<p><strong>ಕಾರವಾರ:</strong> ರಾಜ್ಯದಲ್ಲಿ ಕಾರ್ಮಿಕರ ಶೋಷಣೆಗೆ ಕಾರಣವಾಗುವ ನಾಲ್ಕು ಕಾರ್ಮಿಕ ಸಂಹಿತೆಗಳನ್ನು ರದ್ದುಪಡಿಸಬೇಕು ಎಂದು ಒತ್ತಾಯಿಸಿ ಸಿಐಟಿಯು ಜಿಲ್ಲಾ ಸಮಿತಿಯಿಂದ ಮಂಗಳವಾರ ಪ್ರತಿಭಟನೆ ನಡೆಸಲಾಯಿತು.</p>.<p>ಇಲ್ಲಿನ ಮಾಲಾದೇವಿ ಮೈದಾನದ ಬಳಿ ಕಾರ್ಮಿಕ ಸಂಹಿತೆಯ ಪ್ರತಿಕೃತಿ ಸುಟ್ಟು ಆಕ್ರೋಶ ವ್ಯಕ್ತಪಡಿಸಲಾಯಿತು. ಜಿಲ್ಲಾಧಿಕಾರಿ ಕಚೇರಿವರೆಗೆ ಪ್ರತಿಭಟನಕಾರರು ಮೆರವಣಿಗೆ ನಡೆಸಿದರು. ಬಳಿಕ ರಾಜ್ಯ ಸರ್ಕಾರಕ್ಕೆ ಬರೆದ ಮನವಿ ಪತ್ರವನ್ನು ಹೆಚ್ಚುವರಿ ಜಿಲ್ಲಾಧಿಕಾರಿ ಸಾಜಿದ್ ಮುಲ್ಲಾ ಅವರಿಗೆ ಸಲ್ಲಿಸಿದರು.</p>.<p>‘ಕೆಲಸದ ಅವಧಿ ಹೆಚ್ಚಳ ಆದೇಶ ಹಿಂಪಡೆಯಬೇಕು. ಕಾರ್ಮಿಕರಿಗೆ ಮಾಸಿಕ ₹36 ಸಾವಿರ ಸಮಾನ ಕನಿಷ್ಠ ವೇತನ ನಿಗದಿಪಡಿಸಬೇಕು. ₹8 ಸಾವಿರ ಸಾರ್ವತ್ರಿಕ ಪಿಂಚಣಿ ನೀಡಬೇಕು’ ಎಂದು ಒತ್ತಾಯಿಸಿದರು.</p>.<p>‘ಸಾರ್ವಜನಿಕ ಉದ್ದಿಮೆಗಳ ಖಾಸಗೀಕರಣ ನಿಲ್ಲಬೇಕು. ಉದ್ಯೋಗ ಖಾತ್ರಿ ಅಡಿ ವಾರ್ಷಿಕ 200 ದಿನ ಉದ್ಯೋಗ ಒದಗಿಸುವ ಜೊತೆಗೆ ಕೂಲಿದರವನ್ನು ಪ್ರತಿದಿನ ₹600 ನಿಗದಿಪಡಿಸಬೇಕು. ಯೋಜನಾ ಕಾರ್ಮಿಕರನ್ನು ಕನಿಷ್ಠ ವೇತನ ವ್ಯಾಪ್ತಿಗೆ ಒಳಪಡಿಸಿ, ಗ್ರಾಚ್ಯುಟಿ ಸೌಲಭ್ಯ ಕಲ್ಪಿಸಬೇಕು. ಗುತ್ತಿಗೆ ಕಾರ್ಮಿಕರ ಕಾಯಮಾತಿಗೆ ಶಾಸನ ರೂಪಿಸಬೇಕು’ ಎಂಬ ಬೇಡಿಕೆ ಮಂಡಿಸಿದರು.</p>.<p>ಸಿಐಟಿಯು ರಾಜ್ಯ ಘಟಕದ ಕಾರ್ಯದರ್ಶಿ ಯಮುನಾ ಗಾಂವ್ಕರ, ಎಸ್ಎಫ್ಐನ ವೀರೇಶ ರಾಠೋಡ್, ಮಂಜುಳಾ ಕಾಣಕೋಣಕರ್, ಮಾಯಾ ಕಾಣೆಕರ್, ಮಲ್ಲಿಕಾರ್ಜುನ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕಾರವಾರ:</strong> ರಾಜ್ಯದಲ್ಲಿ ಕಾರ್ಮಿಕರ ಶೋಷಣೆಗೆ ಕಾರಣವಾಗುವ ನಾಲ್ಕು ಕಾರ್ಮಿಕ ಸಂಹಿತೆಗಳನ್ನು ರದ್ದುಪಡಿಸಬೇಕು ಎಂದು ಒತ್ತಾಯಿಸಿ ಸಿಐಟಿಯು ಜಿಲ್ಲಾ ಸಮಿತಿಯಿಂದ ಮಂಗಳವಾರ ಪ್ರತಿಭಟನೆ ನಡೆಸಲಾಯಿತು.</p>.<p>ಇಲ್ಲಿನ ಮಾಲಾದೇವಿ ಮೈದಾನದ ಬಳಿ ಕಾರ್ಮಿಕ ಸಂಹಿತೆಯ ಪ್ರತಿಕೃತಿ ಸುಟ್ಟು ಆಕ್ರೋಶ ವ್ಯಕ್ತಪಡಿಸಲಾಯಿತು. ಜಿಲ್ಲಾಧಿಕಾರಿ ಕಚೇರಿವರೆಗೆ ಪ್ರತಿಭಟನಕಾರರು ಮೆರವಣಿಗೆ ನಡೆಸಿದರು. ಬಳಿಕ ರಾಜ್ಯ ಸರ್ಕಾರಕ್ಕೆ ಬರೆದ ಮನವಿ ಪತ್ರವನ್ನು ಹೆಚ್ಚುವರಿ ಜಿಲ್ಲಾಧಿಕಾರಿ ಸಾಜಿದ್ ಮುಲ್ಲಾ ಅವರಿಗೆ ಸಲ್ಲಿಸಿದರು.</p>.<p>‘ಕೆಲಸದ ಅವಧಿ ಹೆಚ್ಚಳ ಆದೇಶ ಹಿಂಪಡೆಯಬೇಕು. ಕಾರ್ಮಿಕರಿಗೆ ಮಾಸಿಕ ₹36 ಸಾವಿರ ಸಮಾನ ಕನಿಷ್ಠ ವೇತನ ನಿಗದಿಪಡಿಸಬೇಕು. ₹8 ಸಾವಿರ ಸಾರ್ವತ್ರಿಕ ಪಿಂಚಣಿ ನೀಡಬೇಕು’ ಎಂದು ಒತ್ತಾಯಿಸಿದರು.</p>.<p>‘ಸಾರ್ವಜನಿಕ ಉದ್ದಿಮೆಗಳ ಖಾಸಗೀಕರಣ ನಿಲ್ಲಬೇಕು. ಉದ್ಯೋಗ ಖಾತ್ರಿ ಅಡಿ ವಾರ್ಷಿಕ 200 ದಿನ ಉದ್ಯೋಗ ಒದಗಿಸುವ ಜೊತೆಗೆ ಕೂಲಿದರವನ್ನು ಪ್ರತಿದಿನ ₹600 ನಿಗದಿಪಡಿಸಬೇಕು. ಯೋಜನಾ ಕಾರ್ಮಿಕರನ್ನು ಕನಿಷ್ಠ ವೇತನ ವ್ಯಾಪ್ತಿಗೆ ಒಳಪಡಿಸಿ, ಗ್ರಾಚ್ಯುಟಿ ಸೌಲಭ್ಯ ಕಲ್ಪಿಸಬೇಕು. ಗುತ್ತಿಗೆ ಕಾರ್ಮಿಕರ ಕಾಯಮಾತಿಗೆ ಶಾಸನ ರೂಪಿಸಬೇಕು’ ಎಂಬ ಬೇಡಿಕೆ ಮಂಡಿಸಿದರು.</p>.<p>ಸಿಐಟಿಯು ರಾಜ್ಯ ಘಟಕದ ಕಾರ್ಯದರ್ಶಿ ಯಮುನಾ ಗಾಂವ್ಕರ, ಎಸ್ಎಫ್ಐನ ವೀರೇಶ ರಾಠೋಡ್, ಮಂಜುಳಾ ಕಾಣಕೋಣಕರ್, ಮಾಯಾ ಕಾಣೆಕರ್, ಮಲ್ಲಿಕಾರ್ಜುನ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>