2025–26ನೇ ಸಾಲಿನ ಹವಾಮಾನಾಧಾರಿತ ಬೆಳೆ ವಿಮೆ ಯೋಜನೆ ಅನುಷ್ಠಾನದ ಬಗ್ಗೆ ಸರ್ಕಾರದಿಂದ ಅಧಿಸೂಚನೆ ಬಂದಿಲ್ಲ. ಶೀಘ್ರದಲ್ಲೇ ಅಧಿಸೂಚನೆ ಪ್ರಕಟವಾಗುವ ವಿಶ್ವಾಸವಿದೆ
ಬಿ.ಪಿ.ಸತೀಶ ತೋಟಗಾರಿಕಾ ಇಲಾಖೆ ಡಿಡಿ
ಮಳೆ, ಕೊಳೆ ಆರಂಭ:ಆತಂಕ
ಜಿಲ್ಲೆಯಾದ್ಯಂತ ಮೇ ತಿಂಗಳ ಆರಂಭದಿಂದಲೂ ಭಾರಿ ಮಳೆಯಾಗುತ್ತಿದೆ. ಮಳೆ ಹಾಗೂ ತೇವಾಂಶದ ಕಾರಣ ಅಡಿಕೆ ಫಸಲಿಗೆ ಅಲ್ಲಲ್ಲಿ ಕೊಳೆರೋಗ ಕಾಣಿಸಿಕೊಳ್ಳುತ್ತಿದೆ. ರೈತರಿಗೆ ಬೆಳೆ ವಿಮೆಯ ಸೌಲಭ್ಯ ಸಿಗಬೇಕೆಂದರೆ ವೈಜ್ಞಾನಿಕವಾಗಿ ಮಳೆ ಮಾಪನ ಪ್ರತಿದಿನ ಆಗಬೇಕಾಗಿರುತ್ತದೆ. ಒಂದೊಮ್ಮೆ ಸಮಯಕ್ಕೆ ಸರಿಯಾಗಿ ಜೂನ್-ಜುಲೈ ತಿಂಗಳಿನಲ್ಲಿ ವಿಮಾ ಕಂಪನಿಗಳಿಗೆ ಮಾಹಿತಿ ಸಿಗದಿದ್ದರೆ ರೈತರಿಗೆ ನಷ್ಟವಾಗುತ್ತದೆ. ಈಗಾಗಲೇ ಜುಲೈ ತಿಂಗಳು ಆರಂಭವಾಗಿದ್ದು ವಿಪರೀತ ಮಳೆಯಾಗುತ್ತಿದೆ. ಜಿಲ್ಲೆಯಲ್ಲಿ ಈವರೆಗೆ ಸುರಿದಿರುವ ಮಳೆಯ ಮಾಹಿತಿಯು ರೈತರಿಗೆ ಸಮರ್ಪಕವಾಗಿ ತಿಳಿಯದೇ ಆತಂಕಕ್ಕೊಳಗಾಗಿದ್ದಾರೆ.