<p><strong>ಶಿರಸಿ:</strong> 'ಕಾರವಾರ ಶಾಸಕಿ ರೂಪಾಲಿ ನಾಯ್ಕ ಅವರಿಗೆ ರಾಜ್ಯದಲ್ಲಿ ಯಾವ ಸರ್ಕಾರವಿದೆ ಎಂಬ ಅರಿವಿದೆಯೆ?' ಎಂದು ಕಾಂಗ್ರೆಸ್ ಜಿಲ್ಲಾ ಘಟಕದ ಅಧ್ಯಕ್ಷ ಭೀಮಣ್ಣ ನಾಯ್ಕ ಪ್ರಶ್ನಿಸಿದರು.</p>.<p>'ಜಿಲ್ಲಾ ವಕ್ಫ್ ಬೋರ್ಡ್ ಉಪಾಧ್ಯಕ್ಷ ಸ್ಥಾನಕ್ಕೆ ಆಜಾದ್ ಅಣ್ಣಿಗೇರಿ ನೇಮಿಸಿದ್ದರ ಹಿಂದೆ ಕಾಂಗ್ರೆಸ್ ಕೈವಾಡವಿದೆ ಎಂಬ ಶಾಸಕಿ ರೂಪಾಲಿ ನಾಯ್ಕ ಹೇಳಿಕೆಯನ್ನು ಕಾಂಗ್ರೆಸ್ ಖಂಡಿಸುತ್ತದೆ' ಎಂದು ಇಲ್ಲಿ ಶನಿವಾರ ನಡೆದ ಸುದ್ದಿಗೋಷ್ಠಿಯಲ್ಲಿ ಹೇಳಿದರು.</p>.<p>'ನೇಮಕ ಮಾಡುವ ಮುನ್ನ ವ್ಯಕ್ತಿಯ ಪೂರ್ವಾಪರದ ಬಗ್ಗೆ ಸರ್ಕಾರ ಅರಿತಿರಬೇಕು. ಆದರೆ ಪರೇಶ್ ಮೇಸ್ತ ಹತ್ಯೆಯಂತಹ ಗಂಭೀರ ಪ್ರಕರಣದಲ್ಲಿ ಆರೋಪಿಯಾಗಿರುವ ವ್ಯಕ್ತಿಯನ್ನು ನೇಮಿಸಿರುವುದು ಬಿಜೆಪಿ ಸರ್ಕಾರದ ನಿಷ್ಕ್ರೀಯತೆ ಎತ್ತಿ ತೋರಿಸಿದೆ' ಎಂದರು.</p>.<p>'ಶಾಸಕರು ಬೇಜವಬ್ದಾರಿತನ ಹೇಳಿಕೆ ನೀಡುವುದನ್ನು ಬಿಟ್ಟು ಜನರ ಕ್ಷಮೆ ಕೇಳಬೇಕು. ಜನರು ವಹಿಸಿದ ಜವಾಬ್ದಾರಿ ಮೊದಲು ನಿಭಾಯಿಸಲಿ. ಅದನ್ನು ಬಿಟ್ಟು ತಮ್ಮ ಹುಳುಕು ಮುಚ್ಚಿಕೊಳ್ಳಲು ಇಲ್ಲಸಲ್ಲದ ಆರೋಪ ಮಾಡುತ್ತಿರುವುದು ಸರಿಯಲ್ಲ' ಎಂದರು.</p>.<p>'ಆಜಾದ್ ಈ ಹಿಂದೆ ಕಾಂಗ್ರೆಸ್ ನಲ್ಲಿದ್ದುದು ನಿಜ. ಆರೋಪಿತರಾದ ಬಳಿಕ ಪಕ್ಷದ ಚಟುವಟಿಕೆಯಿಂದ ದೂರ ಇದ್ದಾರೆ' ಎಂದೂ ಪ್ರಶ್ನೆಯೊಂದಕ್ಕೆ ಉತ್ತರಿಸಿದರು.</p>.<p>'ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ವಕ್ಫ್ ಸಲಹಾ ಮಂಡಳಿಗೆ ಪದಾಧಿಕಾರಿಗಳ ಆಯ್ಕೆಗೆ ಕಾಂಗ್ರೆಸ್ ಕೂಡ ಪಟ್ಟಿ ನೀಡಿದೆ ಎಂದು ಹೇಳಿರುವುದು ಸತ್ಯಕ್ಕೆ ದೂರ. ನಮ್ಮಿಂದ ಪಟ್ಟಿ ಅಥವಾ ಶಿಫಾರಸ್ಸು ತವಾನೆಯಾಗಿದ್ದರೆ ಅದನ್ನು ಬಹಿರಂಗವಾಗಿ ಪ್ರದರ್ಶಿಸಲಿ' ಎಂದು ಸವಾಲೆಸೆದರು.</p>.<p>ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಎಸ್.ಕೆ.ಭಾಗವತ, ದೀಪಕ ದೊಡ್ಡೂರು, ಪ್ರದೀಪ ಶೆಟ್ಟಿ, ಜಗದೀಶ ಗೌಡ, ಶ್ರೀನಿವಾಸ ನಾಯ್ಕ, ರಘು ಕಾನಡೆ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಶಿರಸಿ:</strong> 'ಕಾರವಾರ ಶಾಸಕಿ ರೂಪಾಲಿ ನಾಯ್ಕ ಅವರಿಗೆ ರಾಜ್ಯದಲ್ಲಿ ಯಾವ ಸರ್ಕಾರವಿದೆ ಎಂಬ ಅರಿವಿದೆಯೆ?' ಎಂದು ಕಾಂಗ್ರೆಸ್ ಜಿಲ್ಲಾ ಘಟಕದ ಅಧ್ಯಕ್ಷ ಭೀಮಣ್ಣ ನಾಯ್ಕ ಪ್ರಶ್ನಿಸಿದರು.</p>.<p>'ಜಿಲ್ಲಾ ವಕ್ಫ್ ಬೋರ್ಡ್ ಉಪಾಧ್ಯಕ್ಷ ಸ್ಥಾನಕ್ಕೆ ಆಜಾದ್ ಅಣ್ಣಿಗೇರಿ ನೇಮಿಸಿದ್ದರ ಹಿಂದೆ ಕಾಂಗ್ರೆಸ್ ಕೈವಾಡವಿದೆ ಎಂಬ ಶಾಸಕಿ ರೂಪಾಲಿ ನಾಯ್ಕ ಹೇಳಿಕೆಯನ್ನು ಕಾಂಗ್ರೆಸ್ ಖಂಡಿಸುತ್ತದೆ' ಎಂದು ಇಲ್ಲಿ ಶನಿವಾರ ನಡೆದ ಸುದ್ದಿಗೋಷ್ಠಿಯಲ್ಲಿ ಹೇಳಿದರು.</p>.<p>'ನೇಮಕ ಮಾಡುವ ಮುನ್ನ ವ್ಯಕ್ತಿಯ ಪೂರ್ವಾಪರದ ಬಗ್ಗೆ ಸರ್ಕಾರ ಅರಿತಿರಬೇಕು. ಆದರೆ ಪರೇಶ್ ಮೇಸ್ತ ಹತ್ಯೆಯಂತಹ ಗಂಭೀರ ಪ್ರಕರಣದಲ್ಲಿ ಆರೋಪಿಯಾಗಿರುವ ವ್ಯಕ್ತಿಯನ್ನು ನೇಮಿಸಿರುವುದು ಬಿಜೆಪಿ ಸರ್ಕಾರದ ನಿಷ್ಕ್ರೀಯತೆ ಎತ್ತಿ ತೋರಿಸಿದೆ' ಎಂದರು.</p>.<p>'ಶಾಸಕರು ಬೇಜವಬ್ದಾರಿತನ ಹೇಳಿಕೆ ನೀಡುವುದನ್ನು ಬಿಟ್ಟು ಜನರ ಕ್ಷಮೆ ಕೇಳಬೇಕು. ಜನರು ವಹಿಸಿದ ಜವಾಬ್ದಾರಿ ಮೊದಲು ನಿಭಾಯಿಸಲಿ. ಅದನ್ನು ಬಿಟ್ಟು ತಮ್ಮ ಹುಳುಕು ಮುಚ್ಚಿಕೊಳ್ಳಲು ಇಲ್ಲಸಲ್ಲದ ಆರೋಪ ಮಾಡುತ್ತಿರುವುದು ಸರಿಯಲ್ಲ' ಎಂದರು.</p>.<p>'ಆಜಾದ್ ಈ ಹಿಂದೆ ಕಾಂಗ್ರೆಸ್ ನಲ್ಲಿದ್ದುದು ನಿಜ. ಆರೋಪಿತರಾದ ಬಳಿಕ ಪಕ್ಷದ ಚಟುವಟಿಕೆಯಿಂದ ದೂರ ಇದ್ದಾರೆ' ಎಂದೂ ಪ್ರಶ್ನೆಯೊಂದಕ್ಕೆ ಉತ್ತರಿಸಿದರು.</p>.<p>'ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ವಕ್ಫ್ ಸಲಹಾ ಮಂಡಳಿಗೆ ಪದಾಧಿಕಾರಿಗಳ ಆಯ್ಕೆಗೆ ಕಾಂಗ್ರೆಸ್ ಕೂಡ ಪಟ್ಟಿ ನೀಡಿದೆ ಎಂದು ಹೇಳಿರುವುದು ಸತ್ಯಕ್ಕೆ ದೂರ. ನಮ್ಮಿಂದ ಪಟ್ಟಿ ಅಥವಾ ಶಿಫಾರಸ್ಸು ತವಾನೆಯಾಗಿದ್ದರೆ ಅದನ್ನು ಬಹಿರಂಗವಾಗಿ ಪ್ರದರ್ಶಿಸಲಿ' ಎಂದು ಸವಾಲೆಸೆದರು.</p>.<p>ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಎಸ್.ಕೆ.ಭಾಗವತ, ದೀಪಕ ದೊಡ್ಡೂರು, ಪ್ರದೀಪ ಶೆಟ್ಟಿ, ಜಗದೀಶ ಗೌಡ, ಶ್ರೀನಿವಾಸ ನಾಯ್ಕ, ರಘು ಕಾನಡೆ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>