<p>ಪ್ರಜಾವಾಣಿ ವಾರ್ತೆ</p>.<p>ಶಿರಸಿ: ’ಇಲ್ಲಿನ ಶಿರಸಿ ಅರ್ಬನ್ ಸಹಕಾರ ಬ್ಯಾಂಕ್ 2024-25ನೇ ಸಾಲಿನಲ್ಲಿ ₹2,361 ಕೋಟಿ ಒಟ್ಟೂ ವ್ಯವಹಾರವನ್ನು ದಾಖಲಿಸಿ ಹೊಸ ಮೈಲಿಗಲ್ಲು ಸೃಷ್ಟಿಸಿದೆ’ ಎಂದು ಬ್ಯಾಕ್ ಅಧ್ಯಕ್ಷ ಜಯದೇವ ನಿಲೇಕಣಿ ಹೇಳಿದರು. </p>.<p>ನಗರದ ವಿದ್ಯಾಧಿರಾಜ ಕಲಾಕ್ಷೇತ್ರದಲ್ಲಿ ಸೋಮವಾರ ನಡೆದ ಬ್ಯಾಂಕ್ನ ವಾರ್ಷಿಕ ಸರ್ವಸಾಧಾರಣ ಸಭೆಯಲ್ಲಿ ಮಾತನಾಡಿದ ಅವರು, ‘ಬ್ಯಾಂಕ್ ಆರ್ಥಿಕ ವರ್ಷದಲ್ಲಿ ತನ್ನ ಒಟ್ಟೂ ಠೇವಣಿಯನ್ನು ₹1,377.97 ಕೋಟಿಗಳಿಗೆ, ದುಡಿಯುವ ಬಂಡವಾಳವನ್ನು ₹1,605.01 ಕೋಟಿಗಳಿಗೆ ಹೆಚ್ಚಿಸುವುದರೊಂದಿಗೆ ₹11.07 ಕೋಟಿ ನಿವ್ವಳ ಲಾಭವನ್ನು ದಾಖಲಿಸಿದೆ’ ಎಂದರು. </p>.<p>‘ಬ್ಯಾಂಕ್ನ ಸದಸ್ಯರ ಸಂಖ್ಯೆ 49,416 ದಾಟಿದ್ದು, ಸಂದಾಯಿತ ಶೇರು ಬಂಡವಾಳ ₹41.32 ಕೋಟಿ ತಲುಪಿದೆ. ಕಳೆದ ವರ್ಷದ ₹116.82 ಕೋಟಿ ಆದಾಯವನ್ನು ₹134.01 ಕೋಟಿಗಳಿಗೆ ಬ್ಯಾಂಕ್ ಹೆಚ್ಚಿಸಿದೆ. 5 ವರ್ಷಗಳಲ್ಲಿ ತನ್ನ ವ್ಯವಹಾರವನ್ನು ₹1,361 ಕೋಟಿಗಳಿಂದ ₹2,361 ಕೋಟಿಗಳಿಗೆ ಅಭಿವೃದ್ಧಿಗೊಳಿಸಿರುವುದು ಬ್ಯಾಂಕ್ ಸದೃಢವಾಗಿ ಪ್ರಗತಿಯತ್ತ ಸಾಗುವ ಸಂಕೇತವಾಗಿದೆ’ ಎಂದು ಹೇಳಿದರು. </p>.<p>ಬ್ಯಾಂಕ್ ತನ್ನ ಕಾರ್ಯಕ್ಷೇತ್ರದ ವ್ಯಾಪ್ತಿಯನ್ನು ಪ್ರಸಕ್ತ ಇರುವ 9 ಜಿಲ್ಲೆಗಳಿಂದ ಸಂಪೂರ್ಣ ರಾಜ್ಯಕ್ಕೆ ವಿಸ್ತರಿಸುವುದರ ಕುರಿತು ಜಯದೇವ ನಿಲೇಕಣಿ ಅವರು ಮಾಡಿದ ಪ್ರಸ್ತಾವನೆಗೆ ಸರ್ವಸಾಧಾರಣ ಸಭೆಯಲ್ಲಿ ಹಾಜರಿದ್ದ ಸದಸ್ಯರಿಂದ ಒಮ್ಮತದ ಅನುಮೋದನೆ ನೀಡಲಾಯಿತು. </p>.<p>ಮುಖ್ಯ ಕಾರ್ಯನಿರ್ವಹಣಾಧಿಕಾರಿ ಆರತಿ ಶೆಟ್ಟರ್ ಬ್ಯಾಂಕಿನ ಪ್ರಗತಿಯ ಕುರಿತು ಸ್ಥೂಲ ಚಿತ್ರಣವನ್ನು ಸಭೆಗೆ ನೀಡಿದರು. ಬ್ಯಾಂಕ್ ಉಪಾಧ್ಯಕ್ಷ ಸಂತೋಷ ಪಂಡಿತ, ನಿರ್ದೇಶಕ ಸದಾನಂದ ನಾಯ್ಕ, ಕೆ.ಎನ್.ಹೊಸ್ಮನಿ ಇತರರಿದ್ದರು. </p>.<div><blockquote>ಬ್ಯಾಂಕ್ನ ಎಲ್ಲ ಸಾಧನೆಗಳಿಗೆ ಸದಸ್ಯರು ಗ್ರಾಹಕರ ಅಭೂತಪೂರ್ವ ವಿಶ್ವಾಸ ಆಡಳಿತ ಮಂಡಳಿಯ ಸೂಕ್ತ ಮಾರ್ಗದರ್ಶನ ಹಾಗೂ ಸಿಬ್ಬಂದಿ ನಿಷ್ಠಾಪೂರ್ಣ ಕರ್ತವ್ಯ ನಿರ್ವಹಣೆಯೇ ಕಾರಣ</blockquote><span class="attribution">ಜಯದೇವ ನಿಲೇಕಣಿ ಅರ್ಬನ್ ಬ್ಯಾಂಕ್ ಅಧ್ಯಕ್ಷ </span></div>.<p><strong>ಸನ್ಮಾನ ನಗದು ಬಹುಮಾನ</strong> </p><p>ಬ್ಯಾಂಕಿನ ಹಿರಿಯ ಸದಸ್ಯರಾದ ವಸಂತ ನೇತ್ರೆಕರ್ ರಾಧಾಬಾಯಿ ಮೆಣಸಿ ದಾಮೋದರ ಭಟ್ ಪ್ರಕಾಶ ಬಂಗ್ಲೆ ವಾಮನ ನಾಡಿಗ ಹಾಗೂ ಮಹಾಬಲೇಶ್ವರ ಭಟ್ ಕಕ್ಕೋಡ ಅವರನ್ನು ಸನ್ಮಾನಿಸಲಾಯಿತು. 25 ವರ್ಷಗಳ ಕಾಯಂ ಸೇವೆ ಸಲ್ಲಿಸಿ ಕಾರ್ಯ ನಿರ್ವಹಿಸುತ್ತಿರುವ ಬ್ಯಾಂಕಿನ 6 ಸಿಬ್ಬಂದಿಗೆ ನಗದು ಬಹುಮಾನ ನೀಡಿ ಗೌರವಿಸಲಾಯಿತು. ಬ್ಯಾಂಕಿನ ಸದಸ್ಯರ ಪ್ರತಿಭಾನ್ವಿತ ಮಕ್ಕಳಿಗೆ ಪ್ರೋತ್ಸಾಹಕವಾಗಿ ₹3.08 ಲಕ್ಷ ಪ್ರತಿಭಾ ಪುರಸ್ಕಾರ ನೀಡಲಾಯಿತು. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಪ್ರಜಾವಾಣಿ ವಾರ್ತೆ</p>.<p>ಶಿರಸಿ: ’ಇಲ್ಲಿನ ಶಿರಸಿ ಅರ್ಬನ್ ಸಹಕಾರ ಬ್ಯಾಂಕ್ 2024-25ನೇ ಸಾಲಿನಲ್ಲಿ ₹2,361 ಕೋಟಿ ಒಟ್ಟೂ ವ್ಯವಹಾರವನ್ನು ದಾಖಲಿಸಿ ಹೊಸ ಮೈಲಿಗಲ್ಲು ಸೃಷ್ಟಿಸಿದೆ’ ಎಂದು ಬ್ಯಾಕ್ ಅಧ್ಯಕ್ಷ ಜಯದೇವ ನಿಲೇಕಣಿ ಹೇಳಿದರು. </p>.<p>ನಗರದ ವಿದ್ಯಾಧಿರಾಜ ಕಲಾಕ್ಷೇತ್ರದಲ್ಲಿ ಸೋಮವಾರ ನಡೆದ ಬ್ಯಾಂಕ್ನ ವಾರ್ಷಿಕ ಸರ್ವಸಾಧಾರಣ ಸಭೆಯಲ್ಲಿ ಮಾತನಾಡಿದ ಅವರು, ‘ಬ್ಯಾಂಕ್ ಆರ್ಥಿಕ ವರ್ಷದಲ್ಲಿ ತನ್ನ ಒಟ್ಟೂ ಠೇವಣಿಯನ್ನು ₹1,377.97 ಕೋಟಿಗಳಿಗೆ, ದುಡಿಯುವ ಬಂಡವಾಳವನ್ನು ₹1,605.01 ಕೋಟಿಗಳಿಗೆ ಹೆಚ್ಚಿಸುವುದರೊಂದಿಗೆ ₹11.07 ಕೋಟಿ ನಿವ್ವಳ ಲಾಭವನ್ನು ದಾಖಲಿಸಿದೆ’ ಎಂದರು. </p>.<p>‘ಬ್ಯಾಂಕ್ನ ಸದಸ್ಯರ ಸಂಖ್ಯೆ 49,416 ದಾಟಿದ್ದು, ಸಂದಾಯಿತ ಶೇರು ಬಂಡವಾಳ ₹41.32 ಕೋಟಿ ತಲುಪಿದೆ. ಕಳೆದ ವರ್ಷದ ₹116.82 ಕೋಟಿ ಆದಾಯವನ್ನು ₹134.01 ಕೋಟಿಗಳಿಗೆ ಬ್ಯಾಂಕ್ ಹೆಚ್ಚಿಸಿದೆ. 5 ವರ್ಷಗಳಲ್ಲಿ ತನ್ನ ವ್ಯವಹಾರವನ್ನು ₹1,361 ಕೋಟಿಗಳಿಂದ ₹2,361 ಕೋಟಿಗಳಿಗೆ ಅಭಿವೃದ್ಧಿಗೊಳಿಸಿರುವುದು ಬ್ಯಾಂಕ್ ಸದೃಢವಾಗಿ ಪ್ರಗತಿಯತ್ತ ಸಾಗುವ ಸಂಕೇತವಾಗಿದೆ’ ಎಂದು ಹೇಳಿದರು. </p>.<p>ಬ್ಯಾಂಕ್ ತನ್ನ ಕಾರ್ಯಕ್ಷೇತ್ರದ ವ್ಯಾಪ್ತಿಯನ್ನು ಪ್ರಸಕ್ತ ಇರುವ 9 ಜಿಲ್ಲೆಗಳಿಂದ ಸಂಪೂರ್ಣ ರಾಜ್ಯಕ್ಕೆ ವಿಸ್ತರಿಸುವುದರ ಕುರಿತು ಜಯದೇವ ನಿಲೇಕಣಿ ಅವರು ಮಾಡಿದ ಪ್ರಸ್ತಾವನೆಗೆ ಸರ್ವಸಾಧಾರಣ ಸಭೆಯಲ್ಲಿ ಹಾಜರಿದ್ದ ಸದಸ್ಯರಿಂದ ಒಮ್ಮತದ ಅನುಮೋದನೆ ನೀಡಲಾಯಿತು. </p>.<p>ಮುಖ್ಯ ಕಾರ್ಯನಿರ್ವಹಣಾಧಿಕಾರಿ ಆರತಿ ಶೆಟ್ಟರ್ ಬ್ಯಾಂಕಿನ ಪ್ರಗತಿಯ ಕುರಿತು ಸ್ಥೂಲ ಚಿತ್ರಣವನ್ನು ಸಭೆಗೆ ನೀಡಿದರು. ಬ್ಯಾಂಕ್ ಉಪಾಧ್ಯಕ್ಷ ಸಂತೋಷ ಪಂಡಿತ, ನಿರ್ದೇಶಕ ಸದಾನಂದ ನಾಯ್ಕ, ಕೆ.ಎನ್.ಹೊಸ್ಮನಿ ಇತರರಿದ್ದರು. </p>.<div><blockquote>ಬ್ಯಾಂಕ್ನ ಎಲ್ಲ ಸಾಧನೆಗಳಿಗೆ ಸದಸ್ಯರು ಗ್ರಾಹಕರ ಅಭೂತಪೂರ್ವ ವಿಶ್ವಾಸ ಆಡಳಿತ ಮಂಡಳಿಯ ಸೂಕ್ತ ಮಾರ್ಗದರ್ಶನ ಹಾಗೂ ಸಿಬ್ಬಂದಿ ನಿಷ್ಠಾಪೂರ್ಣ ಕರ್ತವ್ಯ ನಿರ್ವಹಣೆಯೇ ಕಾರಣ</blockquote><span class="attribution">ಜಯದೇವ ನಿಲೇಕಣಿ ಅರ್ಬನ್ ಬ್ಯಾಂಕ್ ಅಧ್ಯಕ್ಷ </span></div>.<p><strong>ಸನ್ಮಾನ ನಗದು ಬಹುಮಾನ</strong> </p><p>ಬ್ಯಾಂಕಿನ ಹಿರಿಯ ಸದಸ್ಯರಾದ ವಸಂತ ನೇತ್ರೆಕರ್ ರಾಧಾಬಾಯಿ ಮೆಣಸಿ ದಾಮೋದರ ಭಟ್ ಪ್ರಕಾಶ ಬಂಗ್ಲೆ ವಾಮನ ನಾಡಿಗ ಹಾಗೂ ಮಹಾಬಲೇಶ್ವರ ಭಟ್ ಕಕ್ಕೋಡ ಅವರನ್ನು ಸನ್ಮಾನಿಸಲಾಯಿತು. 25 ವರ್ಷಗಳ ಕಾಯಂ ಸೇವೆ ಸಲ್ಲಿಸಿ ಕಾರ್ಯ ನಿರ್ವಹಿಸುತ್ತಿರುವ ಬ್ಯಾಂಕಿನ 6 ಸಿಬ್ಬಂದಿಗೆ ನಗದು ಬಹುಮಾನ ನೀಡಿ ಗೌರವಿಸಲಾಯಿತು. ಬ್ಯಾಂಕಿನ ಸದಸ್ಯರ ಪ್ರತಿಭಾನ್ವಿತ ಮಕ್ಕಳಿಗೆ ಪ್ರೋತ್ಸಾಹಕವಾಗಿ ₹3.08 ಲಕ್ಷ ಪ್ರತಿಭಾ ಪುರಸ್ಕಾರ ನೀಡಲಾಯಿತು. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>