<p>ದಾಂಡೇಲಿ: ನಗರದ ರೋಟರಿ ಕ್ಲಬ್ ವತಿಯಿಂದ ಅವಿಘ್ನ ರೀಲೆ 2024( ವಿದ್ಯಾರ್ಥಿಗಳಿಗೆ ಮಣ್ಣಿನಿಂದ ಗಣಪತಿ ತಯಾರಿಸುವ ಕಾರ್ಯಾಗಾರ) ಕಾರ್ಯಕ್ರಮ ನಗರದ ರೋಟರಿ ಶಾಲೆಯ ಆವರಣದಲ್ಲಿ ಇತ್ತೀಚೆಗೆ ನಡೆಯಿತು.</p>.<p>ಈ ರೀಲೆಯಲ್ಲಿ ಒಟ್ಟು 53 ವಿದ್ಯಾರ್ಥಿಗಳಿಗೆ ಮಣ್ಣಿನ ಗಣೇಶ ಮೂರ್ತಿ ಮಾಡುವ ಪ್ರಾತ್ಯಕ್ಷಿಕೆ ನೀಡಿ, ಮಣ್ಣಿನಿಂದ ಗಣಪತಿ ಮೂರ್ತಿ ತಯಾರಿಸಲಾಯಿತು.</p>.<p>ಪ್ರಕೃತಿಯಲ್ಲಿನ ವಸ್ತುಗಳಿಂದ ಪ್ರಕೃತಿಗೆ ಕೊಡುಗೆ ನೀಡುವ ಉದ್ದೇಶದಿಂದ ಈ ರೀಲೆಯಲ್ಲಿ ಮಣ್ಣಿನ ಗಣೇಶ ಮೂರ್ತಿಯಲ್ಲಿ ವಿವಿಧ ಜಾತಿ ಮರಗಳ ಬೀಜಗಳನ್ನು ಇಡಲಾಗಿದ್ದು, ಈ ಮೂರ್ತಿಗಳನ್ನು ಬಕೆಟ್ ನೀರಿನಲ್ಲಿ ಮುಳುಗಿಸಿ ಆನಂತರ ಅದರಲ್ಲಿನ ಬೀಜಗಳನ್ನು ಗಿಡವಾಗುವಂತೆ ಪೋಷಿಸುವಂತೆ ವಿದ್ಯಾರ್ಥಿಗಳಿಗೆ ತಿಳಿಸಲಾಯಿತು. ಉತ್ತಮ ಪರಿಸರ ಸ್ನೇಹಿ ಅಲಂಕಾರ ಮಾಡಿದ ವಿದ್ಯಾರ್ಥಿಗಳಿಗೆ ಬಹುಮಾನ ನೀಡಲಾಯಿತು.</p>.<p>ರೋಟರಿ ಕ್ಲಬ್ ಅಧ್ಯಕ್ಷ ರಾಹುಲ್ ಬಾವಾಜಿ, ಕಾರ್ಯದರ್ಶಿ ಅಶುತೋಷ್ ಕುಮಾರ್ ರೈ, ಖಜಾಂಚಿ ಲಿಯೋ ರಫೆಲ್ ಪಿಂಟೋ, ಪ್ರಕಾಶ್ ಕನ್ಮೆಹಳ್ಳಿ, ರೋಟರಿ ಎಚ್.ಎಂ.ಕಲ್ಪನಾ, ಚಿತ್ರಕಲಾ ಶಿಕ್ಷಕ ರವಿ ಶಾನಭಾಗ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ದಾಂಡೇಲಿ: ನಗರದ ರೋಟರಿ ಕ್ಲಬ್ ವತಿಯಿಂದ ಅವಿಘ್ನ ರೀಲೆ 2024( ವಿದ್ಯಾರ್ಥಿಗಳಿಗೆ ಮಣ್ಣಿನಿಂದ ಗಣಪತಿ ತಯಾರಿಸುವ ಕಾರ್ಯಾಗಾರ) ಕಾರ್ಯಕ್ರಮ ನಗರದ ರೋಟರಿ ಶಾಲೆಯ ಆವರಣದಲ್ಲಿ ಇತ್ತೀಚೆಗೆ ನಡೆಯಿತು.</p>.<p>ಈ ರೀಲೆಯಲ್ಲಿ ಒಟ್ಟು 53 ವಿದ್ಯಾರ್ಥಿಗಳಿಗೆ ಮಣ್ಣಿನ ಗಣೇಶ ಮೂರ್ತಿ ಮಾಡುವ ಪ್ರಾತ್ಯಕ್ಷಿಕೆ ನೀಡಿ, ಮಣ್ಣಿನಿಂದ ಗಣಪತಿ ಮೂರ್ತಿ ತಯಾರಿಸಲಾಯಿತು.</p>.<p>ಪ್ರಕೃತಿಯಲ್ಲಿನ ವಸ್ತುಗಳಿಂದ ಪ್ರಕೃತಿಗೆ ಕೊಡುಗೆ ನೀಡುವ ಉದ್ದೇಶದಿಂದ ಈ ರೀಲೆಯಲ್ಲಿ ಮಣ್ಣಿನ ಗಣೇಶ ಮೂರ್ತಿಯಲ್ಲಿ ವಿವಿಧ ಜಾತಿ ಮರಗಳ ಬೀಜಗಳನ್ನು ಇಡಲಾಗಿದ್ದು, ಈ ಮೂರ್ತಿಗಳನ್ನು ಬಕೆಟ್ ನೀರಿನಲ್ಲಿ ಮುಳುಗಿಸಿ ಆನಂತರ ಅದರಲ್ಲಿನ ಬೀಜಗಳನ್ನು ಗಿಡವಾಗುವಂತೆ ಪೋಷಿಸುವಂತೆ ವಿದ್ಯಾರ್ಥಿಗಳಿಗೆ ತಿಳಿಸಲಾಯಿತು. ಉತ್ತಮ ಪರಿಸರ ಸ್ನೇಹಿ ಅಲಂಕಾರ ಮಾಡಿದ ವಿದ್ಯಾರ್ಥಿಗಳಿಗೆ ಬಹುಮಾನ ನೀಡಲಾಯಿತು.</p>.<p>ರೋಟರಿ ಕ್ಲಬ್ ಅಧ್ಯಕ್ಷ ರಾಹುಲ್ ಬಾವಾಜಿ, ಕಾರ್ಯದರ್ಶಿ ಅಶುತೋಷ್ ಕುಮಾರ್ ರೈ, ಖಜಾಂಚಿ ಲಿಯೋ ರಫೆಲ್ ಪಿಂಟೋ, ಪ್ರಕಾಶ್ ಕನ್ಮೆಹಳ್ಳಿ, ರೋಟರಿ ಎಚ್.ಎಂ.ಕಲ್ಪನಾ, ಚಿತ್ರಕಲಾ ಶಿಕ್ಷಕ ರವಿ ಶಾನಭಾಗ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>