<p><strong>ಕಾರವಾರ</strong>: ‘ಪರೇಶ ಮೇಸ್ತ ಸಾವು ಪ್ರಕರಣದಲ್ಲಿ ಸಿ.ಬಿ.ಐ ಸಲ್ಲಿಸಿರುವ ಬಿ ರಿಪೋರ್ಟ್ಗೆ ಆತನ ಕುಟುಂಬದವರು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಅವರು ಸಲ್ಲಿಸುವ ಮರು ಪರಿಶೀಲನೆ ಅರ್ಜಿಯ ವಿಚಾರಣೆ ನಡೆಸಿ ಬೇಗ ಫಲಿತಾಂಶ ಕೊಡಬೇಕು. ಮತ್ತೆ ತೊಂದರೆಯಾಗಬಾರದು’ ಎಂದು ಮಾಜಿ ಶಾಸಕ ಸತೀಶ ಸೈಲ್ ಒತ್ತಾಯಿಸಿದರು.</p>.<p>ನಗರದಲ್ಲಿ ಬುಧವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ‘ರಾಜ್ಯ ಮತ್ತು ಕೇಂದ್ರದಲ್ಲಿ ಒಂದೇ ಪಕ್ಷದ ಸರ್ಕಾರವಿದೆ. ಸಾವಿನ ಪ್ರಕರಣದ ತನಿಖೆಯ ವರದಿ ಬರಲು ವಿಳಂಬವಾದಂತೆ ಇದನ್ನೂ ಮಾಡಬಾರದು’ ಎಂದರು.</p>.<p>‘ಕಾರವಾರ– ಅಂಕೋಲಾ ಕ್ಷೇತ್ರದಲ್ಲಿ ನನ್ನ ಅವಧಿಯಲ್ಲಿ ಮಂಜೂರಾದ ಹಲವು ಸೇತುವೆಗಳ ಕಾಮಗಾರಿ ಪೂರ್ಣಗೊಳಿಸಲು ಇನ್ನೂ ಸಾಧ್ಯವಾಗಿಲ್ಲ. ಮಂಜಗುಣಿ, ಖಾರ್ಗೆ, ಉಳಗಾ ಸೇತುವೆಗಳು ಹಾಗೂ ಸಂಪರ್ಕ ರಸ್ತೆಗಳು ಅಪೂರ್ಣವಾಗಿವೆ. ಈ ಬಗ್ಗೆ ಪ್ರಶ್ನಿಸಿದರೆ, ಬಿಜೆಪಿಯವರು ಕಾಮಗಾರಿಗೆ ಹಿಂದಿನ ಸರ್ಕಾರದ ಹಣವೇ ಕೊಡಲಿಲ್ಲ ಎಂದು ಹೇಳುತ್ತಾರೆ. ಆದರೆ, ಅದರ ಮೊತ್ತವೂ ಟೆಂಡರ್ ಆಗುವಾಗಲೇ ನಿರ್ಧಾರವಾಗುತ್ತದೆ. ಹಾಗಾಗಿ ಮಾಹಿತಿಯಿಲ್ಲದವರ ರೀತಿ ಮಾತನಾಡಬಾರದು’ ಎಂದು ಟೀಕಿಸಿದರು.</p>.<p>ಕುಮಟಾದಲ್ಲಿ ನ.24ರಂದು ನಡೆಯುವ ಜನಜಾಗೃತಿ ಸಮಾವೇಶದಲ್ಲಿ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ, ಪಕ್ಷದ ರಾಜ್ಯ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲ, ಪ್ರಮುಖರಾದ ಸತೀಶ ಜಾರಕಿಹೊಳಿ, ವೀರಪ್ಪ ಮೊಯ್ಲಿ ಮುಂತಾದವರು ಭಾಗವಹಿಸಲಿದ್ದಾರೆ’ ಎಂದರು.</p>.<p>ಪ್ರಮುಖರಾದ ಅಶೋಕ ನಾಯ್ಕ, ಸಲೀಂ ಶೇಖ್, ಜಿ.ಟಿ ನಾಯ್ಕ, ಸಂದೀಪ ಕಲಗುಟಕರ್, ಪ್ರಮೋದ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕಾರವಾರ</strong>: ‘ಪರೇಶ ಮೇಸ್ತ ಸಾವು ಪ್ರಕರಣದಲ್ಲಿ ಸಿ.ಬಿ.ಐ ಸಲ್ಲಿಸಿರುವ ಬಿ ರಿಪೋರ್ಟ್ಗೆ ಆತನ ಕುಟುಂಬದವರು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಅವರು ಸಲ್ಲಿಸುವ ಮರು ಪರಿಶೀಲನೆ ಅರ್ಜಿಯ ವಿಚಾರಣೆ ನಡೆಸಿ ಬೇಗ ಫಲಿತಾಂಶ ಕೊಡಬೇಕು. ಮತ್ತೆ ತೊಂದರೆಯಾಗಬಾರದು’ ಎಂದು ಮಾಜಿ ಶಾಸಕ ಸತೀಶ ಸೈಲ್ ಒತ್ತಾಯಿಸಿದರು.</p>.<p>ನಗರದಲ್ಲಿ ಬುಧವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ‘ರಾಜ್ಯ ಮತ್ತು ಕೇಂದ್ರದಲ್ಲಿ ಒಂದೇ ಪಕ್ಷದ ಸರ್ಕಾರವಿದೆ. ಸಾವಿನ ಪ್ರಕರಣದ ತನಿಖೆಯ ವರದಿ ಬರಲು ವಿಳಂಬವಾದಂತೆ ಇದನ್ನೂ ಮಾಡಬಾರದು’ ಎಂದರು.</p>.<p>‘ಕಾರವಾರ– ಅಂಕೋಲಾ ಕ್ಷೇತ್ರದಲ್ಲಿ ನನ್ನ ಅವಧಿಯಲ್ಲಿ ಮಂಜೂರಾದ ಹಲವು ಸೇತುವೆಗಳ ಕಾಮಗಾರಿ ಪೂರ್ಣಗೊಳಿಸಲು ಇನ್ನೂ ಸಾಧ್ಯವಾಗಿಲ್ಲ. ಮಂಜಗುಣಿ, ಖಾರ್ಗೆ, ಉಳಗಾ ಸೇತುವೆಗಳು ಹಾಗೂ ಸಂಪರ್ಕ ರಸ್ತೆಗಳು ಅಪೂರ್ಣವಾಗಿವೆ. ಈ ಬಗ್ಗೆ ಪ್ರಶ್ನಿಸಿದರೆ, ಬಿಜೆಪಿಯವರು ಕಾಮಗಾರಿಗೆ ಹಿಂದಿನ ಸರ್ಕಾರದ ಹಣವೇ ಕೊಡಲಿಲ್ಲ ಎಂದು ಹೇಳುತ್ತಾರೆ. ಆದರೆ, ಅದರ ಮೊತ್ತವೂ ಟೆಂಡರ್ ಆಗುವಾಗಲೇ ನಿರ್ಧಾರವಾಗುತ್ತದೆ. ಹಾಗಾಗಿ ಮಾಹಿತಿಯಿಲ್ಲದವರ ರೀತಿ ಮಾತನಾಡಬಾರದು’ ಎಂದು ಟೀಕಿಸಿದರು.</p>.<p>ಕುಮಟಾದಲ್ಲಿ ನ.24ರಂದು ನಡೆಯುವ ಜನಜಾಗೃತಿ ಸಮಾವೇಶದಲ್ಲಿ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ, ಪಕ್ಷದ ರಾಜ್ಯ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲ, ಪ್ರಮುಖರಾದ ಸತೀಶ ಜಾರಕಿಹೊಳಿ, ವೀರಪ್ಪ ಮೊಯ್ಲಿ ಮುಂತಾದವರು ಭಾಗವಹಿಸಲಿದ್ದಾರೆ’ ಎಂದರು.</p>.<p>ಪ್ರಮುಖರಾದ ಅಶೋಕ ನಾಯ್ಕ, ಸಲೀಂ ಶೇಖ್, ಜಿ.ಟಿ ನಾಯ್ಕ, ಸಂದೀಪ ಕಲಗುಟಕರ್, ಪ್ರಮೋದ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>