<p><strong>ಹೊನ್ನಾವರ (ಉತ್ತರ ಕನ್ನಡ):</strong> ತಾಲ್ಲೂಕಿನ ಸಾಲ್ಕೋಡ ಕೊಂಡಾಕುಳಿ ರಸ್ತೆ ಪಕ್ಕದ ಬೆಟ್ಟವೊಂದರಲ್ಲಿ ಮೇಯಲು ಬಿಟ್ಟಿದ್ದ ಹಸುವೊಂದನ್ನು ದುಷ್ಕರ್ಮಿಗಳು ಮಾಂಸಕ್ಕಾಗಿ ಕೊಂದು, ಮೃತ ಹಸುವಿನ ಹೊಟ್ಟೆಯಲ್ಲಿದ್ದ ಭ್ರೂಣಾವಸ್ಥೆಯ ಕರುವನ್ನು ಬಿಟ್ಟು ಪರಾರಿಯಾಗಿದ್ದಾರೆ.</p>.<p>ಘಟನೆಗೆ ಸಂಬಂಧಿಸಿದಂತೆ ಮೃತ ಹಸುವಿನ ಮಾಲೀಕ ಕೃಷ್ಣ ನಾರಾಯಣ ಆಚಾರಿ ಭಾನುವಾರ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.</p>.<p>‘10 ವರ್ಷಗಳಿಂದ ನಾನು ಸಾಕಿದ್ದ ಕಪ್ಪು ಬಣ್ಣದ ಆಕಳನ್ನು ಶನಿವಾರ ಕಳವು ಮಾಡಿ ಅದನ್ನು ಸಾಯಿಸಿ ಮೃತ ಆಕಳಿನ ಕಾಲುಗಳು, ಕೋಡುಗಳು ಹಾಗೂ ಅದರ ಗರ್ಭದಲ್ಲಿದ್ದ ಭ್ರೂಣಾವಸ್ಥೆಯ ಕರುವನ್ನು ಮಾತ್ರ ಸ್ಥಳದಲ್ಲಿ ಬಿಟ್ಟು ಮಾಂಸವನ್ನು ತೆಗೆದುಕೊಂಡು ಹೋಗಿದ್ದಾರೆ’ ಎಂದು ದೂರಿನಲ್ಲಿ ತಿಳಿಸಿದ್ದಾರೆ.</p>.<p>‘ಘಟನೆಗೆ ಸಂಬಂಧಿಸಿದ ಆರೋಪಿಗಳ ಪತ್ತೆಯಾಗಿಲ್ಲ. ತನಿಖೆ ಕೈಗೊಳ್ಳಲಾಗಿದೆ' ಎಂದು ಪೊಲೀಸರು ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹೊನ್ನಾವರ (ಉತ್ತರ ಕನ್ನಡ):</strong> ತಾಲ್ಲೂಕಿನ ಸಾಲ್ಕೋಡ ಕೊಂಡಾಕುಳಿ ರಸ್ತೆ ಪಕ್ಕದ ಬೆಟ್ಟವೊಂದರಲ್ಲಿ ಮೇಯಲು ಬಿಟ್ಟಿದ್ದ ಹಸುವೊಂದನ್ನು ದುಷ್ಕರ್ಮಿಗಳು ಮಾಂಸಕ್ಕಾಗಿ ಕೊಂದು, ಮೃತ ಹಸುವಿನ ಹೊಟ್ಟೆಯಲ್ಲಿದ್ದ ಭ್ರೂಣಾವಸ್ಥೆಯ ಕರುವನ್ನು ಬಿಟ್ಟು ಪರಾರಿಯಾಗಿದ್ದಾರೆ.</p>.<p>ಘಟನೆಗೆ ಸಂಬಂಧಿಸಿದಂತೆ ಮೃತ ಹಸುವಿನ ಮಾಲೀಕ ಕೃಷ್ಣ ನಾರಾಯಣ ಆಚಾರಿ ಭಾನುವಾರ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.</p>.<p>‘10 ವರ್ಷಗಳಿಂದ ನಾನು ಸಾಕಿದ್ದ ಕಪ್ಪು ಬಣ್ಣದ ಆಕಳನ್ನು ಶನಿವಾರ ಕಳವು ಮಾಡಿ ಅದನ್ನು ಸಾಯಿಸಿ ಮೃತ ಆಕಳಿನ ಕಾಲುಗಳು, ಕೋಡುಗಳು ಹಾಗೂ ಅದರ ಗರ್ಭದಲ್ಲಿದ್ದ ಭ್ರೂಣಾವಸ್ಥೆಯ ಕರುವನ್ನು ಮಾತ್ರ ಸ್ಥಳದಲ್ಲಿ ಬಿಟ್ಟು ಮಾಂಸವನ್ನು ತೆಗೆದುಕೊಂಡು ಹೋಗಿದ್ದಾರೆ’ ಎಂದು ದೂರಿನಲ್ಲಿ ತಿಳಿಸಿದ್ದಾರೆ.</p>.<p>‘ಘಟನೆಗೆ ಸಂಬಂಧಿಸಿದ ಆರೋಪಿಗಳ ಪತ್ತೆಯಾಗಿಲ್ಲ. ತನಿಖೆ ಕೈಗೊಳ್ಳಲಾಗಿದೆ' ಎಂದು ಪೊಲೀಸರು ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>