<p><strong>ಶಿರಸಿ:</strong> ತಾಲ್ಲೂಕಿನ ಗ್ರಾಮೀಣ ಭಾಗಗಳಲ್ಲಿ ಮಳೆಗಾಲ ಆರಂಭವಾದರೆ ರಸ್ತೆಗಳು ಕೆರೆಗಳಂತಾಗಿ ಜನರು ಓಡಾಡಲು ಬಾರದಂತಾಗುತ್ತದೆ. ಇಂತಹ ಪರಿಸ್ಥಿತಿ ಎದುರಿಸುವ ಸಲುವಾಗಿ ಮುಂಜಾಗೃತಾ ಕ್ರಮವಾಗಿ ಉದ್ಯೋಗ ಖಾತ್ರಿ ಯೋಜನೆಯಡಿ ನೀರಿನ ಕಾಲುವೆಗಳ ದುರಸ್ಥಿ ಕಾರ್ಯ ಕೈಗೊಳ್ಳಲಾಗುತ್ತಿದೆ.</p>.<p>ತಾಲ್ಲೂಕಿನ ಕಾನಗೋಡ ಗ್ರಾಮ ಪಂಚಾಯಿತಿ ಅಜ್ಜಿಬಳ ಗ್ರಾಮದ ಸೊಂಡ್ಲಿಬೈಲ್ ಗ್ರಾಮದ ಕೆರೆಯ ಪಕ್ಕದಲ್ಲಿ ಗ್ರಾಮದ ಸಂಪರ್ಕ ರಸ್ತೆಗಳು ಹಾದುಹೋಗುತ್ತವೆ. ಮಳೆ ಆರಂಭವಾದರೆ ಇಲ್ಲಿನ ರಸ್ತೆಗಳಲ್ಲಿಯೂ ನೀರು ತುಂಬಿ ಓಡಾಡಲು ಕಷ್ಟವಾಗುತ್ತಿತ್ತು. ಇದನ್ನರಿತ ಗ್ರಾಮ ಪಂಚಾಯಿತಿ ಉದ್ಯೋಗ ಖಾತ್ರಿ ಯೋಜನೆಯಡಿ ₹2 ಲಕ್ಷ ವೆಚ್ಚದಲ್ಲಿ ಕಾಲುವೆ ಪುನರುಜ್ಜೀವನ ಕಾಮಗಾರಿ ಕೈಗೆತ್ತಿಕೊಳ್ಳಲಾಗಿದೆ.</p>.<p>ಈ ವೇಳೆ ಕಾಮಗಾರಿ ಸ್ಥಳದಲ್ಲಿ ರೋಜಗಾರ್ ದಿನ ಹಾಗೂ ದುಡಿಯೋಣ ಬಾ ಅಭಿಯಾನ ಆಚರಿಸಿ ಕೂಲಿಕಾರರಿಗೆ ನರೇಗಾ ಯೋಜನೆಯ ಮಾಹಿತಿ ನೀಡುವ ಮೂಲಕ ಅಂತರ್ಜಲ ಮಟ್ಟ ಹೆಚ್ಚಿಸುವ ನಿಟ್ಟಿನಲ್ಲಿ ಕಾಮಗಾರಿಗಳನ್ನು ಪಡೆಯಲು ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ರಾಜಾರಾಮ ಭಟ್ ತಿಳಿಸಿದರು.</p>.<p>ಮಳೆ ನೀರನ್ನು ಸಂರಕ್ಷಿಸಲು ಹಾಗೂ ರಸ್ತೆಯನ್ನು ಸುರಕ್ಷಿತವಾಗಿಡಲು ಕಾಲುವೆ ದುರಸ್ಥಿ ಅನುಕೂಲವಾಗಿದ್ದು, ಸುತ್ತಲಿನ ಕೂಲಿಕಾರರಿಗೂ ಕೆಲಸ ದೊರೆತು ಅವರ ಆರ್ಥಿಕತೆ ಸುಧಾರಿಸಲು ಅನುಕೂಲವಾಗಿದೆ ಎಂದು ಸ್ಥಳೀಯರಾದ ಸುಬ್ರಾಯ ಹೆಗಡೆ ಹೇಳಿದರು.</p>.<p>ತಾಲ್ಲೂಕು ಐಇಸಿ ಸಂಯೋಜಕಿ ಪೂರ್ಣಿಮಾ ಗೌಡ, ಸಿಬ್ಬಂದಿ ಚಂದ್ರಶೇಖರ ಹಾಗೂ ಸ್ಥಳೀಯರು ಭಾಗಿಯಾಗಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಶಿರಸಿ:</strong> ತಾಲ್ಲೂಕಿನ ಗ್ರಾಮೀಣ ಭಾಗಗಳಲ್ಲಿ ಮಳೆಗಾಲ ಆರಂಭವಾದರೆ ರಸ್ತೆಗಳು ಕೆರೆಗಳಂತಾಗಿ ಜನರು ಓಡಾಡಲು ಬಾರದಂತಾಗುತ್ತದೆ. ಇಂತಹ ಪರಿಸ್ಥಿತಿ ಎದುರಿಸುವ ಸಲುವಾಗಿ ಮುಂಜಾಗೃತಾ ಕ್ರಮವಾಗಿ ಉದ್ಯೋಗ ಖಾತ್ರಿ ಯೋಜನೆಯಡಿ ನೀರಿನ ಕಾಲುವೆಗಳ ದುರಸ್ಥಿ ಕಾರ್ಯ ಕೈಗೊಳ್ಳಲಾಗುತ್ತಿದೆ.</p>.<p>ತಾಲ್ಲೂಕಿನ ಕಾನಗೋಡ ಗ್ರಾಮ ಪಂಚಾಯಿತಿ ಅಜ್ಜಿಬಳ ಗ್ರಾಮದ ಸೊಂಡ್ಲಿಬೈಲ್ ಗ್ರಾಮದ ಕೆರೆಯ ಪಕ್ಕದಲ್ಲಿ ಗ್ರಾಮದ ಸಂಪರ್ಕ ರಸ್ತೆಗಳು ಹಾದುಹೋಗುತ್ತವೆ. ಮಳೆ ಆರಂಭವಾದರೆ ಇಲ್ಲಿನ ರಸ್ತೆಗಳಲ್ಲಿಯೂ ನೀರು ತುಂಬಿ ಓಡಾಡಲು ಕಷ್ಟವಾಗುತ್ತಿತ್ತು. ಇದನ್ನರಿತ ಗ್ರಾಮ ಪಂಚಾಯಿತಿ ಉದ್ಯೋಗ ಖಾತ್ರಿ ಯೋಜನೆಯಡಿ ₹2 ಲಕ್ಷ ವೆಚ್ಚದಲ್ಲಿ ಕಾಲುವೆ ಪುನರುಜ್ಜೀವನ ಕಾಮಗಾರಿ ಕೈಗೆತ್ತಿಕೊಳ್ಳಲಾಗಿದೆ.</p>.<p>ಈ ವೇಳೆ ಕಾಮಗಾರಿ ಸ್ಥಳದಲ್ಲಿ ರೋಜಗಾರ್ ದಿನ ಹಾಗೂ ದುಡಿಯೋಣ ಬಾ ಅಭಿಯಾನ ಆಚರಿಸಿ ಕೂಲಿಕಾರರಿಗೆ ನರೇಗಾ ಯೋಜನೆಯ ಮಾಹಿತಿ ನೀಡುವ ಮೂಲಕ ಅಂತರ್ಜಲ ಮಟ್ಟ ಹೆಚ್ಚಿಸುವ ನಿಟ್ಟಿನಲ್ಲಿ ಕಾಮಗಾರಿಗಳನ್ನು ಪಡೆಯಲು ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ರಾಜಾರಾಮ ಭಟ್ ತಿಳಿಸಿದರು.</p>.<p>ಮಳೆ ನೀರನ್ನು ಸಂರಕ್ಷಿಸಲು ಹಾಗೂ ರಸ್ತೆಯನ್ನು ಸುರಕ್ಷಿತವಾಗಿಡಲು ಕಾಲುವೆ ದುರಸ್ಥಿ ಅನುಕೂಲವಾಗಿದ್ದು, ಸುತ್ತಲಿನ ಕೂಲಿಕಾರರಿಗೂ ಕೆಲಸ ದೊರೆತು ಅವರ ಆರ್ಥಿಕತೆ ಸುಧಾರಿಸಲು ಅನುಕೂಲವಾಗಿದೆ ಎಂದು ಸ್ಥಳೀಯರಾದ ಸುಬ್ರಾಯ ಹೆಗಡೆ ಹೇಳಿದರು.</p>.<p>ತಾಲ್ಲೂಕು ಐಇಸಿ ಸಂಯೋಜಕಿ ಪೂರ್ಣಿಮಾ ಗೌಡ, ಸಿಬ್ಬಂದಿ ಚಂದ್ರಶೇಖರ ಹಾಗೂ ಸ್ಥಳೀಯರು ಭಾಗಿಯಾಗಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>