<p><strong>ಮುಂಡಗೋಡ (ಉತ್ತರ ಕನ್ನಡ ಜಿಲ್ಲೆ):</strong> ‘ಯುವ ಪೀಳಿಗೆಯು ಟಿಬೆಟಿಯನ್ ಧರ್ಮಗುರು ದಲೈ ಲಾಮಾ ಅವರ ಪರಸ್ಪರ ಸಹಾನುಭೂತಿ, ನೈತಿಕ ಜೀವನದ ಸಂದೇಶವನ್ನು ಮುಂದಕ್ಕೆ ಕೊಂಡೊಯ್ಯಬೇಕು’ ಎಂದು ಕೇಂದ್ರ ಸಂಸದೀಯ ವ್ಯವಹಾರಗಳ ಸಚಿವ ಕಿರಣ್ ರಿಜಿಜು ಹೇಳಿದರು. </p>.<p>ತಾಲ್ಲೂಕಿನ ಟಿಬೆಟಿಯನ್ ಕ್ಯಾಂಪ್ ನಂ. 6ರ ಡ್ರೆಪುಂಗ್ ಲೋಸಲಿಂಗ್ ಬೌದ್ಧ ಮಂದಿರದಲ್ಲಿ ದಲೈ ಲಾಮಾ ಅವರ 90ನೇ ಜನ್ಮದಿನದ ಪ್ರಯುಕ್ತ ಭಾನುವಾರ ಆಯೋಜಿಸಿದ್ದ ವಿದ್ವಾಂಸರ ಸಮ್ಮೇಳನದಲ್ಲಿ ಅವರು ಮಾತನಾಡಿದರು.</p>.<p>‘ದಲೈಲಾಮಾ ಅವರ ಜೀವನದ ಮೈಲಿಗಲ್ಲನ್ನು ಸದಾ ಸ್ಮರಿಸಬೇಕು. ಅವರ ಸಂದೇಶವಾದ ಕರುಣೆ, ಶಾಂತಿ, ಬುದ್ಧಿವಂತಿಕೆ ಮತ್ತು ಮಾನವೀಯತೆ ಗುಣಗಳನ್ನು ಅಳವಡಿಸಿಕೊಳ್ಳಬೇಕು’ ಎಂದು ಅವರು ಹೇಳಿದರು. </p>.<p>ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ, ಶಾಸಕ ಶಿವರಾಮ ಹೆಬ್ಬಾರ, ಬೌದ್ಧ ಮಂದಿರದ ಗಾಡೆನ್ ತ್ರಿ ರಿನ್ಪೋಚೆ ಮತ್ತು ಹಿರಿಯ ಭಿಕ್ಕುಗಳು ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮುಂಡಗೋಡ (ಉತ್ತರ ಕನ್ನಡ ಜಿಲ್ಲೆ):</strong> ‘ಯುವ ಪೀಳಿಗೆಯು ಟಿಬೆಟಿಯನ್ ಧರ್ಮಗುರು ದಲೈ ಲಾಮಾ ಅವರ ಪರಸ್ಪರ ಸಹಾನುಭೂತಿ, ನೈತಿಕ ಜೀವನದ ಸಂದೇಶವನ್ನು ಮುಂದಕ್ಕೆ ಕೊಂಡೊಯ್ಯಬೇಕು’ ಎಂದು ಕೇಂದ್ರ ಸಂಸದೀಯ ವ್ಯವಹಾರಗಳ ಸಚಿವ ಕಿರಣ್ ರಿಜಿಜು ಹೇಳಿದರು. </p>.<p>ತಾಲ್ಲೂಕಿನ ಟಿಬೆಟಿಯನ್ ಕ್ಯಾಂಪ್ ನಂ. 6ರ ಡ್ರೆಪುಂಗ್ ಲೋಸಲಿಂಗ್ ಬೌದ್ಧ ಮಂದಿರದಲ್ಲಿ ದಲೈ ಲಾಮಾ ಅವರ 90ನೇ ಜನ್ಮದಿನದ ಪ್ರಯುಕ್ತ ಭಾನುವಾರ ಆಯೋಜಿಸಿದ್ದ ವಿದ್ವಾಂಸರ ಸಮ್ಮೇಳನದಲ್ಲಿ ಅವರು ಮಾತನಾಡಿದರು.</p>.<p>‘ದಲೈಲಾಮಾ ಅವರ ಜೀವನದ ಮೈಲಿಗಲ್ಲನ್ನು ಸದಾ ಸ್ಮರಿಸಬೇಕು. ಅವರ ಸಂದೇಶವಾದ ಕರುಣೆ, ಶಾಂತಿ, ಬುದ್ಧಿವಂತಿಕೆ ಮತ್ತು ಮಾನವೀಯತೆ ಗುಣಗಳನ್ನು ಅಳವಡಿಸಿಕೊಳ್ಳಬೇಕು’ ಎಂದು ಅವರು ಹೇಳಿದರು. </p>.<p>ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ, ಶಾಸಕ ಶಿವರಾಮ ಹೆಬ್ಬಾರ, ಬೌದ್ಧ ಮಂದಿರದ ಗಾಡೆನ್ ತ್ರಿ ರಿನ್ಪೋಚೆ ಮತ್ತು ಹಿರಿಯ ಭಿಕ್ಕುಗಳು ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>