‘ಕಾರವಾರ– ಅಂಕೋಲಾ ಕ್ಷೇತ್ರದಲ್ಲಿ ನನ್ನ ಅವಧಿಯಲ್ಲಿ ಮಂಜೂರಾದ ಹಲವು ಸೇತುವೆಗಳ ಕಾಮಗಾರಿ ಪೂರ್ಣಗೊಳಿಸಲು ಇನ್ನೂ ಸಾಧ್ಯವಾಗಿಲ್ಲ. ಮಂಜಗುಣಿ, ಖಾರ್ಗೆ, ಉಳಗಾ ಸೇತುವೆಗಳು ಹಾಗೂ ಸಂಪರ್ಕ ರಸ್ತೆಗಳು ಅಪೂರ್ಣವಾಗಿವೆ. ಈ ಬಗ್ಗೆ ಪ್ರಶ್ನಿಸಿದರೆ, ಬಿಜೆಪಿಯವರು ಕಾಮಗಾರಿಗೆ ಹಿಂದಿನ ಸರ್ಕಾರದ ಹಣವೇ ಕೊಡಲಿಲ್ಲ ಎಂದು ಹೇಳುತ್ತಾರೆ. ಆದರೆ, ಅದರ ಮೊತ್ತವೂ ಟೆಂಡರ್ ಆಗುವಾಗಲೇ ನಿರ್ಧಾರವಾಗುತ್ತದೆ. ಹಾಗಾಗಿ ಮಾಹಿತಿಯಿಲ್ಲದವರ ರೀತಿ ಮಾತನಾಡಬಾರದು’ ಎಂದು ಟೀಕಿಸಿದರು.