<p><strong>ಶಿರಸಿ: </strong>‘ಮಹಿಳೆಯರು ಸ್ವಾವಲಂಬಿಗಳಾದರೆ ದೇಶ ಸದೃಢವಾಗಬಲ್ಲದು ಎಂದು ನಂಬಿದ್ದ ಮಹಾತ್ಮ ಗಾಂಧೀಜಿ ಈ ದಿಶೆಯಲ್ಲಿ ನಿರಂತರ ಹೋರಾಟ ನಡೆಸಿದ್ದರು. ಅವರ ಕನಸು ನನಸು ಮಾಡುವುದು ಈ ಪೀಳಿಗೆಯ ಗುರಿಯಾಗಬೇಕು’ ಎಂದು ತಹಶೀಲ್ದಾರ್ ಶ್ರೀಧರ ಮುಂದಲಮನಿ ಹೇಳಿದರು.</p>.<p>‘ದೇಶಕ್ಕಾಗಿ ನಾವು’ ತಂಡ ಮತ್ತು ‘ಅನುಬಂಧ ಚಾರಿಟೇಬಲ್ ಟ್ರಸ್ಟ್’ ಜಂಟಿಯಾಗಿ ಇಲ್ಲಿನ ಭಾರತ ಸೇವಾದಳ ಕಚೇರಿಯಲ್ಲಿ ಸೋಮವಾರ ಆಯೋಜಿಸಿದ್ದ ಸತ್ಯಾಗ್ರಹಿ ಎಂಬ ಗಾಂಧಿ ವಿಚಾರ ಸಂಕಿರಣ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.</p>.<p>‘ಮಹಿಳೆಗೆ ಎಲ್ಲ ಕ್ಷೇತ್ರದಲ್ಲೂ ಸಮಾನತೆ ಪರಿಪೂರ್ಣವಾಗಿ ಸಿಗಬೇಕು. ಮಹಿಳೆಯರು ಎಲ್ಲ ಕ್ಷೇತ್ರದಲ್ಲೂ ಸಾಧನೆ ಮಾಡುತ್ತಿದ್ದು, ಸಮಾಜವೂ ಶಕ್ತಿ ನೀಡಬೇಕು’ ಎಂದರು.</p>.<p>ಟ್ರಸ್ಟ್ ಗೌರವ ಅಧ್ಯಕ್ಷ ಕೆ.ಎನ್.ಹೊಸ್ಮನಿ, ‘ಗಾಂಧೀಜಿ ಅವರ ವಿಚಾರಗಳು ಎಲ್ಲ ಕಾಲಕ್ಕೂ ಪ್ರಸ್ತುತ. ಅವರು ವಿಶ್ವವೇ ಒಪ್ಪುವ ನಾಯಕರಾಗಿದ್ದರು’ ಎಂದರು.</p>.<p>ಉಪನ್ಯಾಸ ನೀಡಿದ ವಕೀಲೆ ಸರಸ್ವತಿ ಹೆಗಡೆ, ‘ಸಂಕುಚಿತ ಮನೋಭಾವ, ಕೀಳರಿಮೆಯಿಂದ ಹೊರಬರಲು ಮಹಿಳೆಯರು ಗಾಂಧಿ ತತ್ವಗಳನ್ನು ಅಧ್ಯಯನ ಮಾಡಬೇಕು. ಆತ್ಮವಿಶ್ವಾಸ, ಜ್ಞಾನ ನಮ್ಮನ್ನು ಸಮಾಜದಲ್ಲಿ ಮುನ್ನಡೆಸುವ ಸಾಧನಗಳು’ ಎಂದರು.</p>.<p>ಅನುಬಂಧ ಚಾರಿಟೆಬಲ್ ಟ್ರಸ್ಟ್ ಅಧ್ಯಕ್ಷೆ ಜ್ಯೋತಿ ಗೌಡ ಪಾಟೀಲ್ ಪ್ರಾಸ್ತಾವಿಕವಾಗಿ ಮಾತನಾಡಿದರು. ದಸರಾ ಪ್ರಯುಕ್ತ ಟ್ರಸ್ಟ್ ವತಿಯಿಂದ ಆಶಾ ಕಾರ್ಯಕರ್ತೆಯರಿಗೆ ಬಾಗಿನ ಸಮರ್ಪಣೆ ಮಾಡಲಾಯಿತು.</p>.<p>ತಾಲ್ಲೂಕು ಆರೋಗ್ಯಾಧಿಕಾರಿ ಡಾ.ವಿನಾಯಕ ಭಟ್, ಸಾಮಾಜಿಕ ಕಾರ್ಯಕರ್ತರಾದ ಜಗದೀಶ ಗೌಡ, ಶ್ರೀಪಾದ ಹೆಗಡೆ ಕಡವೆ, ಅಶೋಕ ಭಜಂತ್ರಿ, ಶೋಭಾ ಗೌಡ, ಮೋಹಿನಿ ಬೈಲೂರ, ವಿಜಯಾ ದೇಶಪಾಂಡೆ ಇದ್ದರು.</p>.<p>ಟ್ರಸ್ಟ್ ಉಪಾಧ್ಯಕ್ಷ ಅರವಿಂದ ತೆಲಗುಂದ ಸ್ವಾಗತಿಸಿದರು. ಅಶ್ವಿನಿ ರವಿಕುಮಾರ್ ನಿರ್ವಹಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಶಿರಸಿ: </strong>‘ಮಹಿಳೆಯರು ಸ್ವಾವಲಂಬಿಗಳಾದರೆ ದೇಶ ಸದೃಢವಾಗಬಲ್ಲದು ಎಂದು ನಂಬಿದ್ದ ಮಹಾತ್ಮ ಗಾಂಧೀಜಿ ಈ ದಿಶೆಯಲ್ಲಿ ನಿರಂತರ ಹೋರಾಟ ನಡೆಸಿದ್ದರು. ಅವರ ಕನಸು ನನಸು ಮಾಡುವುದು ಈ ಪೀಳಿಗೆಯ ಗುರಿಯಾಗಬೇಕು’ ಎಂದು ತಹಶೀಲ್ದಾರ್ ಶ್ರೀಧರ ಮುಂದಲಮನಿ ಹೇಳಿದರು.</p>.<p>‘ದೇಶಕ್ಕಾಗಿ ನಾವು’ ತಂಡ ಮತ್ತು ‘ಅನುಬಂಧ ಚಾರಿಟೇಬಲ್ ಟ್ರಸ್ಟ್’ ಜಂಟಿಯಾಗಿ ಇಲ್ಲಿನ ಭಾರತ ಸೇವಾದಳ ಕಚೇರಿಯಲ್ಲಿ ಸೋಮವಾರ ಆಯೋಜಿಸಿದ್ದ ಸತ್ಯಾಗ್ರಹಿ ಎಂಬ ಗಾಂಧಿ ವಿಚಾರ ಸಂಕಿರಣ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.</p>.<p>‘ಮಹಿಳೆಗೆ ಎಲ್ಲ ಕ್ಷೇತ್ರದಲ್ಲೂ ಸಮಾನತೆ ಪರಿಪೂರ್ಣವಾಗಿ ಸಿಗಬೇಕು. ಮಹಿಳೆಯರು ಎಲ್ಲ ಕ್ಷೇತ್ರದಲ್ಲೂ ಸಾಧನೆ ಮಾಡುತ್ತಿದ್ದು, ಸಮಾಜವೂ ಶಕ್ತಿ ನೀಡಬೇಕು’ ಎಂದರು.</p>.<p>ಟ್ರಸ್ಟ್ ಗೌರವ ಅಧ್ಯಕ್ಷ ಕೆ.ಎನ್.ಹೊಸ್ಮನಿ, ‘ಗಾಂಧೀಜಿ ಅವರ ವಿಚಾರಗಳು ಎಲ್ಲ ಕಾಲಕ್ಕೂ ಪ್ರಸ್ತುತ. ಅವರು ವಿಶ್ವವೇ ಒಪ್ಪುವ ನಾಯಕರಾಗಿದ್ದರು’ ಎಂದರು.</p>.<p>ಉಪನ್ಯಾಸ ನೀಡಿದ ವಕೀಲೆ ಸರಸ್ವತಿ ಹೆಗಡೆ, ‘ಸಂಕುಚಿತ ಮನೋಭಾವ, ಕೀಳರಿಮೆಯಿಂದ ಹೊರಬರಲು ಮಹಿಳೆಯರು ಗಾಂಧಿ ತತ್ವಗಳನ್ನು ಅಧ್ಯಯನ ಮಾಡಬೇಕು. ಆತ್ಮವಿಶ್ವಾಸ, ಜ್ಞಾನ ನಮ್ಮನ್ನು ಸಮಾಜದಲ್ಲಿ ಮುನ್ನಡೆಸುವ ಸಾಧನಗಳು’ ಎಂದರು.</p>.<p>ಅನುಬಂಧ ಚಾರಿಟೆಬಲ್ ಟ್ರಸ್ಟ್ ಅಧ್ಯಕ್ಷೆ ಜ್ಯೋತಿ ಗೌಡ ಪಾಟೀಲ್ ಪ್ರಾಸ್ತಾವಿಕವಾಗಿ ಮಾತನಾಡಿದರು. ದಸರಾ ಪ್ರಯುಕ್ತ ಟ್ರಸ್ಟ್ ವತಿಯಿಂದ ಆಶಾ ಕಾರ್ಯಕರ್ತೆಯರಿಗೆ ಬಾಗಿನ ಸಮರ್ಪಣೆ ಮಾಡಲಾಯಿತು.</p>.<p>ತಾಲ್ಲೂಕು ಆರೋಗ್ಯಾಧಿಕಾರಿ ಡಾ.ವಿನಾಯಕ ಭಟ್, ಸಾಮಾಜಿಕ ಕಾರ್ಯಕರ್ತರಾದ ಜಗದೀಶ ಗೌಡ, ಶ್ರೀಪಾದ ಹೆಗಡೆ ಕಡವೆ, ಅಶೋಕ ಭಜಂತ್ರಿ, ಶೋಭಾ ಗೌಡ, ಮೋಹಿನಿ ಬೈಲೂರ, ವಿಜಯಾ ದೇಶಪಾಂಡೆ ಇದ್ದರು.</p>.<p>ಟ್ರಸ್ಟ್ ಉಪಾಧ್ಯಕ್ಷ ಅರವಿಂದ ತೆಲಗುಂದ ಸ್ವಾಗತಿಸಿದರು. ಅಶ್ವಿನಿ ರವಿಕುಮಾರ್ ನಿರ್ವಹಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>