<p><strong>ಮುಂಡಗೋಡ:</strong> ‘ಭಾರತೀಯ ಪುರಾತನ ಸಂಸ್ಕೃತಿ ಹಾಗೂ ಪರಂಪರೆಯು ವಿಶ್ವಕ್ಕೆ ಮಾದರಿ ಆಗಿದೆ. ಸತ್ಯ, ಅಹಿಂಸೆ ಹಾಗೂ ಕರುಣೆಯು ಜಗತ್ತಿಗೆ ನೀಡಿದ ಕೊಡುಗೆ ಆಗಿದೆ’ ಎಂದು ಟಿಬೆಟನ್ ಧರ್ಮಗುರು ದಲೈಲಾಮಾ ಮೆಚ್ಚುಗೆ ವ್ಯಕ್ತಪಡಿಸಿದರು.</p>.<p>ತಾಲ್ಲೂಕಿನ ಟಿಬೆಟನ್ ಕ್ಯಾಂಪ್ ನಂ.6ರಲ್ಲಿ ನೂತನವಾಗಿ ನಿರ್ಮಿಸಿರುವ ಡ್ರೆಪುಂಗ್ ಗೋಮಾಂಗ್ ಚರ್ಚಾ ಸಭಾಂಗಣವನ್ನು ಶನಿವಾರ ಉದ್ಘಾಟಿಸಿ ಅವರು ಮಾತನಾಡಿದರು.</p>.<p>‘ಬೌದ್ಧ ಅಧ್ಯಯನ ನಿರಂತರವಾಗಿದ್ದರೆ ಮಾತ್ರ ಮುಂದಿನ ಶತಮಾನದವರೆಗೆ ಬೌದ್ಧ ಧರ್ಮದ ಪರಂಪರೆಯನ್ನು ಪಸರಿಸಲು ಸಾಧ್ಯ.ಶತಮಾನಗಳಿಂದ ಜಾರಿಯಲ್ಲಿರುವ ನಳಂದ ಪರಂಪರೆಯನ್ನು ಉಳಿಸಿ, ಬೆಳೆಸಿಕೊಂಡು ಹೋಗುತ್ತಿರುವ ಬಗ್ಗೆ<br />ಹೆಮ್ಮೆಯಿದೆ’ಎಂದು ಹೇಳಿದರು.</p>.<p>‘ನಿರಂತರ ಹಾಗೂ ಪ್ರಾಮಾಣಿಕ ಅಧ್ಯಯನ ಮಾತ್ರ ಸತ್ಯದ ಕಡೆ ದಾರಿ ತೋರಿಸಬಲ್ಲದು. ಬೌದ್ಧ ಧರ್ಮವನ್ನು 8ನೇ ಶತಮಾನದಲ್ಲಿ ಪ್ರಚುರಪಡಿಸಿದವರನ್ನು ಮರೆಯಲು ಸಾಧ್ಯವಿಲ್ಲ. ಬೌದ್ಧ ಧರ್ಮದ ಅಭ್ಯಾಸದಲ್ಲಿ ಚರ್ಚಾ ಪಾಠದ ಶಿಕ್ಷಣಕ್ಕೆ<br />ಹೆಚ್ಚಿನ ಮಹತ್ವ ನೀಡಲಾಗಿದೆ’ ಎಂದರು.</p>.<p>‘ಧರ್ಮದ ವಿಚಾರದಲ್ಲಿಬಡಿದಾಡಿಕೊಳ್ಳುವ ಘಟನೆಗಳು ಹೆಚ್ಚಾಗುತ್ತಿವೆ. ಜಗತ್ತಿನಲ್ಲಿ ಕಂಡುಬರುವ ಹಿಂಸಾಚಾರವನ್ನು ತಡೆಗಟ್ಟಲು, ಮಾನವೀಯ ಮೌಲ್ಯಗಳನ್ನು ಪರಿಣಾಮಕಾರಿಯಾಗಿ ಬೆಳೆಸುವ ಅವಶ್ಯಕತೆ ಇದೆ. ಅಹಿಂಸೆಯಿಂದ ಯಾರಿಗೂ ಹಾನಿ ಆಗುವುದಿಲ್ಲ’ ಎಂದು ಒತ್ತಿ ಹೇಳಿದರು.</p>.<p>ಸಮಾರಂಭದಲ್ಲಿ ಮಂಗೋಲಿಯಾ, ರಷ್ಯಾ, ನೇಪಾಳ, ಭೂತಾನ ಸೇರಿದಂತೆ ವಿವಿಧ ದೇಶಗಳಿಂದ ಬೌದ್ಧ ಅನುಯಾಯಿಗಳು ಪಾಲ್ಗೊಂಡಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮುಂಡಗೋಡ:</strong> ‘ಭಾರತೀಯ ಪುರಾತನ ಸಂಸ್ಕೃತಿ ಹಾಗೂ ಪರಂಪರೆಯು ವಿಶ್ವಕ್ಕೆ ಮಾದರಿ ಆಗಿದೆ. ಸತ್ಯ, ಅಹಿಂಸೆ ಹಾಗೂ ಕರುಣೆಯು ಜಗತ್ತಿಗೆ ನೀಡಿದ ಕೊಡುಗೆ ಆಗಿದೆ’ ಎಂದು ಟಿಬೆಟನ್ ಧರ್ಮಗುರು ದಲೈಲಾಮಾ ಮೆಚ್ಚುಗೆ ವ್ಯಕ್ತಪಡಿಸಿದರು.</p>.<p>ತಾಲ್ಲೂಕಿನ ಟಿಬೆಟನ್ ಕ್ಯಾಂಪ್ ನಂ.6ರಲ್ಲಿ ನೂತನವಾಗಿ ನಿರ್ಮಿಸಿರುವ ಡ್ರೆಪುಂಗ್ ಗೋಮಾಂಗ್ ಚರ್ಚಾ ಸಭಾಂಗಣವನ್ನು ಶನಿವಾರ ಉದ್ಘಾಟಿಸಿ ಅವರು ಮಾತನಾಡಿದರು.</p>.<p>‘ಬೌದ್ಧ ಅಧ್ಯಯನ ನಿರಂತರವಾಗಿದ್ದರೆ ಮಾತ್ರ ಮುಂದಿನ ಶತಮಾನದವರೆಗೆ ಬೌದ್ಧ ಧರ್ಮದ ಪರಂಪರೆಯನ್ನು ಪಸರಿಸಲು ಸಾಧ್ಯ.ಶತಮಾನಗಳಿಂದ ಜಾರಿಯಲ್ಲಿರುವ ನಳಂದ ಪರಂಪರೆಯನ್ನು ಉಳಿಸಿ, ಬೆಳೆಸಿಕೊಂಡು ಹೋಗುತ್ತಿರುವ ಬಗ್ಗೆ<br />ಹೆಮ್ಮೆಯಿದೆ’ಎಂದು ಹೇಳಿದರು.</p>.<p>‘ನಿರಂತರ ಹಾಗೂ ಪ್ರಾಮಾಣಿಕ ಅಧ್ಯಯನ ಮಾತ್ರ ಸತ್ಯದ ಕಡೆ ದಾರಿ ತೋರಿಸಬಲ್ಲದು. ಬೌದ್ಧ ಧರ್ಮವನ್ನು 8ನೇ ಶತಮಾನದಲ್ಲಿ ಪ್ರಚುರಪಡಿಸಿದವರನ್ನು ಮರೆಯಲು ಸಾಧ್ಯವಿಲ್ಲ. ಬೌದ್ಧ ಧರ್ಮದ ಅಭ್ಯಾಸದಲ್ಲಿ ಚರ್ಚಾ ಪಾಠದ ಶಿಕ್ಷಣಕ್ಕೆ<br />ಹೆಚ್ಚಿನ ಮಹತ್ವ ನೀಡಲಾಗಿದೆ’ ಎಂದರು.</p>.<p>‘ಧರ್ಮದ ವಿಚಾರದಲ್ಲಿಬಡಿದಾಡಿಕೊಳ್ಳುವ ಘಟನೆಗಳು ಹೆಚ್ಚಾಗುತ್ತಿವೆ. ಜಗತ್ತಿನಲ್ಲಿ ಕಂಡುಬರುವ ಹಿಂಸಾಚಾರವನ್ನು ತಡೆಗಟ್ಟಲು, ಮಾನವೀಯ ಮೌಲ್ಯಗಳನ್ನು ಪರಿಣಾಮಕಾರಿಯಾಗಿ ಬೆಳೆಸುವ ಅವಶ್ಯಕತೆ ಇದೆ. ಅಹಿಂಸೆಯಿಂದ ಯಾರಿಗೂ ಹಾನಿ ಆಗುವುದಿಲ್ಲ’ ಎಂದು ಒತ್ತಿ ಹೇಳಿದರು.</p>.<p>ಸಮಾರಂಭದಲ್ಲಿ ಮಂಗೋಲಿಯಾ, ರಷ್ಯಾ, ನೇಪಾಳ, ಭೂತಾನ ಸೇರಿದಂತೆ ವಿವಿಧ ದೇಶಗಳಿಂದ ಬೌದ್ಧ ಅನುಯಾಯಿಗಳು ಪಾಲ್ಗೊಂಡಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>