<p><strong>ಶಿರಸಿ</strong>: ‘ಸಾಮರಸ್ಯ ಗಟ್ಟಿಗೊಳಿಸುವ ಜತೆಗೆ ಜನರಲ್ಲಿ ದೇಶದ ಉತ್ತಮ ಭವಿಷ್ಯದ ಕುರಿತು ಭಾರತ್ ಜೋಡೊ ಯಾತ್ರೆ ಹೊಸ ಭರವಸೆ ಹುಟ್ಟಿಸಲಿದೆ’ ಎಂದು ಕಾಂಗ್ರೆಸ್ ಜಿಲ್ಲಾ ಘಟಕದ ಅಧ್ಯಕ್ಷ ಭೀಮಣ್ಣ ನಾಯ್ಕ ಹೇಳಿದರು.</p>.<p>ಭಾರತ್ ಜೋಡೊ ಯಾತ್ರೆ ಅಂಗವಾಗಿ ಕಾಂಗ್ರೆಸ್ ಜಿಲ್ಲಾ ಘಟಕ ಶುಕ್ರವಾರ ಆಯೋಜಿಸಿದ್ದ ಬೈಕ್ ರ್ಯಾಲಿಗೆ ಇಲ್ಲಿನ ಮಾರಿಕಾಂಬಾ ದೇವಾಲಯದ ಎದುರು ಚಾಲನೆ ನೀಡಿ ಅವರು ಮಾತನಾಡಿದರು.</p>.<p>‘ಬೆಲೆ ಏರಿಕೆ, ನಿರುದ್ಯೋಗ, ಕೋಮುವಾದ ಮುಂತಾದ ಹತ್ತಾರು ಸಮಸ್ಯೆಗಳಿಂದ ಜನರು ತತ್ತರಿಸಿ ಹೋಗಿದ್ದಾರೆ. ಇಂತಹ ಸಂದರ್ಭದಲ್ಲಿ ರಾಹುಲ್ ಗಾಂಧಿ ಅವರು ಹಮ್ಮಿಕೊಂಡಿರುವ ಪಾದಯಾತ್ರೆ ಜನರಲ್ಲಿ ಧೈರ್ಯ ತುಂಬುತ್ತಿದೆ. ದೇಶದ ಒಳಿತಿಗೆ ಚಿಂತಿಸುವ ಪ್ರತಿಯೊಬ್ಬರೂ ಯಾತ್ರೆಯಲ್ಲಿ ಪಾಲ್ಗೊಳ್ಳಬೇಕಾಗಿದೆ’ ಎಂದರು.</p>.<p>ನಗರದ ಮುಖ್ಯ ರಸ್ತೆಗಳ ಮೂಲಕ ಹಾದು ಕಾಂಗ್ರೆಸ್ ಪಕ್ಷದ ಜಿಲ್ಲಾ ಘಟಕದ ಕಚೇರಿವರೆಗೆ ಬೈಕ್ ರ್ಯಾಲಿ ಸಾಗಿತು. ಕಾರ್ಯಕರ್ತರು ಪಕ್ಷದ ಬಾವುಟ ಹಾರಿಸುತ್ತ, ಜಯಘೋಷ ಮೊಳಗಿಸಿ ಸಾಗಿದರು.</p>.<p>ಪ್ರಮುಖರಾದ ಎಸ್.ಕೆ.ಭಾಗವತ, ರವೀಂದ್ರ ನಾಯ್ಕ, ದೀಪಕ ದೊಡ್ಡೂರು, ಜಗದೀಶ ಗೌಡ, ಗೀತಾ ಭೋವಿ, ಗಣೇಶ ದಾವಣಗೆರೆ, ಸತೀಶ ನಾಯ್ಕ, ಇತರರು ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಶಿರಸಿ</strong>: ‘ಸಾಮರಸ್ಯ ಗಟ್ಟಿಗೊಳಿಸುವ ಜತೆಗೆ ಜನರಲ್ಲಿ ದೇಶದ ಉತ್ತಮ ಭವಿಷ್ಯದ ಕುರಿತು ಭಾರತ್ ಜೋಡೊ ಯಾತ್ರೆ ಹೊಸ ಭರವಸೆ ಹುಟ್ಟಿಸಲಿದೆ’ ಎಂದು ಕಾಂಗ್ರೆಸ್ ಜಿಲ್ಲಾ ಘಟಕದ ಅಧ್ಯಕ್ಷ ಭೀಮಣ್ಣ ನಾಯ್ಕ ಹೇಳಿದರು.</p>.<p>ಭಾರತ್ ಜೋಡೊ ಯಾತ್ರೆ ಅಂಗವಾಗಿ ಕಾಂಗ್ರೆಸ್ ಜಿಲ್ಲಾ ಘಟಕ ಶುಕ್ರವಾರ ಆಯೋಜಿಸಿದ್ದ ಬೈಕ್ ರ್ಯಾಲಿಗೆ ಇಲ್ಲಿನ ಮಾರಿಕಾಂಬಾ ದೇವಾಲಯದ ಎದುರು ಚಾಲನೆ ನೀಡಿ ಅವರು ಮಾತನಾಡಿದರು.</p>.<p>‘ಬೆಲೆ ಏರಿಕೆ, ನಿರುದ್ಯೋಗ, ಕೋಮುವಾದ ಮುಂತಾದ ಹತ್ತಾರು ಸಮಸ್ಯೆಗಳಿಂದ ಜನರು ತತ್ತರಿಸಿ ಹೋಗಿದ್ದಾರೆ. ಇಂತಹ ಸಂದರ್ಭದಲ್ಲಿ ರಾಹುಲ್ ಗಾಂಧಿ ಅವರು ಹಮ್ಮಿಕೊಂಡಿರುವ ಪಾದಯಾತ್ರೆ ಜನರಲ್ಲಿ ಧೈರ್ಯ ತುಂಬುತ್ತಿದೆ. ದೇಶದ ಒಳಿತಿಗೆ ಚಿಂತಿಸುವ ಪ್ರತಿಯೊಬ್ಬರೂ ಯಾತ್ರೆಯಲ್ಲಿ ಪಾಲ್ಗೊಳ್ಳಬೇಕಾಗಿದೆ’ ಎಂದರು.</p>.<p>ನಗರದ ಮುಖ್ಯ ರಸ್ತೆಗಳ ಮೂಲಕ ಹಾದು ಕಾಂಗ್ರೆಸ್ ಪಕ್ಷದ ಜಿಲ್ಲಾ ಘಟಕದ ಕಚೇರಿವರೆಗೆ ಬೈಕ್ ರ್ಯಾಲಿ ಸಾಗಿತು. ಕಾರ್ಯಕರ್ತರು ಪಕ್ಷದ ಬಾವುಟ ಹಾರಿಸುತ್ತ, ಜಯಘೋಷ ಮೊಳಗಿಸಿ ಸಾಗಿದರು.</p>.<p>ಪ್ರಮುಖರಾದ ಎಸ್.ಕೆ.ಭಾಗವತ, ರವೀಂದ್ರ ನಾಯ್ಕ, ದೀಪಕ ದೊಡ್ಡೂರು, ಜಗದೀಶ ಗೌಡ, ಗೀತಾ ಭೋವಿ, ಗಣೇಶ ದಾವಣಗೆರೆ, ಸತೀಶ ನಾಯ್ಕ, ಇತರರು ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>