<p><strong>ದಾಂಡೇಲಿ</strong>: 'ಮತಗಳ್ಳರೇ ಅಧಿಕಾರ ಬಿಡಿ' ಸಂವಿಧಾನ ರಕ್ಷಿಸಿ ಪ್ರಜಾಪ್ರಭುತ್ವ ಉಳಿಸಿ' ಘೋಷಣೆಯೊಂದಿಗೆ ದಾಂಡೇಲಿ ಬ್ಲಾಕ್ ಕಾಂಗ್ರೆಸ್ ವತಿಯಿಂದ ಕೇಂದ್ರ ಸರ್ಕಾರ ವಿರುದ್ಧ ಪ್ರತಿಭಟನಾ ಮೆರವಣಿಗೆಯನ್ನು ಸೋಮಾನಿ ವೃತ್ತದಿಂದ ಪಟೇಲ್ ವೃತ್ತದ ವರೆಗೆ ಶುಕ್ರವಾರ ನಡೆಯಿತು.</p>.<p>ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಮೋಹನ್ ಹಲವಾಯಿ ಮಾತನಾಡಿ, ಸ್ವಾತಂತ್ರೋತ್ಸವ ಆಚರಣೆಯ ಈ ಸುಸಂದರ್ಭದಲ್ಲಿ ದೇಶಾದ್ಯಂತ ಪ್ರಜಾಪ್ರಭುತ್ವದ ಕಗ್ಗೋಲೆ ನಡೆಯುತ್ತಿದೆ, ದೇಶದ ಮುಂದಿನ ಪ್ರಧಾನಿ ರಾಹುಲ್ ಗಾಂಧಿ ನೇತೃತ್ವದಲ್ಲಿ ದೇಶಾದ್ಯಂತ ಈ ಪ್ರತಿಭಟನೆ ನಡೆಸಲಾಗುತ್ತಿದೆ. ಪ್ರಜಾಪ್ರಭುತ್ವ ಉಳಿದರೆ ಮಾತ್ರ ನಾವು ಸ್ವಾತಂತ್ರವಾಗಿ ಬದುಕು ಕಟ್ಟಿಕೊಳ್ಳಬಹುದು. ಆದರೆ,ಬಿಜೆಪಿ ಅವಧಿಯಲ್ಲಿ ನಮ್ಮ ಪ್ರಜಾಪ್ತಭುತ್ವಕ್ಕೆ ಅಪಾಯ ಎದುರಾಗಿದೆ. ಈ ನಿಟ್ಟಿನಲ್ಲಿ ನಾವೆಲ್ಲರೂ ರಾಷ್ಟ್ರ ಧ್ವಜವನ್ನು ಕೈಯಲ್ಲಿ ಹಿಡಿದು ಪಟೇಲ್ ವೃತ್ತದ ಬ್ಲಾಕ್ ಕಾಂಗ್ರೆಸ್ ಕಚೇರಿಯ ವರೆಗೆ ಮೆರವಣಿಗೆ ನಡೆಸುತ್ತಿದ್ದೇವೆ ಎಂದರು.</p>.<p>ಈ ಸಂದರ್ಭದಲ್ಲಿ ಎಸ್. ಪೂಜಾರ್, ಕಾರ್ಯದರ್ಶಿ ಕೀರ್ತಿ ಗಾಂವಕರ್, ಅನಿಲ ನಾಯ್ಕರ , ಶಿಲ್ಪಾ ಕೊಡೆ, ರುಕ್ಮಿಣಿ ಬಾಂಗಡೆ,ತಸವ್ವರ್ ಸೌದಾಗರ್, ಅನಿಲ್ ದಂಡಗಲ್, ರೇಣುಕಾ ಬಂದಂ,ಕರೀಂ ಆಜರೆಕರ್, ಬಶೀರ್ ಗಿರಿಯಾಲ್, ಅನಿಲ್ ನಾಯ್ಕರ್ ಹಾಗು ನಗರಸಭೆಯ ಸದಸ್ಯರು, ಮುಖಂಡರು, ಕಾರ್ಯಕರ್ತರು, ಮತ್ತು ಪಕ್ಷದ ಅಭಿಮಾನಿಗಳು ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ದಾಂಡೇಲಿ</strong>: 'ಮತಗಳ್ಳರೇ ಅಧಿಕಾರ ಬಿಡಿ' ಸಂವಿಧಾನ ರಕ್ಷಿಸಿ ಪ್ರಜಾಪ್ರಭುತ್ವ ಉಳಿಸಿ' ಘೋಷಣೆಯೊಂದಿಗೆ ದಾಂಡೇಲಿ ಬ್ಲಾಕ್ ಕಾಂಗ್ರೆಸ್ ವತಿಯಿಂದ ಕೇಂದ್ರ ಸರ್ಕಾರ ವಿರುದ್ಧ ಪ್ರತಿಭಟನಾ ಮೆರವಣಿಗೆಯನ್ನು ಸೋಮಾನಿ ವೃತ್ತದಿಂದ ಪಟೇಲ್ ವೃತ್ತದ ವರೆಗೆ ಶುಕ್ರವಾರ ನಡೆಯಿತು.</p>.<p>ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಮೋಹನ್ ಹಲವಾಯಿ ಮಾತನಾಡಿ, ಸ್ವಾತಂತ್ರೋತ್ಸವ ಆಚರಣೆಯ ಈ ಸುಸಂದರ್ಭದಲ್ಲಿ ದೇಶಾದ್ಯಂತ ಪ್ರಜಾಪ್ರಭುತ್ವದ ಕಗ್ಗೋಲೆ ನಡೆಯುತ್ತಿದೆ, ದೇಶದ ಮುಂದಿನ ಪ್ರಧಾನಿ ರಾಹುಲ್ ಗಾಂಧಿ ನೇತೃತ್ವದಲ್ಲಿ ದೇಶಾದ್ಯಂತ ಈ ಪ್ರತಿಭಟನೆ ನಡೆಸಲಾಗುತ್ತಿದೆ. ಪ್ರಜಾಪ್ರಭುತ್ವ ಉಳಿದರೆ ಮಾತ್ರ ನಾವು ಸ್ವಾತಂತ್ರವಾಗಿ ಬದುಕು ಕಟ್ಟಿಕೊಳ್ಳಬಹುದು. ಆದರೆ,ಬಿಜೆಪಿ ಅವಧಿಯಲ್ಲಿ ನಮ್ಮ ಪ್ರಜಾಪ್ತಭುತ್ವಕ್ಕೆ ಅಪಾಯ ಎದುರಾಗಿದೆ. ಈ ನಿಟ್ಟಿನಲ್ಲಿ ನಾವೆಲ್ಲರೂ ರಾಷ್ಟ್ರ ಧ್ವಜವನ್ನು ಕೈಯಲ್ಲಿ ಹಿಡಿದು ಪಟೇಲ್ ವೃತ್ತದ ಬ್ಲಾಕ್ ಕಾಂಗ್ರೆಸ್ ಕಚೇರಿಯ ವರೆಗೆ ಮೆರವಣಿಗೆ ನಡೆಸುತ್ತಿದ್ದೇವೆ ಎಂದರು.</p>.<p>ಈ ಸಂದರ್ಭದಲ್ಲಿ ಎಸ್. ಪೂಜಾರ್, ಕಾರ್ಯದರ್ಶಿ ಕೀರ್ತಿ ಗಾಂವಕರ್, ಅನಿಲ ನಾಯ್ಕರ , ಶಿಲ್ಪಾ ಕೊಡೆ, ರುಕ್ಮಿಣಿ ಬಾಂಗಡೆ,ತಸವ್ವರ್ ಸೌದಾಗರ್, ಅನಿಲ್ ದಂಡಗಲ್, ರೇಣುಕಾ ಬಂದಂ,ಕರೀಂ ಆಜರೆಕರ್, ಬಶೀರ್ ಗಿರಿಯಾಲ್, ಅನಿಲ್ ನಾಯ್ಕರ್ ಹಾಗು ನಗರಸಭೆಯ ಸದಸ್ಯರು, ಮುಖಂಡರು, ಕಾರ್ಯಕರ್ತರು, ಮತ್ತು ಪಕ್ಷದ ಅಭಿಮಾನಿಗಳು ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>