<p><strong>ಯಲ್ಲಾಪುರ:</strong> ತಾಲ್ಲೂಕಿನ ದೇಹಳ್ಳಿ ಗ್ರಾಮದ ಕುಂಬ್ರಾಳದಲ್ಲಿ ಕಾಡಿನ ನಡುವೆ ಅನಧಿಕೃತವಾಗಿ ರಸ್ತೆ ನಿರ್ಮಾಣ ಆರೋಪದಲ್ಲಿ, ಸ್ಥಳೀಯ ಗ್ರಾಮ ಪಂಚಾಯಿತಿ ಅಧ್ಯಕ್ಷಶ್ರೀಪತಿ ಮುದ್ದೆಪಾಲ ವಿರುದ್ಧ ಅರಣ್ಯ ಇಲಾಖೆ ಪ್ರಕರಣ ದಾಖಲಿಸಿದೆ.</p>.<p>ದೇಹಳ್ಳಿ ಶಾಖೆಯ ಗಣೇಶಗುಡಿ ಬ್ಲಾಕ್ ಮತ್ತು ಕಂಪಾರ್ಟ್ಮೆಂಟ್ ಪ್ರದೇಶದಲ್ಲಿ 250 ಮೀಟರ್ ಉದ್ದಕ್ಕೆ ಅನಧಿಕೃತವಾಗಿ ರಸ್ತೆ ನಿರ್ಮಿಸಲಾಗಿದೆ. ಈ ಬಗ್ಗೆ ಗಣೇಶಗುಡಿ ಅರಣ್ಯ ರಕ್ಷಕರ ವರದಿ ಆಧರಿಸಿ ಮೇ 22ರಂದು ಪ್ರಕರಣ ದಾಖಲಿಸಲಾಗಿತ್ತು. ಅಲ್ಲದೇ ಇಲಾಖೆಯಿಂದ ಮುಳ್ಳು ತಂತಿ ಬೇಲಿ ಅಳವಡಿಸಲಾಗಿತ್ತು.</p>.<p>ಆದರೆ, ದೇಹಳ್ಳಿ ಶಾಖೆಯ ಉಪ ಅರಣ್ಯ ಸಂರಕ್ಷಣಾಧಿಕಾರಿ ಬೆತ್ತದ ನೆಡುತೋಪು ಕಾರ್ಯದಲ್ಲಿ ನಿರತರಾಗಿರುವುದನ್ನು ಗಮನಿಸಿ, ರಸ್ತೆ ಕಾಮಗಾರಿಯನ್ನು ಮುಂದುವರಿಸಲಾಗಿದೆ. 100 ಮೀಟರ್ಗಳಷ್ಟು ರಸ್ತೆ ನಿರ್ಮಿಸಿ, ಮರಗಳನ್ನು ಉರುಳಿಸಿ ಪಕ್ಕಕ್ಕೆ ದೂಡಲಾಗಿದೆ. ಈ ಬಗ್ಗೆ ದೇಹಳ್ಳಿ ಉಪ ಅರಣ್ಯ ಸಂರಕ್ಷಣಾಧಿಕಾರಿ ಮೇ 13ರಂದು ವರದಿ ನೀಡಿದ್ದರು. ಅದನ್ನು ಆಧರಿಸಿ ಅಂದೇ ಪ್ರಕರಣ ದಾಖಲಿಸಲಾಗಿದೆ.</p>.<p>‘ಡಿ.ಸಿ.ಎಫ್ ಗೋಪಾಲಕೃಷ್ಣ ಹೆಗಡೆ ಮಾರ್ಗದರ್ಶನದಲ್ಲಿ ಎ.ಸಿ.ಎಫ್ ಅಶೋಕ ಭಟ್ಟ ನೇತೃತ್ವದಲ್ಲಿ ತನಿಖೆ ನಡೆಸಲಾಗುತ್ತಿದೆ. ಅನಧಿಕೃತವಾಗಿ ನಿರ್ಮಿಸಲಾದ ರಸ್ತೆಯ ಎರಡೂ ಬದಿಗಳಲ್ಲಿ ಕಂದಕ ತೆಗೆದು ಸಸಿಗಳನ್ನು ನೆಡಲಾಗಿದೆ’ ಎಂದು ಆರ್.ಎಫ್.ಒ ಬಾಲಸುಬ್ರಹ್ಮಣ್ಯ ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಯಲ್ಲಾಪುರ:</strong> ತಾಲ್ಲೂಕಿನ ದೇಹಳ್ಳಿ ಗ್ರಾಮದ ಕುಂಬ್ರಾಳದಲ್ಲಿ ಕಾಡಿನ ನಡುವೆ ಅನಧಿಕೃತವಾಗಿ ರಸ್ತೆ ನಿರ್ಮಾಣ ಆರೋಪದಲ್ಲಿ, ಸ್ಥಳೀಯ ಗ್ರಾಮ ಪಂಚಾಯಿತಿ ಅಧ್ಯಕ್ಷಶ್ರೀಪತಿ ಮುದ್ದೆಪಾಲ ವಿರುದ್ಧ ಅರಣ್ಯ ಇಲಾಖೆ ಪ್ರಕರಣ ದಾಖಲಿಸಿದೆ.</p>.<p>ದೇಹಳ್ಳಿ ಶಾಖೆಯ ಗಣೇಶಗುಡಿ ಬ್ಲಾಕ್ ಮತ್ತು ಕಂಪಾರ್ಟ್ಮೆಂಟ್ ಪ್ರದೇಶದಲ್ಲಿ 250 ಮೀಟರ್ ಉದ್ದಕ್ಕೆ ಅನಧಿಕೃತವಾಗಿ ರಸ್ತೆ ನಿರ್ಮಿಸಲಾಗಿದೆ. ಈ ಬಗ್ಗೆ ಗಣೇಶಗುಡಿ ಅರಣ್ಯ ರಕ್ಷಕರ ವರದಿ ಆಧರಿಸಿ ಮೇ 22ರಂದು ಪ್ರಕರಣ ದಾಖಲಿಸಲಾಗಿತ್ತು. ಅಲ್ಲದೇ ಇಲಾಖೆಯಿಂದ ಮುಳ್ಳು ತಂತಿ ಬೇಲಿ ಅಳವಡಿಸಲಾಗಿತ್ತು.</p>.<p>ಆದರೆ, ದೇಹಳ್ಳಿ ಶಾಖೆಯ ಉಪ ಅರಣ್ಯ ಸಂರಕ್ಷಣಾಧಿಕಾರಿ ಬೆತ್ತದ ನೆಡುತೋಪು ಕಾರ್ಯದಲ್ಲಿ ನಿರತರಾಗಿರುವುದನ್ನು ಗಮನಿಸಿ, ರಸ್ತೆ ಕಾಮಗಾರಿಯನ್ನು ಮುಂದುವರಿಸಲಾಗಿದೆ. 100 ಮೀಟರ್ಗಳಷ್ಟು ರಸ್ತೆ ನಿರ್ಮಿಸಿ, ಮರಗಳನ್ನು ಉರುಳಿಸಿ ಪಕ್ಕಕ್ಕೆ ದೂಡಲಾಗಿದೆ. ಈ ಬಗ್ಗೆ ದೇಹಳ್ಳಿ ಉಪ ಅರಣ್ಯ ಸಂರಕ್ಷಣಾಧಿಕಾರಿ ಮೇ 13ರಂದು ವರದಿ ನೀಡಿದ್ದರು. ಅದನ್ನು ಆಧರಿಸಿ ಅಂದೇ ಪ್ರಕರಣ ದಾಖಲಿಸಲಾಗಿದೆ.</p>.<p>‘ಡಿ.ಸಿ.ಎಫ್ ಗೋಪಾಲಕೃಷ್ಣ ಹೆಗಡೆ ಮಾರ್ಗದರ್ಶನದಲ್ಲಿ ಎ.ಸಿ.ಎಫ್ ಅಶೋಕ ಭಟ್ಟ ನೇತೃತ್ವದಲ್ಲಿ ತನಿಖೆ ನಡೆಸಲಾಗುತ್ತಿದೆ. ಅನಧಿಕೃತವಾಗಿ ನಿರ್ಮಿಸಲಾದ ರಸ್ತೆಯ ಎರಡೂ ಬದಿಗಳಲ್ಲಿ ಕಂದಕ ತೆಗೆದು ಸಸಿಗಳನ್ನು ನೆಡಲಾಗಿದೆ’ ಎಂದು ಆರ್.ಎಫ್.ಒ ಬಾಲಸುಬ್ರಹ್ಮಣ್ಯ ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>