<p><strong>ಕಾರವಾರ</strong>: ಮಣಿಪುರದಲ್ಲಿ ನಡೆದ ಹಿಂಸಾಚಾರ ಖಂಡಿಸಿ ಕಾರವಾರ ಧರ್ಮಪ್ರಾಂತ್ಯ ಮತ್ತು ಜಿಲ್ಲೆಯ ಕ್ರೈಸ್ತ ಸಂಘಟನೆಗಳು ಸೋಮವಾರ ನಗರದಲ್ಲಿ ಪ್ರತಿಭಟನೆ ನಡೆಸಿದರು.</p><p>ಇಲ್ಲಿನ ಮಿತ್ರ ಸಮಾಜ ಮೈದಾನದಿಂದ ಮೆರವಣಿಗೆ ಆರಂಭಿಸಲಾಯಿತು. ಜಿಲ್ಲೆಯ ವಿವಿಧೆಡೆಗಳಿಂದ ನೂರಾರು ಸಂಖ್ಯೆಯಲ್ಲಿ ಜನರು ಪಾಲ್ಗೊಂಡಿದ್ದರು. ಯಾವುದೇ ಘೋಷಣೆ ಕೂಗದೆ ಮೌನವಾಗಿ ಹೆಜ್ಜೆ ಹಾಕಿದರು. ಹಿಂಸೆ ಬೇಡ ಶಾಂತಿ ಬೇಕು, ಮೌನ ಬೇಡ ಶಾಂತಿ ಬೇಕು ಎಂಬ ಭಿತ್ತಿ ಫಲಕ ಪ್ರದರ್ಶಿಸಲಾಯಿತು.</p><p>ಜಿಲ್ಲಾಧಿಕಾರಿ ಕಚೇರಿ ಎದುರು ಸಾಂಕೇತಿಕ ಪ್ರತಿಭಟನೆ ನಡೆಸಿದ ಕ್ರೈಸ್ತ ಸಮುದಾಯದವರು ಹಿಂಸಾಚಾರಕ್ಕೆ ತುತ್ತಾಗಿ ನೆಲೆ ಕಳೆದುಕೊಂಡವರಿಗೆ ನ್ಯಾಯ ಒದಗಿಸಲು ಒತ್ತಾಯಿಸಿದರು.</p><p>ಹಿಂಸಾಚಾರದಲ್ಲಿ ಹಲವಾರು ಅಮಾಯಕರು ಕೊಲ್ಲಲ್ಪಟ್ಟಿದ್ದಾರೆ. ದಂಗೆಯಲ್ಲಿ 400ಕ್ಕೂ ಅಧಿಕ ಪ್ರಾರ್ಥನಾ ಮಂದಿರಗಳನ್ನು ಕಿಡಿಗೇಡಿಗಳು, ದುಷ್ಕರ್ಮಿಗಳು ಧ್ವಂಸಗೊಳಿಸಿದ್ದಾರೆ. ಮಹಿಳೆಯರನ್ನು ಅಮಾನುಷವಾಗಿ ನಡೆಸಿಕೊಳ್ಳಲಾಗಿದೆ ಎಂದು ಆರೋಪಿಸಿದರು.</p><p>ನಾಗರಿಕ ಸಮಾಜ ತಲೆತಗ್ಗಿಸುವ ಘಟನೆಯನ್ನು ದೇಶ ಒಕ್ಕೊರಲಿನಿಂದ ಖಂಡಿಸಬೇಕು ಎಂದು ಒತ್ತಾಯಿಸಿದರು.</p><p>ಪ್ರತಿಭಟನೆ ನೇತೃತ್ವ ವಹಿಸಿದ್ದ ಬೆಳಗಾವಿ ಧರ್ಮಪ್ರಾಂತ್ಯದ ಅಧ್ಯಕ್ಷ ಡೆರಿಕ್ ಫರ್ನಾಂಡಿಸ್, 'ಜನಾಂಗೀಯ ವೈಷಮ್ಯದ ಕೃತ್ಯ ತಲೆತಗ್ಗಿಸುವಂತಿದೆ. ಅಮಾಯಕರ ಮೇಲೆ ಹಿಂಸಾಚಾರ ನಡೆಸಿದ್ದು ತಪ್ಪು. ಸಂತ್ರಸ್ತರಿಗೆ ನ್ಯಾಯ ಸಿಗಲಿ' ಎಂದರು.</p><p>ಸೈಮನ್ ಟೆಲ್ಲಿಸ್, ಸಿಕ್ವೆರಾ, ಸೆಲ್ವದೋರ್ ರೋಡ್ರಿಗಸ್, ಪೀಟರ್ ಗೊನ್ಸಾಲ್ವಿಸ್, ಸ್ಯಾಮ್ಸನ್ ಡಿಸೋಜಾ, ಅಲ್ಫಾನ್ಸೊ ಸ್ಟ್ಯಾನಿ, ಫ್ರ್ಯಾಂಕಿ ಗುಡ್ಹೊನೊ, ಜಾರ್ಜ್ ಫರ್ನಾಂಡಿಸ್, ಲಿಯೊ ಲೂಯಿಸ್, ಇತರರು ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕಾರವಾರ</strong>: ಮಣಿಪುರದಲ್ಲಿ ನಡೆದ ಹಿಂಸಾಚಾರ ಖಂಡಿಸಿ ಕಾರವಾರ ಧರ್ಮಪ್ರಾಂತ್ಯ ಮತ್ತು ಜಿಲ್ಲೆಯ ಕ್ರೈಸ್ತ ಸಂಘಟನೆಗಳು ಸೋಮವಾರ ನಗರದಲ್ಲಿ ಪ್ರತಿಭಟನೆ ನಡೆಸಿದರು.</p><p>ಇಲ್ಲಿನ ಮಿತ್ರ ಸಮಾಜ ಮೈದಾನದಿಂದ ಮೆರವಣಿಗೆ ಆರಂಭಿಸಲಾಯಿತು. ಜಿಲ್ಲೆಯ ವಿವಿಧೆಡೆಗಳಿಂದ ನೂರಾರು ಸಂಖ್ಯೆಯಲ್ಲಿ ಜನರು ಪಾಲ್ಗೊಂಡಿದ್ದರು. ಯಾವುದೇ ಘೋಷಣೆ ಕೂಗದೆ ಮೌನವಾಗಿ ಹೆಜ್ಜೆ ಹಾಕಿದರು. ಹಿಂಸೆ ಬೇಡ ಶಾಂತಿ ಬೇಕು, ಮೌನ ಬೇಡ ಶಾಂತಿ ಬೇಕು ಎಂಬ ಭಿತ್ತಿ ಫಲಕ ಪ್ರದರ್ಶಿಸಲಾಯಿತು.</p><p>ಜಿಲ್ಲಾಧಿಕಾರಿ ಕಚೇರಿ ಎದುರು ಸಾಂಕೇತಿಕ ಪ್ರತಿಭಟನೆ ನಡೆಸಿದ ಕ್ರೈಸ್ತ ಸಮುದಾಯದವರು ಹಿಂಸಾಚಾರಕ್ಕೆ ತುತ್ತಾಗಿ ನೆಲೆ ಕಳೆದುಕೊಂಡವರಿಗೆ ನ್ಯಾಯ ಒದಗಿಸಲು ಒತ್ತಾಯಿಸಿದರು.</p><p>ಹಿಂಸಾಚಾರದಲ್ಲಿ ಹಲವಾರು ಅಮಾಯಕರು ಕೊಲ್ಲಲ್ಪಟ್ಟಿದ್ದಾರೆ. ದಂಗೆಯಲ್ಲಿ 400ಕ್ಕೂ ಅಧಿಕ ಪ್ರಾರ್ಥನಾ ಮಂದಿರಗಳನ್ನು ಕಿಡಿಗೇಡಿಗಳು, ದುಷ್ಕರ್ಮಿಗಳು ಧ್ವಂಸಗೊಳಿಸಿದ್ದಾರೆ. ಮಹಿಳೆಯರನ್ನು ಅಮಾನುಷವಾಗಿ ನಡೆಸಿಕೊಳ್ಳಲಾಗಿದೆ ಎಂದು ಆರೋಪಿಸಿದರು.</p><p>ನಾಗರಿಕ ಸಮಾಜ ತಲೆತಗ್ಗಿಸುವ ಘಟನೆಯನ್ನು ದೇಶ ಒಕ್ಕೊರಲಿನಿಂದ ಖಂಡಿಸಬೇಕು ಎಂದು ಒತ್ತಾಯಿಸಿದರು.</p><p>ಪ್ರತಿಭಟನೆ ನೇತೃತ್ವ ವಹಿಸಿದ್ದ ಬೆಳಗಾವಿ ಧರ್ಮಪ್ರಾಂತ್ಯದ ಅಧ್ಯಕ್ಷ ಡೆರಿಕ್ ಫರ್ನಾಂಡಿಸ್, 'ಜನಾಂಗೀಯ ವೈಷಮ್ಯದ ಕೃತ್ಯ ತಲೆತಗ್ಗಿಸುವಂತಿದೆ. ಅಮಾಯಕರ ಮೇಲೆ ಹಿಂಸಾಚಾರ ನಡೆಸಿದ್ದು ತಪ್ಪು. ಸಂತ್ರಸ್ತರಿಗೆ ನ್ಯಾಯ ಸಿಗಲಿ' ಎಂದರು.</p><p>ಸೈಮನ್ ಟೆಲ್ಲಿಸ್, ಸಿಕ್ವೆರಾ, ಸೆಲ್ವದೋರ್ ರೋಡ್ರಿಗಸ್, ಪೀಟರ್ ಗೊನ್ಸಾಲ್ವಿಸ್, ಸ್ಯಾಮ್ಸನ್ ಡಿಸೋಜಾ, ಅಲ್ಫಾನ್ಸೊ ಸ್ಟ್ಯಾನಿ, ಫ್ರ್ಯಾಂಕಿ ಗುಡ್ಹೊನೊ, ಜಾರ್ಜ್ ಫರ್ನಾಂಡಿಸ್, ಲಿಯೊ ಲೂಯಿಸ್, ಇತರರು ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>