</p>.<p>2017ರ ಡಿ.7ರಂದು ಮೀನುಗಾರ ಸಮುದಾಯದ ಯುವಕ ಪರೇಶ ಮೃತದೇಹ ಪತ್ತೆಯಾಗಿತ್ತು. ಬಳಿಕ ಜಿಲ್ಲೆಯ ವಿವಿಧೆಡೆಗಳಲ್ಲಿ ಭಾರಿ ಘರ್ಷಣೆಗಳು ಉಂಟಾಗಿದ್ದವು. ಪ್ರಕರಣದ ತನಿಖೆಯನ್ನು ಅಂದಿನ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಸರ್ಕಾರವು ಸಿ.ಬಿ.ಐಗೆ ವಹಿಸಿತ್ತು. ಈ ಪ್ರಕರಣದಲ್ಲಿ ಐವರನ್ನು ಬಂಧಿಸಲಾಗಿತ್ತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕಾರವಾರ:</strong> ಉತ್ತರ ಕನ್ನಡದ ಹೊನ್ನಾವರದಲ್ಲಿ 2017ರಲ್ಲಿ ಯುವಕ ಪರೇಶ ಮೇಸ್ತ ಸಾವು ಪ್ರಕರಣದ ತನಿಖೆ ನಡೆಸಿದ ಸಿ.ಬಿ.ಐ ಅಧಿಕಾರಿಗಳು, ನ್ಯಾಯಾಲಯಕ್ಕೆ ‘ಬಿ’ ರಿಪೋರ್ಟ್ ಸಲ್ಲಿಕೆ ಮಾಡಿದ್ದಾರೆ. ಇದು ಕೊಲೆಯಲ್ಲ, ಆಕಸ್ಮಿಕ ಸಾವು ಎಂದು ವರದಿಯಲ್ಲಿ ಉಲ್ಲೇಖಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ.</p>.<p>ನಾಲ್ಕು ವರ್ಷಕ್ಕೂ ಅಧಿಕ ಕಾಲ ತನಿಖೆ ನಡೆಸಿದ ಸಿ.ಬಿ.ಐ ಅಧಿಕಾರಿಗಳು, ಸುಮಾರು 1,500 ಪುಟಗಳ ವರದಿಯನ್ನು ಹೊನ್ನಾವರದ ನ್ಯಾಯಾಲಯಕ್ಕೆ ಭಾನುವಾರ ಸಲ್ಲಿಸಿದ್ದರು. ಅದನ್ನು ನ್ಯಾಯಾಲಯವು ಸೋಮವಾರ ಸ್ವೀಕೃತಗೊಳಿಸಿದೆ. ಮುಂದಿನ ವಿಚಾರಣೆಯನ್ನು ನ.16ಕ್ಕೆ ಮುಂದೂಡಿದೆ.</p>.<p>2017ರ ಡಿ.7ರಂದು ಮೀನುಗಾರ ಸಮುದಾಯದ ಯುವಕ ಪರೇಶ ಮೃತದೇಹ ಪತ್ತೆಯಾಗಿತ್ತು. ಬಳಿಕ ಜಿಲ್ಲೆಯ ವಿವಿಧೆಡೆಗಳಲ್ಲಿ ಭಾರಿ ಘರ್ಷಣೆಗಳು ಉಂಟಾಗಿದ್ದವು. ಪ್ರಕರಣದ ತನಿಖೆಯನ್ನು ಅಂದಿನ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಸರ್ಕಾರವು ಸಿ.ಬಿ.ಐಗೆ ವಹಿಸಿತ್ತು. ಈ ಪ್ರಕರಣದಲ್ಲಿ ಐವರನ್ನು ಬಂಧಿಸಲಾಗಿತ್ತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>