<p><strong>ಕಾರವಾರ: </strong>ನಗರದಲ್ಲಿ ರಾಷ್ಟ್ರೀಯ ಹೆದ್ದಾರಿ 66ರ ಚತುಷ್ಪಥ ಕಾಮಗಾರಿಗಾಗಿ ತೆರವು ಮಾಡಲಾದ ಬಸ್ ತಂಗುದಾಣದ (ಶೆಲ್ಟರ್) ಪುನರ್ ನಿರ್ಮಾಣಕ್ಕೂ ಕರಾವಳಿ ನಿಯಂತ್ರಣ ವಲಯದ (ಸಿ.ಆರ್.ಝೆಡ್) ನಿಯಮಗಳು ಅಡ್ಡಿಯಾಗಿವೆ. ನಗರಸಭೆ ಕಚೇರಿಯಲ್ಲಿ ಶುಕ್ರವಾರ ನಡೆದ ಸಾಮಾನ್ಯ ಸಭೆಯಲ್ಲಿ ಈ ಬಗ್ಗೆ ಚರ್ಚೆಯಾಯಿತು.</p>.<p>ಸದಸ್ಯ ಸಂದೀಪ ತಳೇಕರ್ ಮಾತನಾಡಿ, ‘ಕಾಳಿ ನದಿ ಸೇತುವೆ ಬಳಿಯಿದ್ದ ತಂಗುದಾಣ ದುರಸ್ತಿಯಾಗಿಲ್ಲ. ಸ್ವಾಗತ ಕಮಾನುಗಳ ನಿರ್ಮಾಣವಾಗಿಲ್ಲ’ ಎಂದು ಆಕ್ಷೇಪ ವ್ಯಕ್ತಪಡಿಸಿದರು.</p>.<p>ಈ ಬಗ್ಗೆ ಪ್ರತಿಕ್ರಿಯಿಸಿದ ನಗರಸಭೆ ಪ್ರಭಾರ ಆಯುಕ್ತ ಆರ್.ಪಿ. ನಾಯ್ಕ, ‘ಕಾಳಿ ನದಿ ಬಳಿಯ ಬಸ್ ತಂಗುದಾಣ ಸಿ.ಆರ್.ಝೆಡ್ ಪರಿಮಿತಿಯಲ್ಲಿದೆ. ಹಾಗಾಗಿ ಅದನ್ನು ಪುನಃ ನಿರ್ಮಿಸಲು ಅನುಮತಿ ಕೊಡಬಾರದು ಎಂದು ಸಮಿತಿಯ ಸಭೆಯಲ್ಲಿ ಠರಾವು ಮಾಡಿದ್ದಾರೆ’ ಎಂದರು.</p>.<p>‘ಈ ಹಿಂದೆ ನಗರಸಭೆಯಿಂದ ನಿಯಮ ಮೀರಿ ನಿರ್ಮಿಸಲಾಗಿದೆ ಎಂದು ಸಭೆಯಲ್ಲಿ ಚರ್ಚಿಸಲಾಗಿದೆ. ಈ ಬಗ್ಗೆ ಜಿಲ್ಲಾಧಿಕಾರಿ ಗಮನಕ್ಕೆ ತರಲಾಗಿದೆ. ಅಲ್ಲಿ ರಸ್ತೆಯ ಎರಡೂ ಕಡೆಗಳಲ್ಲಿ ಬಸ್ ತಂಗುದಾಣ ನಿರ್ಮಿಸಲು ಐ.ಆರ್.ಬಿ.ಗೆ ಸೂಚಿಸುವುದಾಗಿ ಹೇಳಿದ್ದಾರೆ’ ಎಂದು ಸ್ಪಷ್ಟಪಡಿಸಿದರು.</p>.<p>‘ಐ.ಆರ್.ಬಿ.ಯು ನಗರಸಭೆಗೆ ಬಾಕಿ ಉಳಿಸಿರುವ ₹ 2.55 ಕೋಟಿಯನ್ನು ಮರುಪಾವತಿಸುವಂತೆ ಮೂರು ಬಾರಿ ಪತ್ರ ಬರೆಯಲಾಗಿದೆ. ಆದರೂ ಪ್ರತಿಕ್ರಿಯೆ ಬಂದಿಲ್ಲ’ ಎಂದೂ ತಿಳಿಸಿದರು. ಸಂಸ್ಥೆಯ ವಿರುದ್ಧ ದಾವೆ ಹೂಡುವಂತೆ ಠರಾವು ಮಾಡಲು ಸದಸ್ಯರು ಸಲಹೆ ನೀಡಿದರು.</p>.<p>ತ್ಯಾಜ್ಯ ನೀರು ವಿಲೇವಾರಿ ತೊಟ್ಟಿ ಇಲ್ಲದ ಅಪಾರ್ಟ್ಮೆಂಟ್ಗಳ ವಿರುದ್ಧ ಮೊಕದ್ದಮೆ ದಾಖಲಿಸಲಾಗುತ್ತಿದೆ. ಅಂಥ ಕಟ್ಟಡಗಳ ನಿರ್ಮಾಣಕ್ಕೆ ಅನುಮತಿ ನೀಡಿದ ಅಧಿಕಾರಿಗಳ ವಿರುದ್ಧವೂ ಮೊಕದ್ದಮೆ ದಾಖಲಿಸಬೇಕು ಎಂದು ಸಂದೀಪ ಒತ್ತಾಯಿಸಿದರು. ಈ ಬಗ್ಗೆ ಹಿಂದಿನ ಠರಾವಿಗೆ ತಿದ್ದುಪಡಿ ಮಾಡಲು ನಗರಸಭೆ ಅಧ್ಯಕ್ಷ ಡಾ. ನಿತಿನ್ ಪಿಕಳೆ ಸೂಚಿಸಿದರು.</p>.<p>ಸದಸ್ಯ ಮಕ್ಬೂಲ್ ಶೇಖ್ ಮಾತನಾಡಿ, ನಗರದ ಅಭಿವೃದ್ಧಿ ಸಂಬಂಧ ಪ್ರತ್ಯೇಕ ಸಭೆ ಹಮ್ಮಿಕೊಳ್ಳಬೇಕು ಎಂದರು. ಡಾ. ಪಿಕಳೆ, ‘ಪ್ರತಿ ಮಂಗಳವಾರ ಸಂಜೆ 4ರ ನಂತರ ಸದಸ್ಯರನ್ನು ಮಾತ್ರ ಭೇಟಿಯಾಗುತ್ತೇನೆ’ ಎಂದು ತಿಳಿಸಿದರು.</p>.<p class="Subhead"><strong>ಐದು ಕಡೆ ಬ್ಯಾನರ್ಗೆ ಅವಕಾಶ:</strong></p>.<p>ನಗರ ವ್ಯಾಪ್ತಿಯ ಧಾರ್ಮಿಕ ಕೇಂದ್ರಗಳ ವಾರ್ಷಿಕ ಕಾರ್ಯಕ್ರಮಗಳ ಬಗ್ಗೆ ಐದು ಕಡೆ ಉಚಿತವಾಗಿ ಬ್ಯಾನರ್ ಕಟ್ಟಲು ಅವಕಾಶ ನೀಡಬೇಕು ಎಂದು ಸದಸ್ಯರು ಒತ್ತಾಯಿಸಿದರು. ಈ ಬಗ್ಗೆ ಹಿಂದಿನ ಠರಾವಿಗೆ ತಿದ್ದುಪಡಿ ತರಲು ತೀರ್ಮಾನಿಸಲಾಯಿತು.</p>.<p>‘ಬ್ಯಾನರ್ಗಳನ್ನು ಕಟ್ಟಿದವರೇ ತೆರವು ಮಾಡಬೇಕು. ಒಂದುವೇಳೆ, ಮಾಡದಿದ್ದರೆ ಠೇವಣಿ ಇಡಲಾಗುವ ₹ 1,000ವನ್ನು ಮುಟ್ಟುಗೋಲು ಹಾಕಿಕೊಳ್ಳಲಾಗುವುದು’ ಎಂದು ಆರ್.ಪಿ. ನಾಯ್ಕ ತಿಳಿಸಿದರು.</p>.<p>ಉಪಾಧ್ಯಕ್ಷ ಪ್ರಕಾಶ ಪಿ. ನಾಯ್ಕ, ಸ್ಥಾಯಿ ಸಮಿತಿ ಅಧ್ಯಕ್ಷೆ ಸಂಧ್ಯಾ ಬಾಡ್ಕರ್ ವೇದಿಕೆಯಲ್ಲಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕಾರವಾರ: </strong>ನಗರದಲ್ಲಿ ರಾಷ್ಟ್ರೀಯ ಹೆದ್ದಾರಿ 66ರ ಚತುಷ್ಪಥ ಕಾಮಗಾರಿಗಾಗಿ ತೆರವು ಮಾಡಲಾದ ಬಸ್ ತಂಗುದಾಣದ (ಶೆಲ್ಟರ್) ಪುನರ್ ನಿರ್ಮಾಣಕ್ಕೂ ಕರಾವಳಿ ನಿಯಂತ್ರಣ ವಲಯದ (ಸಿ.ಆರ್.ಝೆಡ್) ನಿಯಮಗಳು ಅಡ್ಡಿಯಾಗಿವೆ. ನಗರಸಭೆ ಕಚೇರಿಯಲ್ಲಿ ಶುಕ್ರವಾರ ನಡೆದ ಸಾಮಾನ್ಯ ಸಭೆಯಲ್ಲಿ ಈ ಬಗ್ಗೆ ಚರ್ಚೆಯಾಯಿತು.</p>.<p>ಸದಸ್ಯ ಸಂದೀಪ ತಳೇಕರ್ ಮಾತನಾಡಿ, ‘ಕಾಳಿ ನದಿ ಸೇತುವೆ ಬಳಿಯಿದ್ದ ತಂಗುದಾಣ ದುರಸ್ತಿಯಾಗಿಲ್ಲ. ಸ್ವಾಗತ ಕಮಾನುಗಳ ನಿರ್ಮಾಣವಾಗಿಲ್ಲ’ ಎಂದು ಆಕ್ಷೇಪ ವ್ಯಕ್ತಪಡಿಸಿದರು.</p>.<p>ಈ ಬಗ್ಗೆ ಪ್ರತಿಕ್ರಿಯಿಸಿದ ನಗರಸಭೆ ಪ್ರಭಾರ ಆಯುಕ್ತ ಆರ್.ಪಿ. ನಾಯ್ಕ, ‘ಕಾಳಿ ನದಿ ಬಳಿಯ ಬಸ್ ತಂಗುದಾಣ ಸಿ.ಆರ್.ಝೆಡ್ ಪರಿಮಿತಿಯಲ್ಲಿದೆ. ಹಾಗಾಗಿ ಅದನ್ನು ಪುನಃ ನಿರ್ಮಿಸಲು ಅನುಮತಿ ಕೊಡಬಾರದು ಎಂದು ಸಮಿತಿಯ ಸಭೆಯಲ್ಲಿ ಠರಾವು ಮಾಡಿದ್ದಾರೆ’ ಎಂದರು.</p>.<p>‘ಈ ಹಿಂದೆ ನಗರಸಭೆಯಿಂದ ನಿಯಮ ಮೀರಿ ನಿರ್ಮಿಸಲಾಗಿದೆ ಎಂದು ಸಭೆಯಲ್ಲಿ ಚರ್ಚಿಸಲಾಗಿದೆ. ಈ ಬಗ್ಗೆ ಜಿಲ್ಲಾಧಿಕಾರಿ ಗಮನಕ್ಕೆ ತರಲಾಗಿದೆ. ಅಲ್ಲಿ ರಸ್ತೆಯ ಎರಡೂ ಕಡೆಗಳಲ್ಲಿ ಬಸ್ ತಂಗುದಾಣ ನಿರ್ಮಿಸಲು ಐ.ಆರ್.ಬಿ.ಗೆ ಸೂಚಿಸುವುದಾಗಿ ಹೇಳಿದ್ದಾರೆ’ ಎಂದು ಸ್ಪಷ್ಟಪಡಿಸಿದರು.</p>.<p>‘ಐ.ಆರ್.ಬಿ.ಯು ನಗರಸಭೆಗೆ ಬಾಕಿ ಉಳಿಸಿರುವ ₹ 2.55 ಕೋಟಿಯನ್ನು ಮರುಪಾವತಿಸುವಂತೆ ಮೂರು ಬಾರಿ ಪತ್ರ ಬರೆಯಲಾಗಿದೆ. ಆದರೂ ಪ್ರತಿಕ್ರಿಯೆ ಬಂದಿಲ್ಲ’ ಎಂದೂ ತಿಳಿಸಿದರು. ಸಂಸ್ಥೆಯ ವಿರುದ್ಧ ದಾವೆ ಹೂಡುವಂತೆ ಠರಾವು ಮಾಡಲು ಸದಸ್ಯರು ಸಲಹೆ ನೀಡಿದರು.</p>.<p>ತ್ಯಾಜ್ಯ ನೀರು ವಿಲೇವಾರಿ ತೊಟ್ಟಿ ಇಲ್ಲದ ಅಪಾರ್ಟ್ಮೆಂಟ್ಗಳ ವಿರುದ್ಧ ಮೊಕದ್ದಮೆ ದಾಖಲಿಸಲಾಗುತ್ತಿದೆ. ಅಂಥ ಕಟ್ಟಡಗಳ ನಿರ್ಮಾಣಕ್ಕೆ ಅನುಮತಿ ನೀಡಿದ ಅಧಿಕಾರಿಗಳ ವಿರುದ್ಧವೂ ಮೊಕದ್ದಮೆ ದಾಖಲಿಸಬೇಕು ಎಂದು ಸಂದೀಪ ಒತ್ತಾಯಿಸಿದರು. ಈ ಬಗ್ಗೆ ಹಿಂದಿನ ಠರಾವಿಗೆ ತಿದ್ದುಪಡಿ ಮಾಡಲು ನಗರಸಭೆ ಅಧ್ಯಕ್ಷ ಡಾ. ನಿತಿನ್ ಪಿಕಳೆ ಸೂಚಿಸಿದರು.</p>.<p>ಸದಸ್ಯ ಮಕ್ಬೂಲ್ ಶೇಖ್ ಮಾತನಾಡಿ, ನಗರದ ಅಭಿವೃದ್ಧಿ ಸಂಬಂಧ ಪ್ರತ್ಯೇಕ ಸಭೆ ಹಮ್ಮಿಕೊಳ್ಳಬೇಕು ಎಂದರು. ಡಾ. ಪಿಕಳೆ, ‘ಪ್ರತಿ ಮಂಗಳವಾರ ಸಂಜೆ 4ರ ನಂತರ ಸದಸ್ಯರನ್ನು ಮಾತ್ರ ಭೇಟಿಯಾಗುತ್ತೇನೆ’ ಎಂದು ತಿಳಿಸಿದರು.</p>.<p class="Subhead"><strong>ಐದು ಕಡೆ ಬ್ಯಾನರ್ಗೆ ಅವಕಾಶ:</strong></p>.<p>ನಗರ ವ್ಯಾಪ್ತಿಯ ಧಾರ್ಮಿಕ ಕೇಂದ್ರಗಳ ವಾರ್ಷಿಕ ಕಾರ್ಯಕ್ರಮಗಳ ಬಗ್ಗೆ ಐದು ಕಡೆ ಉಚಿತವಾಗಿ ಬ್ಯಾನರ್ ಕಟ್ಟಲು ಅವಕಾಶ ನೀಡಬೇಕು ಎಂದು ಸದಸ್ಯರು ಒತ್ತಾಯಿಸಿದರು. ಈ ಬಗ್ಗೆ ಹಿಂದಿನ ಠರಾವಿಗೆ ತಿದ್ದುಪಡಿ ತರಲು ತೀರ್ಮಾನಿಸಲಾಯಿತು.</p>.<p>‘ಬ್ಯಾನರ್ಗಳನ್ನು ಕಟ್ಟಿದವರೇ ತೆರವು ಮಾಡಬೇಕು. ಒಂದುವೇಳೆ, ಮಾಡದಿದ್ದರೆ ಠೇವಣಿ ಇಡಲಾಗುವ ₹ 1,000ವನ್ನು ಮುಟ್ಟುಗೋಲು ಹಾಕಿಕೊಳ್ಳಲಾಗುವುದು’ ಎಂದು ಆರ್.ಪಿ. ನಾಯ್ಕ ತಿಳಿಸಿದರು.</p>.<p>ಉಪಾಧ್ಯಕ್ಷ ಪ್ರಕಾಶ ಪಿ. ನಾಯ್ಕ, ಸ್ಥಾಯಿ ಸಮಿತಿ ಅಧ್ಯಕ್ಷೆ ಸಂಧ್ಯಾ ಬಾಡ್ಕರ್ ವೇದಿಕೆಯಲ್ಲಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>