<p><strong>ಸಿದ್ದಾಪುರ</strong>: ತಾಲ್ಲೂಕಿನ ಹಾರ್ಸಿಕಟ್ಟಾ ವ್ಯವಸಾಯ ಸೇವಾ ಸಹಕಾರಿ ಸಂಘ 2023-24ನೇ ಸಾಲಿನಲ್ಲಿ ₹ 6.85 ಲಕ್ಷ ನಿವ್ವಳ ಲಾಭ ಹೊಂದಿದ್ದು ಸಂಘದ ಬೆಳವಣಿಗೆಗೆ ಪರಸ್ಪರ ಸಹಕಾರ ಮುಖ್ಯ ಎಂದು ಸಂಘದ ಅಧ್ಯಕ್ಷ ಮಹಾಬಲೇಶ್ವರ ದೇವರು ಭಟ್ಟ ಅಗ್ಗೇರೆ ಹೇಳಿದರು.</p>.<p>ಸಂಘದ ನಿವೇಶನದ ಗೋದಾಮಿನಲ್ಲಿ ಆಯೋಜಿಸಲಾಗಿದ್ದ ವಾರ್ಷಿಕ ಸರ್ವಸಾಧಾರಣ ಸಭೆಯ ಅಧ್ಯಕ್ಷತೆ ವಹಿಸಿ ಅವರು ಶುಕ್ರವಾರ ಮಾತನಾಡಿದರು.</p>.<p>ಸಂಘದಲ್ಲಿ 891 ಸದಸ್ಯರಿದ್ದು ₹1ಕೋಟಿ ಷೇರು ಬಂಡಾಳ ಹೊಂದಿದೆ. ₹2 ಕೋಟಿ ಠೇವಣಿಯನ್ನು ಹೊಂದಿದೆ. ಸಂಘದ ಸದಸ್ಯರ ಹಿತದೃಷ್ಠಿಯಿಂದ ಸಾಮಾನ್ಯ ಸೇವಾ ಕೇಂದ್ರ, ಆರ್ಟಿಜಿಎಸ್ ಹಾಗೂ ನೆಫ್ಟ್ ಸೇವೆ ನೀಡಲಾಗುತ್ತಿದೆ ಎಂದರು.</p>.<p>ನಿರ್ದೇಶಕರಾದ ಎ.ಜಿ.ಹೆಗಡೆ ಹಿರೇಕೈ, ಎ.ಆರ್.ಹೆಗಡೆ ಹೀನಗಾರ, ನಾಗರಾಜ ಹೆಗಡೆ ಹುಲಿಮನೆ, ಮಂಜುನಾಥ ನಾಯ್ಕ ತೆಂಗಿನಮನೆ, ವಿ.ಎಚ್.ಗೌಡ ಮಾದ್ಲಮನೆ, ಸುಮಾ ಹೆಗಡೆ ಹೊನ್ನೆಹದ್ದ, ನಾಗರಾಜ ಹೆಗಡೆ ಹೊಲಗದ್ದೆ, ಸುಧಾಕರ ಹರಿಜನ ಹೊನ್ನೆಹದ್ದ ಉಪಸ್ಥಿತರಿದ್ದರು.</p>.<p>ಇದೇ ಸಂದರ್ಭದಲ್ಲಿ ಸಂಘದ ಮೂಲಕ 2023-24ನೇ ಸಾಲಿನಲ್ಲಿ ಹೆಚ್ಚು ಮಹಸೂಲು ವಿಕ್ರಿಮಾಡಿದ ಸದಸ್ಯರಾದ ಭಾಸ್ಕರ ಸೂರಪ್ಪ ಹೆಗಡೆ ಅರಿಶಿನಗೋಡ, ಶ್ರೀಪಾದ ರಾಮ ಭಟ್ಟ ತಟ್ಟೀಸರ ಹಾಗೂ ಹುಲಿಯಾ ನಾರಾಯಣ ಗೌಡ ಕಲ್ಮನೆ ಇವರನ್ನು ಸನ್ಮಾನಿಸಲಾಯಿತು.</p>.<p>ನಿರ್ದೇಶಕ ಅನಂತ ಹೆಗಡೆ ಗೊಂಟನಾಳ ಸ್ವಾಗತಿಸಿ ಪ್ರಾಸ್ತಾವಿಕ ಮಾತನಾಡಿದರು. ಸಂಘದ ಮುಖ್ಯ ಕಾರ್ಯನಿರ್ವಹಣಾಧಿಕಾರಿ ದಿನೇಶ ಕೃಷ್ಣ ಹೆಗಡೆ ವರದಿ ವಾಚಿಸಿದರು. ಉಪಾಧ್ಯಕ್ಷೆ ಇಂದಿರಾ ಜಿ.ಹೆಗಡೆ ವಂದಿಸಿದರು. ಅನಂತ ಹೆಗಡೆ ಹೊಸಗದ್ದೆ ನಿರ್ವಹಿಸಿದರು. ಸಿಬ್ಬಂದಿ ಸಹಕರಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಸಿದ್ದಾಪುರ</strong>: ತಾಲ್ಲೂಕಿನ ಹಾರ್ಸಿಕಟ್ಟಾ ವ್ಯವಸಾಯ ಸೇವಾ ಸಹಕಾರಿ ಸಂಘ 2023-24ನೇ ಸಾಲಿನಲ್ಲಿ ₹ 6.85 ಲಕ್ಷ ನಿವ್ವಳ ಲಾಭ ಹೊಂದಿದ್ದು ಸಂಘದ ಬೆಳವಣಿಗೆಗೆ ಪರಸ್ಪರ ಸಹಕಾರ ಮುಖ್ಯ ಎಂದು ಸಂಘದ ಅಧ್ಯಕ್ಷ ಮಹಾಬಲೇಶ್ವರ ದೇವರು ಭಟ್ಟ ಅಗ್ಗೇರೆ ಹೇಳಿದರು.</p>.<p>ಸಂಘದ ನಿವೇಶನದ ಗೋದಾಮಿನಲ್ಲಿ ಆಯೋಜಿಸಲಾಗಿದ್ದ ವಾರ್ಷಿಕ ಸರ್ವಸಾಧಾರಣ ಸಭೆಯ ಅಧ್ಯಕ್ಷತೆ ವಹಿಸಿ ಅವರು ಶುಕ್ರವಾರ ಮಾತನಾಡಿದರು.</p>.<p>ಸಂಘದಲ್ಲಿ 891 ಸದಸ್ಯರಿದ್ದು ₹1ಕೋಟಿ ಷೇರು ಬಂಡಾಳ ಹೊಂದಿದೆ. ₹2 ಕೋಟಿ ಠೇವಣಿಯನ್ನು ಹೊಂದಿದೆ. ಸಂಘದ ಸದಸ್ಯರ ಹಿತದೃಷ್ಠಿಯಿಂದ ಸಾಮಾನ್ಯ ಸೇವಾ ಕೇಂದ್ರ, ಆರ್ಟಿಜಿಎಸ್ ಹಾಗೂ ನೆಫ್ಟ್ ಸೇವೆ ನೀಡಲಾಗುತ್ತಿದೆ ಎಂದರು.</p>.<p>ನಿರ್ದೇಶಕರಾದ ಎ.ಜಿ.ಹೆಗಡೆ ಹಿರೇಕೈ, ಎ.ಆರ್.ಹೆಗಡೆ ಹೀನಗಾರ, ನಾಗರಾಜ ಹೆಗಡೆ ಹುಲಿಮನೆ, ಮಂಜುನಾಥ ನಾಯ್ಕ ತೆಂಗಿನಮನೆ, ವಿ.ಎಚ್.ಗೌಡ ಮಾದ್ಲಮನೆ, ಸುಮಾ ಹೆಗಡೆ ಹೊನ್ನೆಹದ್ದ, ನಾಗರಾಜ ಹೆಗಡೆ ಹೊಲಗದ್ದೆ, ಸುಧಾಕರ ಹರಿಜನ ಹೊನ್ನೆಹದ್ದ ಉಪಸ್ಥಿತರಿದ್ದರು.</p>.<p>ಇದೇ ಸಂದರ್ಭದಲ್ಲಿ ಸಂಘದ ಮೂಲಕ 2023-24ನೇ ಸಾಲಿನಲ್ಲಿ ಹೆಚ್ಚು ಮಹಸೂಲು ವಿಕ್ರಿಮಾಡಿದ ಸದಸ್ಯರಾದ ಭಾಸ್ಕರ ಸೂರಪ್ಪ ಹೆಗಡೆ ಅರಿಶಿನಗೋಡ, ಶ್ರೀಪಾದ ರಾಮ ಭಟ್ಟ ತಟ್ಟೀಸರ ಹಾಗೂ ಹುಲಿಯಾ ನಾರಾಯಣ ಗೌಡ ಕಲ್ಮನೆ ಇವರನ್ನು ಸನ್ಮಾನಿಸಲಾಯಿತು.</p>.<p>ನಿರ್ದೇಶಕ ಅನಂತ ಹೆಗಡೆ ಗೊಂಟನಾಳ ಸ್ವಾಗತಿಸಿ ಪ್ರಾಸ್ತಾವಿಕ ಮಾತನಾಡಿದರು. ಸಂಘದ ಮುಖ್ಯ ಕಾರ್ಯನಿರ್ವಹಣಾಧಿಕಾರಿ ದಿನೇಶ ಕೃಷ್ಣ ಹೆಗಡೆ ವರದಿ ವಾಚಿಸಿದರು. ಉಪಾಧ್ಯಕ್ಷೆ ಇಂದಿರಾ ಜಿ.ಹೆಗಡೆ ವಂದಿಸಿದರು. ಅನಂತ ಹೆಗಡೆ ಹೊಸಗದ್ದೆ ನಿರ್ವಹಿಸಿದರು. ಸಿಬ್ಬಂದಿ ಸಹಕರಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>