‘ಯಲ್ಲಾಪುರ ಕ್ಷೇತ್ರದ 15 ಸಾವಿರ ಜನರು ಸಮಾವೇಶದಲ್ಲಿ ಪಾಲ್ಗೊಳ್ಳಲಿದ್ದಾರೆ. ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ ಅವರೂ ಸಮಾವೇಶದಲ್ಲಿ ಪಾಲ್ಗೊಳ್ಳಲಿದ್ದು, ಜಿಲ್ಲೆ ಹಾಗೂ ರಾಜ್ಯದ ಕಾಂಗ್ರೆಸ್ ಹಿರಿಯ ಮುಖಂಡರು, ಸಚಿವರು ಭಾಗವಹಿಸಲಿದ್ದಾರೆ. ಬೂತ್ಮಟ್ಟದಿಂದ ಹೆಚ್ಚಿನ ಸಂಖ್ಯೆಯ ಕಾರ್ಯಕರ್ತರು ಸಮಾವೇಶಕ್ಕೆ ಬರುವಂತೆ ಈಗಾಗಲೇ ಸೂಚನೆ ನೀಡಲಾಗಿದೆ. ಜಿಲ್ಲೆಯಲ್ಲಿ ಕಾಂಗ್ರೆಸ್ ಪರ ವಾತಾವರಣವಿದ್ದು, ಮುಖ್ಯಮಂತ್ರಿ ಕಾರ್ಯಕ್ರಮದಿಂದ, ಪಕ್ಷಕ್ಕೆ ಮತ್ತಷ್ಟು ಅನುಕೂಲವಾಗಲಿದೆ. ಕಾಂಗ್ರೆಸ್ ಪಕ್ಷದ ಮೇಲೆ ಭರವಸೆ ಇಟ್ಟಿರುವ ಎಲ್ಲರೂ ಈ ಸಮಾವೇಶದಲ್ಲಿ ಉತ್ಸಾಹದಿಂದ ಪಾಲ್ಗೊಳ್ಳಲಿದ್ದಾರೆ’ ಎಂದು ಜ್ಞಾನೇಶ್ವರ ಹೇಳಿದರು.