ದಾಂಡೇಲಿ: ದಾಂಡೇಲಿ ವಿಭಾಗದ ಕಾಳಿ ಹುಲಿ ಸಂರಕ್ಷಿತ ಪ್ರದೇಶದಲ್ಲಿ ಗುತ್ತಿಗೆ ಆಧಾರದ ಮೇಲೆ ಕೆಲಸ ಮಾಡುವ ನೌಕರರಿಗೆ ಕಳೆದ 5-6 ತಿಂಗಳಿನಿಂದ ವೇತನ ಪಾವತಿಸದಿರುವುದನ್ನು ಖಂಡಿಸಿ ರಾಜ್ಯ ಅರಣ್ಯ ಮತ್ತು ವನ್ಯಜೀವಿ ಸಂರಕ್ಷಣಾ ನೌಕರರ ಸಂಘದ ವತಿಯಿಂದ ಶುಕ್ರವಾರ ನಗರದ ವನ್ಯಜೀವಿ ವಿಭಾಗದ ಕಚೇರಿಯ ಮುಂದೆ ಪ್ರತಿಭಟನೆ ನಡೆಯಿತು.
ರಾಜ್ಯ ಅರಣ್ಯ ಮತ್ತು ವನ್ಯಜೀವಿ ಸಂರಕ್ಷಣಾ ನೌಕರರ ಸಂಘದ ಅಧ್ಯಕ್ಷ ಹರೀಶ ನಾಯ್ಕ ಮಾತನಾಡಿ, ಸರ್ಕಾರ ವೇತನ ಬಿಡುಗಡೆಗೆ ವಿಳಂಬ ನೀತಿ ಅನುಸರಿಸುತ್ತಿದೆ ಎಂದರು.
ಎಸಿಎಫ್ ಕೆ.ಸಿ ಗೊರವರ ಸರ್ಕಾರದಿಂದ ವೇತನ ಬಿಡುಗಡೆಯ ಆದೇಶ ಹೊರಡಿಸಲಾಗಿದ್ದು, ಕೆಲವೇ ದಿನಗಳಲ್ಲಿ ಬಾಕಿ ಇರುವ ವೇತನವನ್ನು ಬಿಡುಗಡೆ ಮಾಡಲಾಗುವುದು ಎಂದರು. ಡಿ.ವೈಎಸ್.ಪಿ ಶಿವಾನಂದ ಚಲವಾದಿ. ಸಿ.ಪಿ.ಐ ಪ್ರಭು, ಗಂಗನಹಳ್ಳಿ ಪ್ರತಿಭಟನಾಕಾರರ ಮನವೊಲಿಸಿದ ನಂತರ ಪ್ರತಿಭಟನೆಯನ್ನು ಹಿಂದಕ್ಕೆ ಪಡೆದರು.