<p><strong>ಕಾರವಾರ:</strong> ‘ದೇಶದ ಉಜ್ವಲ ಭವಿಷ್ಯಕ್ಕೆ ಮಕ್ಕಳನ್ನು ದೇಶಪ್ರೇಮಿಗಳಾಗಿ, ಸಮಾಜಕ್ಕೆ ಉತ್ತಮ ವ್ಯಕ್ತಿಗಳಾಗಿ ರೂಪಿಸುವ ಹೊಣೆಗಾರಿಕೆ ಪ್ರತಿಯೊಬ್ಬ ಪಾಲಕರ ಮೇಲಿದೆ’ ಎಂದು ಜಿಲ್ಲಾ ಪಂಚಾಯಿತಿ ಸಿಇಒ ಡಾ.ದಿಲೀಷ್ ಶಶಿ ಹೇಳಿದರು.</p>.<p>ಇಲ್ಲಿನ ಪೊಲೀಸ್ ಕಲ್ಯಾಣ ಮಂಟಪದಲ್ಲಿ ಶುಕ್ರವಾರ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯು ಹಮ್ಮಿಕೊಂಡಿದ್ದ ಮಕ್ಕಳ ಹಬ್ಬ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.</p>.<p>‘ಮಕ್ಕಳ ಆಸಕ್ತಿಗೆ ಪಾಲಕರು, ಸಮಾಜ ಪ್ರೋತ್ಸಾಹ ನೀಡಬೇಕು. ಅವರ ಆಸೆ, ಕನಸುಗಳು ಆರಂಭದಲ್ಲೇ ಕಮರಿಹೋಗಲು ಅವಕಾಶ ನೀಡಬಾರದು. ಉತ್ತಮ ಶಿಕ್ಷಣ, ಸಂಸ್ಕಾರ ಒದಗಿಸುವುದು ಆದ್ಯತೆಯಾಗಬೇಕು. ಪ್ರತಿಭೆಗಳಿಗೆ ಪ್ರೋತ್ಸಾಹ ಸಿಕ್ಕರೆ ಭವಿಷ್ಯದಲ್ಲಿ ಜಾಗತಿಕಮಟ್ಟದಲ್ಲಿ ಹೆಸರು ಮಾಡುವ ಕಲಾವಿದರಾಗಬಹುದು’ ಎಂದರು.</p>.<p>ನಗರಸಭೆ ಅಧ್ಯಕ್ಷ ರವಿರಾಜ್ ಅಂಕೋಲೇಕರ ಮಾತನಾಡಿ, ‘ಮಕ್ಕಳಿಂದ ಮೊಬೈಲ್ ಮತ್ತು ಫಾಸ್ಟ್ಫುಡ್ ಅನ್ನು ದೂರವಿಡಬೇಕು. ಪೋಷಕರು ಮಕ್ಕಳನ್ನು ಶಾಲೆಗೆ ಕಳುಹಿಸುವಾಗ ಮನೆಯಲ್ಲಿ ತಯಾರಿಸಿದ ಉಪಾಹಾರವನ್ನು ನೀಡಬೇಕು’ ಎಂದರು.</p>.<p>ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪ ನಿರ್ದೇಶಕ ಬಿ.ಎಚ್. ಕೃಷ್ಣಪ್ಪ ಮಾತನಾಡಿ, ‘ಮಕ್ಕಳ ಹಕ್ಕುಗಳ ರಕ್ಷಣೆಗೆ ಪ್ರತಿಯೊಬ್ಬರೂ ಕೈಜೋಡಿಸಬೇಕು’ ಎಂದರು.</p>.<p>ಕಾರ್ಯಕ್ರಮದ ಅಂಗವಾಗಿ ಮಕ್ಕಳಿಗೆ ಛದ್ಮವೇಷ ಹಾಗೂ ಇನ್ನಿತರ ಸ್ಪರ್ಧೆಗಳನ್ನು ಹಮ್ಮಿಕೊಳ್ಳಲಾಯಿತು. ಬಿ.ಎನ್. ಸೂರ್ಯ ಪ್ರಕಾಶ ಸ್ವಾಗತಿಸಿ, ಕಾರ್ಯಕ್ರಮ ನಿರೂಪಿಸಿದರು. ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸಹಾಯಕ ನಿರ್ದೇಶಕ ರವಿ ನಾಯಕ ವಂದಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕಾರವಾರ:</strong> ‘ದೇಶದ ಉಜ್ವಲ ಭವಿಷ್ಯಕ್ಕೆ ಮಕ್ಕಳನ್ನು ದೇಶಪ್ರೇಮಿಗಳಾಗಿ, ಸಮಾಜಕ್ಕೆ ಉತ್ತಮ ವ್ಯಕ್ತಿಗಳಾಗಿ ರೂಪಿಸುವ ಹೊಣೆಗಾರಿಕೆ ಪ್ರತಿಯೊಬ್ಬ ಪಾಲಕರ ಮೇಲಿದೆ’ ಎಂದು ಜಿಲ್ಲಾ ಪಂಚಾಯಿತಿ ಸಿಇಒ ಡಾ.ದಿಲೀಷ್ ಶಶಿ ಹೇಳಿದರು.</p>.<p>ಇಲ್ಲಿನ ಪೊಲೀಸ್ ಕಲ್ಯಾಣ ಮಂಟಪದಲ್ಲಿ ಶುಕ್ರವಾರ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯು ಹಮ್ಮಿಕೊಂಡಿದ್ದ ಮಕ್ಕಳ ಹಬ್ಬ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.</p>.<p>‘ಮಕ್ಕಳ ಆಸಕ್ತಿಗೆ ಪಾಲಕರು, ಸಮಾಜ ಪ್ರೋತ್ಸಾಹ ನೀಡಬೇಕು. ಅವರ ಆಸೆ, ಕನಸುಗಳು ಆರಂಭದಲ್ಲೇ ಕಮರಿಹೋಗಲು ಅವಕಾಶ ನೀಡಬಾರದು. ಉತ್ತಮ ಶಿಕ್ಷಣ, ಸಂಸ್ಕಾರ ಒದಗಿಸುವುದು ಆದ್ಯತೆಯಾಗಬೇಕು. ಪ್ರತಿಭೆಗಳಿಗೆ ಪ್ರೋತ್ಸಾಹ ಸಿಕ್ಕರೆ ಭವಿಷ್ಯದಲ್ಲಿ ಜಾಗತಿಕಮಟ್ಟದಲ್ಲಿ ಹೆಸರು ಮಾಡುವ ಕಲಾವಿದರಾಗಬಹುದು’ ಎಂದರು.</p>.<p>ನಗರಸಭೆ ಅಧ್ಯಕ್ಷ ರವಿರಾಜ್ ಅಂಕೋಲೇಕರ ಮಾತನಾಡಿ, ‘ಮಕ್ಕಳಿಂದ ಮೊಬೈಲ್ ಮತ್ತು ಫಾಸ್ಟ್ಫುಡ್ ಅನ್ನು ದೂರವಿಡಬೇಕು. ಪೋಷಕರು ಮಕ್ಕಳನ್ನು ಶಾಲೆಗೆ ಕಳುಹಿಸುವಾಗ ಮನೆಯಲ್ಲಿ ತಯಾರಿಸಿದ ಉಪಾಹಾರವನ್ನು ನೀಡಬೇಕು’ ಎಂದರು.</p>.<p>ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪ ನಿರ್ದೇಶಕ ಬಿ.ಎಚ್. ಕೃಷ್ಣಪ್ಪ ಮಾತನಾಡಿ, ‘ಮಕ್ಕಳ ಹಕ್ಕುಗಳ ರಕ್ಷಣೆಗೆ ಪ್ರತಿಯೊಬ್ಬರೂ ಕೈಜೋಡಿಸಬೇಕು’ ಎಂದರು.</p>.<p>ಕಾರ್ಯಕ್ರಮದ ಅಂಗವಾಗಿ ಮಕ್ಕಳಿಗೆ ಛದ್ಮವೇಷ ಹಾಗೂ ಇನ್ನಿತರ ಸ್ಪರ್ಧೆಗಳನ್ನು ಹಮ್ಮಿಕೊಳ್ಳಲಾಯಿತು. ಬಿ.ಎನ್. ಸೂರ್ಯ ಪ್ರಕಾಶ ಸ್ವಾಗತಿಸಿ, ಕಾರ್ಯಕ್ರಮ ನಿರೂಪಿಸಿದರು. ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸಹಾಯಕ ನಿರ್ದೇಶಕ ರವಿ ನಾಯಕ ವಂದಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>