<p><strong>ಶಿರಸಿ:</strong> ‘ಕೈಯ್ಯಲ್ಲಿ ಸುತ್ತುವ ಚಕ್ಕುಲಿ ರುಚಿ ಮತ್ತು ಹೆಚ್ಚು ಬಾಳಿಕೆಗೆ ಪ್ರಸಿದ್ಧಿ. ಈ ಬಗ್ಗೆ ಯುವ ಪೀಳಿಗೆಗೆ ತಿಳಿಸಿಕೊಡುವ ಜತೆಗೆ ನಶಿಸುತ್ತಿರುವ ಪದ್ಧತಿ ಉಳಿಸಿಕೊಳ್ಳುವ ಅಗತ್ಯವಿದೆ’ ಎಂದು ಪ್ರಗತಿಪರ ಕೃಷಿಕರಾದ ವೇದಾವತಿ ಹೆಗಡೆ ನೀರ್ನಳ್ಳಿ ಅಭಿಪ್ರಾಯಪಟ್ಟರು.</p>.<p>ಇಲ್ಲಿನ ಕದಂಬ ಸೌಹಾರ್ದ ಮಾರ್ಕೆಟಿಂಗ್ ಸಂಸ್ಥೆ ಸಭಾಂಗಣದಲ್ಲಿ ಎರಡು ದಿನಗಳ ಕೈಚಕ್ಕುಲಿ ತಯಾರಿಕೆ ಸ್ಪರ್ಧೆ, ಪ್ರದರ್ಶನ ಮತ್ತು ತರಬೇತಿ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.</p>.<p>ಕದಂಬ ಸಂಸ್ಥೆಯ ಅಧ್ಯಕ್ಷ ಶಂಭುಲಿಂಗ ಹೆಗಡೆ ನಿಡಗೋಡ, ‘ಕೈಚಕ್ಕಲಿ ಕಂಬಳ ಸಹಬಾಳ್ವೆಯ ಸಂದೇಶ ಸಾರುವ ಜತೆಗೆ ಗ್ರಾಮೀಣ ಭಾಗದ ಸೊಗಡು ಪ್ರದರ್ಶಿಸುತ್ತದೆ. ಉತ್ತಮ ಕೈಚಕ್ಕುಲಿ ತಯಾರಿಕೆ ಪ್ರತಿಭೆಯೂ ಹೌದಾಗಿದ್ದು, ಇದನ್ನು ಪ್ರೋತ್ಸಾಹಿಸಲು ಕಾರ್ಯಕ್ರಮ ಆಯೋಜಿಸಲಾಗಿದೆ’ ಎಂದರು.</p>.<p>ಮೂವತ್ತಕ್ಕೂ ಹೆಚ್ಚು ಆಸಕ್ತರು ಸ್ಪರ್ಧೆಯಲ್ಲಿ ಕೈಯ್ಯಲ್ಲಿ ಚಕ್ಕುಲಿ ಸುತ್ತಿದರು. ವಯಸ್ಸಿನ ಭೇದವಿಲ್ಲದೆ ವೃದ್ಧರು, ಮಹಿಳೆಯರು, ಯುವಕರು ಪಾಲ್ಗೊಂಡಿದ್ದರು.</p>.<p>ಅಕ್ಕಿ ಹಿಟ್ಟಿನ ಹೊರತಾಗಿ ಬೀಟ್ರೂಟ್, ಬೆಳ್ಳುಳ್ಳಿ, ಕ್ಯಾರೆಟ್, ಬಾಳೆಕಾಯಿ ಸೇರಿದಂತೆ ವಿವಿಧ ಬಗೆಯ ತರಕಾರಿಗಳಿಂದ ಸಿದ್ಧಪಡಿಸಿದ್ದ ಇಪ್ಪತ್ತೈದಕ್ಕೂ ಹೆಚ್ಚು ಬಗೆಯ ಚಕ್ಕುಲಿಗಳನ್ನು ಪ್ರದರ್ಶಿಸಲಾಯಿತು.</p>.<p>ವ್ಯವಸ್ಥಾಪಕ ವಿಶ್ವೇಶ್ವರ ಭಟ್ಟ, ನಿರ್ದೇಶಕರಾದ ಪ್ರತಿಭಾ ಬೆಳಲೆ, ಆಶಾ ಹೆಗಡೆ, ಗಣಪತಿ ಹೆಗಡೆ ಮುರೇಗಾರ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಶಿರಸಿ:</strong> ‘ಕೈಯ್ಯಲ್ಲಿ ಸುತ್ತುವ ಚಕ್ಕುಲಿ ರುಚಿ ಮತ್ತು ಹೆಚ್ಚು ಬಾಳಿಕೆಗೆ ಪ್ರಸಿದ್ಧಿ. ಈ ಬಗ್ಗೆ ಯುವ ಪೀಳಿಗೆಗೆ ತಿಳಿಸಿಕೊಡುವ ಜತೆಗೆ ನಶಿಸುತ್ತಿರುವ ಪದ್ಧತಿ ಉಳಿಸಿಕೊಳ್ಳುವ ಅಗತ್ಯವಿದೆ’ ಎಂದು ಪ್ರಗತಿಪರ ಕೃಷಿಕರಾದ ವೇದಾವತಿ ಹೆಗಡೆ ನೀರ್ನಳ್ಳಿ ಅಭಿಪ್ರಾಯಪಟ್ಟರು.</p>.<p>ಇಲ್ಲಿನ ಕದಂಬ ಸೌಹಾರ್ದ ಮಾರ್ಕೆಟಿಂಗ್ ಸಂಸ್ಥೆ ಸಭಾಂಗಣದಲ್ಲಿ ಎರಡು ದಿನಗಳ ಕೈಚಕ್ಕುಲಿ ತಯಾರಿಕೆ ಸ್ಪರ್ಧೆ, ಪ್ರದರ್ಶನ ಮತ್ತು ತರಬೇತಿ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.</p>.<p>ಕದಂಬ ಸಂಸ್ಥೆಯ ಅಧ್ಯಕ್ಷ ಶಂಭುಲಿಂಗ ಹೆಗಡೆ ನಿಡಗೋಡ, ‘ಕೈಚಕ್ಕಲಿ ಕಂಬಳ ಸಹಬಾಳ್ವೆಯ ಸಂದೇಶ ಸಾರುವ ಜತೆಗೆ ಗ್ರಾಮೀಣ ಭಾಗದ ಸೊಗಡು ಪ್ರದರ್ಶಿಸುತ್ತದೆ. ಉತ್ತಮ ಕೈಚಕ್ಕುಲಿ ತಯಾರಿಕೆ ಪ್ರತಿಭೆಯೂ ಹೌದಾಗಿದ್ದು, ಇದನ್ನು ಪ್ರೋತ್ಸಾಹಿಸಲು ಕಾರ್ಯಕ್ರಮ ಆಯೋಜಿಸಲಾಗಿದೆ’ ಎಂದರು.</p>.<p>ಮೂವತ್ತಕ್ಕೂ ಹೆಚ್ಚು ಆಸಕ್ತರು ಸ್ಪರ್ಧೆಯಲ್ಲಿ ಕೈಯ್ಯಲ್ಲಿ ಚಕ್ಕುಲಿ ಸುತ್ತಿದರು. ವಯಸ್ಸಿನ ಭೇದವಿಲ್ಲದೆ ವೃದ್ಧರು, ಮಹಿಳೆಯರು, ಯುವಕರು ಪಾಲ್ಗೊಂಡಿದ್ದರು.</p>.<p>ಅಕ್ಕಿ ಹಿಟ್ಟಿನ ಹೊರತಾಗಿ ಬೀಟ್ರೂಟ್, ಬೆಳ್ಳುಳ್ಳಿ, ಕ್ಯಾರೆಟ್, ಬಾಳೆಕಾಯಿ ಸೇರಿದಂತೆ ವಿವಿಧ ಬಗೆಯ ತರಕಾರಿಗಳಿಂದ ಸಿದ್ಧಪಡಿಸಿದ್ದ ಇಪ್ಪತ್ತೈದಕ್ಕೂ ಹೆಚ್ಚು ಬಗೆಯ ಚಕ್ಕುಲಿಗಳನ್ನು ಪ್ರದರ್ಶಿಸಲಾಯಿತು.</p>.<p>ವ್ಯವಸ್ಥಾಪಕ ವಿಶ್ವೇಶ್ವರ ಭಟ್ಟ, ನಿರ್ದೇಶಕರಾದ ಪ್ರತಿಭಾ ಬೆಳಲೆ, ಆಶಾ ಹೆಗಡೆ, ಗಣಪತಿ ಹೆಗಡೆ ಮುರೇಗಾರ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>