<p><strong>ಹೊನ್ನಾವರ:</strong> ‘ಧರ್ಮಸ್ಥಳ ಕೇತ್ರದ ವಿರುದ್ಧ ಅಪಪ್ರಚಾರ ನಡೆಸುತ್ತಿರುವವರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಜೊತೆ ಇರುವ ಎಡಪಂಥೀಯರು ಹಾಗೂ ಅನ್ಯಧರ್ಮೀಯರು ರಕ್ಷಣೆ ಕೊಟ್ಟಿದ್ದಾರೆ’ ಎಂದು ಸಾಮಾಜಿಕ ಕಾರ್ಯಕರ್ತ ಚಕ್ರವರ್ತಿ ಸೂಲಿಬೆಲೆ ಆರೋಪಿಸಿದರು.</p>.<p>ಧರ್ಮಸ್ಥಳದ ವಿರುದ್ಧ ಅಪಪ್ರಚಾರ ಖಂಡಿಸಿ ಪಟ್ಟಣದ ನಾಮಧಾರಿ ಸಭಾಭವನದ ಆವರಣದಲ್ಲಿ ಬುಧವಾರ ನಡೆದ ‘ಜನಾಗ್ರಹ ಧರ್ಮಸಭೆ’ಯಲ್ಲಿ ಮಾತನಾಡಿದರು.</p>.<p>ಧರ್ಮಸ್ಥಳ ಹಾಗೂ ಧರ್ಮಾಧಿಕಾರಿ ವೀರೇಂದ್ರ ಹೆಗ್ಗಡೆ ವಿರುದ್ಧ ನಿರಂತರವಾಗಿ ಅಪಪ್ರಚಾರ ನಡೆಸಿದರೂ ಹಿಂದೂಗಳು ಒಗ್ಗಟ್ಟಾಗಿ ಪ್ರತಿಭಟಿಸಲಿಲ್ಲ. ಜಿಹಾದಿಗಳು,ಎಡಪಂಥೀಯರು, ಕೆಲ ಹಿಂದೂಗಳು ಹಾಗೂ ಕಾಂಗ್ರೆಸ್ ಪಕ್ಷದವರು ಹಿಂದೂಗಳು ಒಗ್ಗಟ್ಟಾಗಲು ಬಿಡುತ್ತಿಲ್ಲ’ ಎಂದರು.</p>.<p>ನಾಗೇಶ ಕಾಮತ ಮಾತನಾಡಿದರು. ಪಟ್ಟಣ ಪಂಚಾಯಿತಿ ಅಧ್ಯಕ್ಷ ವಿಜಯ ಕಾಮತ, ಬಿಜೆಪಿ ಜಿಲ್ಲಾ ಘಟಕದ ಅಧ್ಯಕ್ಷ ಎನ್.ಎಸ್.ಹೆಗಡೆ, ಮಂಡಲ ಅಧ್ಯಕ್ಷ ಮಂಜುನಾಥ ನಾಯ್ಕ,ರಾಜು ಭಂಡಾರಿ,ಗಣಪತಿ ನಾಯ್ಕ ಬಿಟಿ, ಸಂಜು ಶೇಟ್, ಯೋಗೀಶ ಮೇಸ್ತ, ವಿಶ್ವನಾಥ ನಾಯಕ ಭಾಗವಹಿಸಿದ್ದರು.</p>.<p>ಮೆರವಣಿಗೆಯಲ್ಲಿ ತೆರಳಿದ ಪ್ರತಿಭಟನಾಕಾರರು ತಹಶೀಲ್ದಾರ್ಗೆ ಮನವಿ ಸಲ್ಲಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹೊನ್ನಾವರ:</strong> ‘ಧರ್ಮಸ್ಥಳ ಕೇತ್ರದ ವಿರುದ್ಧ ಅಪಪ್ರಚಾರ ನಡೆಸುತ್ತಿರುವವರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಜೊತೆ ಇರುವ ಎಡಪಂಥೀಯರು ಹಾಗೂ ಅನ್ಯಧರ್ಮೀಯರು ರಕ್ಷಣೆ ಕೊಟ್ಟಿದ್ದಾರೆ’ ಎಂದು ಸಾಮಾಜಿಕ ಕಾರ್ಯಕರ್ತ ಚಕ್ರವರ್ತಿ ಸೂಲಿಬೆಲೆ ಆರೋಪಿಸಿದರು.</p>.<p>ಧರ್ಮಸ್ಥಳದ ವಿರುದ್ಧ ಅಪಪ್ರಚಾರ ಖಂಡಿಸಿ ಪಟ್ಟಣದ ನಾಮಧಾರಿ ಸಭಾಭವನದ ಆವರಣದಲ್ಲಿ ಬುಧವಾರ ನಡೆದ ‘ಜನಾಗ್ರಹ ಧರ್ಮಸಭೆ’ಯಲ್ಲಿ ಮಾತನಾಡಿದರು.</p>.<p>ಧರ್ಮಸ್ಥಳ ಹಾಗೂ ಧರ್ಮಾಧಿಕಾರಿ ವೀರೇಂದ್ರ ಹೆಗ್ಗಡೆ ವಿರುದ್ಧ ನಿರಂತರವಾಗಿ ಅಪಪ್ರಚಾರ ನಡೆಸಿದರೂ ಹಿಂದೂಗಳು ಒಗ್ಗಟ್ಟಾಗಿ ಪ್ರತಿಭಟಿಸಲಿಲ್ಲ. ಜಿಹಾದಿಗಳು,ಎಡಪಂಥೀಯರು, ಕೆಲ ಹಿಂದೂಗಳು ಹಾಗೂ ಕಾಂಗ್ರೆಸ್ ಪಕ್ಷದವರು ಹಿಂದೂಗಳು ಒಗ್ಗಟ್ಟಾಗಲು ಬಿಡುತ್ತಿಲ್ಲ’ ಎಂದರು.</p>.<p>ನಾಗೇಶ ಕಾಮತ ಮಾತನಾಡಿದರು. ಪಟ್ಟಣ ಪಂಚಾಯಿತಿ ಅಧ್ಯಕ್ಷ ವಿಜಯ ಕಾಮತ, ಬಿಜೆಪಿ ಜಿಲ್ಲಾ ಘಟಕದ ಅಧ್ಯಕ್ಷ ಎನ್.ಎಸ್.ಹೆಗಡೆ, ಮಂಡಲ ಅಧ್ಯಕ್ಷ ಮಂಜುನಾಥ ನಾಯ್ಕ,ರಾಜು ಭಂಡಾರಿ,ಗಣಪತಿ ನಾಯ್ಕ ಬಿಟಿ, ಸಂಜು ಶೇಟ್, ಯೋಗೀಶ ಮೇಸ್ತ, ವಿಶ್ವನಾಥ ನಾಯಕ ಭಾಗವಹಿಸಿದ್ದರು.</p>.<p>ಮೆರವಣಿಗೆಯಲ್ಲಿ ತೆರಳಿದ ಪ್ರತಿಭಟನಾಕಾರರು ತಹಶೀಲ್ದಾರ್ಗೆ ಮನವಿ ಸಲ್ಲಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>