ಕಾಂಗ್ರೆಸ್ ಜಿಲ್ಲಾ ಘಟಕದ ಪದಾಧಿಕಾರಿ ಬಸವರಾಜ ದೊಡ್ಮನಿ ಮಾತನಾಡಿ, ಸಂಸದ ಸ್ಥಾನದಲ್ಲಿರುವವರು ಅಸಾಂವಿಧಾನಿಕ ಶಬ್ದ ಬಳಸುವುದು ಸರಿಯಲ್ಲ. ರಾಜಕೀಯ ಲಾಭಕ್ಕಾಗಿ ಕೀಳು ಮಟ್ಟಕ್ಕಿಳಿಯುವುದು ಶೋಚನೀಯ ಎಂದರು. ಇನ್ನು ಮುಂದೆ ತಮ್ಮ ವರ್ತನೆ ಸರಿಪಡಿಸಿಕೊಳ್ಳದಿದ್ದರೆ ಉಗ್ರ ಹೋರಾಟ ನಡೆಸಲಾಗುವುದು ಎಂದು ಎಚ್ಚರಿಸಿದರು.
ಪ್ರತಿಭಟನೆಯಲ್ಲಿ ನೂರಾರು ಕಾಂಗ್ರೆಸ್ ಕಾರ್ಯಕರ್ತರು ಪಾಲ್ಗೊಂಡಿದ್ದರು.