‘ಪರೀಕ್ಷೆ ಕೇಂದ್ರಕ್ಕೆ ಎರಡು ತಾಸು ಮುನ್ನವೇ ಅಭ್ಯರ್ಥಿಗಳು ಹಾಜಾಗಿರಬೇಕು. ಕೇಂದ್ರಕ್ಕೆ ಶೂ,ಸಾಕ್ಸ್ ಧರಿಸಿ ಬರಲು ಅವಕಾಶವಿಲ್ಲ. ಎಲೆಕ್ಟ್ರಾನಿಕ್ ಉಪಕರಣ, ನೀರಿನ ಬಾಟಲಿ ತರುವಂತೆಯೂ ಇಲ್ಲ. ಧಾರ್ಮಿಕ ಆಚರಣೆಗೆ ಸಂಬಂಧಿಸಿದ ವಸ್ತುಗಳನ್ನು ಧರಿಸಿ ಬರುವ ಅಭ್ಯರ್ಥಿಗಳು ವಿಶೇಷ ತಪಾಸಣೆಗೆ ಒಳಪಡಬೇಕಾಗಿರುತ್ತದೆ. ಅಭ್ಯರ್ಥಿಗಳು ಕರ್ನಾಟಕ ಲೋಕಸೇವಾ ಆಯೋಗದ ಸೂಚನೆಗಳನ್ನು ಕಡ್ಡಾಯವಾಗಿ ಪಾಲಿಸಬೇಕಾಗುತ್ತದೆ’ ಎಂದು ಹೆಚ್ಚುವರಿ ಜಿಲ್ಲಾಧಿಕಾರಿ ಪ್ರಕಾಶ ರಜಪೂತ ಆದೇಶಿಸಿದ್ದಾರೆ.