ನದಿಗೆ ಸೇತುವೆ ನಿರ್ಮಾಣಕ್ಕಾಗಿ ಮಣ್ಣು ಸುರಿಯಲಾಗಿತ್ತು. ಇದಕ್ಕೆ ಹಲವರಿಂದ ವಿರೋಧ ವ್ಯಕ್ತವಾಗಿತ್ತು. ಸಭೆಯಲ್ಲಿ ಮಾತನಾಡಿದಜಿಲ್ಲಾ ನಾಡದೋಣಿ ಸಂಘದ ಅಧ್ಯಕ್ಷ ಸದಾನಂದ ಹರಿಕಂತ್ರ, ‘ನದಿಯ ಪ್ರಾಕೃತಿಕ ಸ್ವರೂಪಕ್ಕೆ ಹಾಗೂ ನದಿಯಲ್ಲಿ ಮೀನುಗಾರಿಕೆಗೆ ಅಡ್ಡಿಯಾಗದಂತೆ ಸೇತುವೆ ನಿರ್ಮಾಣ ಕಾರ್ಯ ಕೈಗೊಳ್ಳಬೇಕಿತ್ತು. ಶತಮಾನಗಳಷ್ಟು ಹಳೆಯ ಪದ್ಧತಿಯಂತೆ ನದಿಯಲ್ಲಿ ಸಾವಿರಾರು ಲಾರಿ ಲೋಡ್ ಮಣ್ಣು ಸುರಿಯಲಾಗಿದೆ.ಒಡ್ಡು ಕಟ್ಟಿ ಸೇತುವೆ ಕಾಮಗಾರಿ ಮುಗಿದ ನಂತರ ಮಣ್ಣನ್ನು ನೀರಿನಲ್ಲಿ ಕೊಚ್ಚಿ ಬಿಡುವುದು ಅಪರಾಧ ಹಾಗೂ ಸಮಾಜ ದ್ರೋಹ’ ಎಂದು ಅಸಮಾಧಾನ ವ್ಯಕ್ತಪಡಿಸಿದರು.