ಹಿಂದುಳಿದ ವರ್ಗದವರು, ನಾಮಧಾರಿಗಳು, ಲಿಂಗಾಯತರ ಪ್ರಾಬಲ್ಯ ಇರುವ ಇಲ್ಲಿನ ಮತಬ್ಯಾಂಕ್ ಉಳಿಸಿಕೊಳ್ಳಲು ಕಾಂಗ್ರೆಸ್ ಹವಣಿಸುತ್ತಿದೆ. ಕಾಂಗ್ರೆಸ್ ಅಭ್ಯರ್ಥಿ ಭೀಮಣ್ಣ ನಾಯ್ಕ ಅವರು ನಾಮಧಾರಿ ಸಮುದಾಯಕ್ಕೆ ಸೇರಿದವರಾಗಿದ್ದರಿಂದ, ಸಮುದಾಯದ ಮತಗಳನ್ನು ಗಟ್ಟಿಗೊಳಿಸಿಕೊಳ್ಳಲು ಹಾಗೂ ಮೂಲ ಮತ ಉಳಿಸಿಕೊಳ್ಳಲು ಕಾಂಗ್ರೆಸ್, ತಾರಾ ಪ್ರಚಾರಕರ ಮೂಲಕ ಮತಯಾಚಿಸುತ್ತಿದೆ.