ತಾಲ್ಲೂಕಿನ ಕಡವಾಡ ಗ್ರಾಮದಲ್ಲಿ ಮಂಗಳವಾರ ಮಾಧ್ಯಮದವರ ಜತೆ ಮಾತನಾಡಿದ ಅವರು, ‘ತಮ್ಮ ಬೆಂಗಾವಲಿಗೆ ಕಾಂಗ್ರೆಸ್ ಇದೆ ಎಂಬ ಕಾರಣಕ್ಕೆ ದುಷ್ಕರ್ಮಿಗಳ ಪುಂಡಾಟಿಕೆ ಹೆಚ್ಚಿದೆ. ಮುಸ್ಲಿಮರ ಓಲೈಕೆಗೆ ಕಾಂಗ್ರೆಸ್ ನಾಯಕರು ಪೈಪೋಟಿಗೆ ಬಿದ್ದವರಂತೆ ನಡೆದುಕೊಳ್ಳುತ್ತಿದ್ದಾರೆ. ಶಿವಮೊಗ್ಗದಲ್ಲಿ ನಡೆದ ಘಟನೆ ರಾಜ್ಯದಾದ್ಯಂತ ನಡೆದರೆ ಅಚ್ಚರಿ ಪಡಬೇಕಿಲ್ಲ’ ಎಂದರು.