<p>ಶಿರಸಿ: ‘ಸಹಕಾರ ಕ್ಷೇತ್ರದತ್ತ ಯುವ ಜನತೆಯನ್ನು ಸೆಳೆಯುವ ಜತೆಗೆ ಈ ಕ್ಷೇತ್ರದ ಕುರಿತು ಸೂಕ್ತ ತರಬೇತಿ ನೀಡುವ ಉದ್ದೇಶದೊಂದಿಗೆ ಸಹಕಾರ ಭವನವನ್ನು ಶಿರಸಿಯಲ್ಲಿ ಶೀಘ್ರ ಸ್ಥಾಪಿಸಲಾಗುವುದು’ ಎಂದು ಕೆಡಿಸಿಸಿ ಬ್ಯಾಂಕ್ ಅಧ್ಯಕ್ಷರೂ ಆಗಿರುವ ಕಾರ್ಮಿಕ ಸಚಿವ ಶಿವರಾಮ ಹೆಬ್ಬಾರ ಹೇಳಿದರು.</p>.<p>ಇಲ್ಲಿನ ಟಿ.ಆರ್.ಸಿ. ಸಭಾಂಗಣದಲ್ಲಿ ಭಾನುವಾರ ಕೆಡಿಸಿಸಿ ಬ್ಯಾಂಕ್ನ ಶತಮಾನೋತ್ಸವದ ಸಂಭ್ರಮಾಚರಣೆ ನೆನಪಿಗೆ ಹೊರತರಲಾದ ‘ಶತಮಾನದ ಸಂಭ್ರಮ’ ಸ್ಮರಣ ಸಂಚಿಕೆ ಬಿಡುಗಡೆಗೊಳಿಸಿ ಅವರು ಮಾತನಾಡಿದರು.</p>.<p>‘ಸಹಕಾರ ಸಂಘಗಳು ಸ್ವಾಯತ್ತವಾಗಿದ್ದರೆ ಸ್ವಾಭಿಮಾನದ ಬದುಕು ಕಟ್ಟಿಕೊಳ್ಳಲು ರೈತರಿಗೂ ಅನುಕೂಲವಾಗಲಿದೆ. ಸಹಕಾರ ಕ್ಷೇತ್ರ ಬಲಾಢ್ಯವಾಗಿರುವ ಕಡೆಗಳಲ್ಲಿ ರೈತರು ಉತ್ತಮ ಸ್ಥಿತಿಯಲ್ಲಿದ್ದಾರೆ. ಉತ್ತರ ಕನ್ನಡದಲ್ಲಿ ಈ ಕ್ಷೇತ್ರ ಬಲವಾಗಿ ಬೇರೂರಿದೆ’ ಎಂದರು.</p>.<p>ಸಹಕಾರ ಕ್ಷೇತ್ರದ ಪ್ರಮುಖ ಜಿ.ಟಿ.ಹೆಗಡೆ ತಟ್ಟೀಸರ, ‘ಸಾಮಾನ್ಯ ಜನರಿಗೂ ಸಹಕಾರ ಕ್ಷೇತ್ರದ ಬಗ್ಗೆ ಜ್ಞಾನ ಮೂಡಬೇಕು. ಶಾಲಾ ಪಠ್ಯಗಳಲ್ಲಿಯೂ ಸಹಕಾರ ತತ್ವಗಳ ಬಗ್ಗೆ ಪಾಠ ಬರಬೇಕು’ ಎಂದರು.</p>.<p>ಸ್ಮರಣ ಸಂಚಿಕೆಯ ಸಂಪಾದಕ ಎಸ್.ಪಿ.ಶೆಟ್ಟಿ, ‘ಜಿಲ್ಲೆಯ ಹಲವು ಸಂಘ ಸಂಸ್ಥೆಗಳು ಆರ್ಥಿಕ ಸಂಕಷ್ಟದ ಸ್ಥಿತಿ ತಲುಪಿದ್ದಾಗ ಡಿಸಿಸಿ ಬ್ಯಾಂಕ್ ನೆರವಿಗೆ ನಿಂತಿದೆ. ಡಿಸಿಸಿ ಬ್ಯಾಂಕ್ಗೆ ಪ್ರಾಮುಖ್ಯತೆ ನೀಡದೆ ಸಹಕಾರ ಸಂಘಗಳು ಪರ್ಯಾಯ ಮಾರ್ಗದಲ್ಲಿ ನಡೆಯುವುದು ಸೂಕ್ತವಲ್ಲ’ ಎಂದರು.</p>.<p>ಬ್ಯಾಂಕ್ ಉಪಾಧ್ಯಕ್ಷ ಮೋಹನದಾಸ ನಾಯಕ, ನಿರ್ದೇಶಕರಾದ ಜಿ.ಆರ್.ಹೆಗಡೆ ಸೋಂದಾ, ಸುರೇಶ್ಚಂದ್ರ ಹೆಗಡೆ ಕೆಶಿನ್ಮನೆ, ಆರ್.ಎಂ.ಹೆಗಡೆ ಬಾಳೇಸರ, ರಾಮಕೃಷ್ಣ ಹೆಗಡೆ ಕಡವೆ, ಎಲ್.ಟಿ.ಪಾಟೀಲ, ಪ್ರಮೋದ ಢವಳೆ, ಕೃಷ್ಣ ದೇಸಾಯಿ, ರಾಘವೇಂದ್ರ ಶಾಸ್ತ್ರಿ, ವ್ಯವಸ್ಥಾಪಕ ನಿರ್ದೇಶಕ ಆರ್.ಜಿ.ಭಾಗ್ವತ್ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಶಿರಸಿ: ‘ಸಹಕಾರ ಕ್ಷೇತ್ರದತ್ತ ಯುವ ಜನತೆಯನ್ನು ಸೆಳೆಯುವ ಜತೆಗೆ ಈ ಕ್ಷೇತ್ರದ ಕುರಿತು ಸೂಕ್ತ ತರಬೇತಿ ನೀಡುವ ಉದ್ದೇಶದೊಂದಿಗೆ ಸಹಕಾರ ಭವನವನ್ನು ಶಿರಸಿಯಲ್ಲಿ ಶೀಘ್ರ ಸ್ಥಾಪಿಸಲಾಗುವುದು’ ಎಂದು ಕೆಡಿಸಿಸಿ ಬ್ಯಾಂಕ್ ಅಧ್ಯಕ್ಷರೂ ಆಗಿರುವ ಕಾರ್ಮಿಕ ಸಚಿವ ಶಿವರಾಮ ಹೆಬ್ಬಾರ ಹೇಳಿದರು.</p>.<p>ಇಲ್ಲಿನ ಟಿ.ಆರ್.ಸಿ. ಸಭಾಂಗಣದಲ್ಲಿ ಭಾನುವಾರ ಕೆಡಿಸಿಸಿ ಬ್ಯಾಂಕ್ನ ಶತಮಾನೋತ್ಸವದ ಸಂಭ್ರಮಾಚರಣೆ ನೆನಪಿಗೆ ಹೊರತರಲಾದ ‘ಶತಮಾನದ ಸಂಭ್ರಮ’ ಸ್ಮರಣ ಸಂಚಿಕೆ ಬಿಡುಗಡೆಗೊಳಿಸಿ ಅವರು ಮಾತನಾಡಿದರು.</p>.<p>‘ಸಹಕಾರ ಸಂಘಗಳು ಸ್ವಾಯತ್ತವಾಗಿದ್ದರೆ ಸ್ವಾಭಿಮಾನದ ಬದುಕು ಕಟ್ಟಿಕೊಳ್ಳಲು ರೈತರಿಗೂ ಅನುಕೂಲವಾಗಲಿದೆ. ಸಹಕಾರ ಕ್ಷೇತ್ರ ಬಲಾಢ್ಯವಾಗಿರುವ ಕಡೆಗಳಲ್ಲಿ ರೈತರು ಉತ್ತಮ ಸ್ಥಿತಿಯಲ್ಲಿದ್ದಾರೆ. ಉತ್ತರ ಕನ್ನಡದಲ್ಲಿ ಈ ಕ್ಷೇತ್ರ ಬಲವಾಗಿ ಬೇರೂರಿದೆ’ ಎಂದರು.</p>.<p>ಸಹಕಾರ ಕ್ಷೇತ್ರದ ಪ್ರಮುಖ ಜಿ.ಟಿ.ಹೆಗಡೆ ತಟ್ಟೀಸರ, ‘ಸಾಮಾನ್ಯ ಜನರಿಗೂ ಸಹಕಾರ ಕ್ಷೇತ್ರದ ಬಗ್ಗೆ ಜ್ಞಾನ ಮೂಡಬೇಕು. ಶಾಲಾ ಪಠ್ಯಗಳಲ್ಲಿಯೂ ಸಹಕಾರ ತತ್ವಗಳ ಬಗ್ಗೆ ಪಾಠ ಬರಬೇಕು’ ಎಂದರು.</p>.<p>ಸ್ಮರಣ ಸಂಚಿಕೆಯ ಸಂಪಾದಕ ಎಸ್.ಪಿ.ಶೆಟ್ಟಿ, ‘ಜಿಲ್ಲೆಯ ಹಲವು ಸಂಘ ಸಂಸ್ಥೆಗಳು ಆರ್ಥಿಕ ಸಂಕಷ್ಟದ ಸ್ಥಿತಿ ತಲುಪಿದ್ದಾಗ ಡಿಸಿಸಿ ಬ್ಯಾಂಕ್ ನೆರವಿಗೆ ನಿಂತಿದೆ. ಡಿಸಿಸಿ ಬ್ಯಾಂಕ್ಗೆ ಪ್ರಾಮುಖ್ಯತೆ ನೀಡದೆ ಸಹಕಾರ ಸಂಘಗಳು ಪರ್ಯಾಯ ಮಾರ್ಗದಲ್ಲಿ ನಡೆಯುವುದು ಸೂಕ್ತವಲ್ಲ’ ಎಂದರು.</p>.<p>ಬ್ಯಾಂಕ್ ಉಪಾಧ್ಯಕ್ಷ ಮೋಹನದಾಸ ನಾಯಕ, ನಿರ್ದೇಶಕರಾದ ಜಿ.ಆರ್.ಹೆಗಡೆ ಸೋಂದಾ, ಸುರೇಶ್ಚಂದ್ರ ಹೆಗಡೆ ಕೆಶಿನ್ಮನೆ, ಆರ್.ಎಂ.ಹೆಗಡೆ ಬಾಳೇಸರ, ರಾಮಕೃಷ್ಣ ಹೆಗಡೆ ಕಡವೆ, ಎಲ್.ಟಿ.ಪಾಟೀಲ, ಪ್ರಮೋದ ಢವಳೆ, ಕೃಷ್ಣ ದೇಸಾಯಿ, ರಾಘವೇಂದ್ರ ಶಾಸ್ತ್ರಿ, ವ್ಯವಸ್ಥಾಪಕ ನಿರ್ದೇಶಕ ಆರ್.ಜಿ.ಭಾಗ್ವತ್ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>