<p>ದಾಂಡೇಲಿ: ನಗರದ ಇಎಸ್ಐ ಆಸ್ಪತ್ರೆಗೆ ಮೇ 15ರೊಳಗೆ ಅಗತ್ಯ ವೈದ್ಯರನ್ನು ನಿಯೋಜಿಸುವುದಾಗಿ ರಾಜ್ಯ ಕಾರ್ಮಿಕ ವಿಮಾ ಆಯುಕ್ತ ದಿನೇಶ್ಕುಮಾರ್ ಮತ್ತು ಸರ್ಕಾರದ ಕಾರ್ಮಿಕ ಇಲಾಖೆ ಕಾರ್ಯದರ್ಶಿ ಸಲ್ಮಾ ಫಾತಿಮಾ ಅವರು ಭರವಸೆ ನೀಡಿದರು.</p>.<p>ನಗರದ ಇಎಸ್ಐ ಆಸ್ಪತ್ರೆಗೆ ಶುಕ್ರವಾರ ಭೇಟಿ ನೀಡಿದ ಸ್ಥಳೀಯ ಮುಖಂಡರು ಹಾಗೂ ಕಾರ್ಮಿಕ ಮುಖಂಡರ ಮನವಿಗೆ ಸ್ಪಂದಿಸಿ ಮಾತನಾಡಿದರು.</p>.<p>ನಗರದ ಇಎಸ್ಐ ಆಸ್ಪತ್ರೆಯಡಿ ಸಾಕಷ್ಟು ಭೂಮಿ ಇದ್ದು, ಇಎಸ್ಐ ಆಸ್ಪತ್ರೆಯನ್ನು ಮಲ್ಟಿ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಯನ್ನಾಗಿ ಮಾಡುವಂತೆಯ ಮಾಡುವಂತೆ ಕಾರ್ಮಿಕ ಸಂಘದ ಕಾರ್ಯದರ್ಶಿ ರಾಜೇಸಾಬ ಕೆಸನೂರು ಆಗ್ರಹಿಸಿದರು.</p>.<p>ಇಎಸ್ಐ ಸೌಲಭ್ಯಗಳನ್ನು ಪಡೆಯಲು ಅನುಕೂಲ ಮಾಡಿಕೊಡಬೇಕೆಂದು ಮನವಿ ಮಾಡಿದರು.</p>.<p>ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಮೋಹನ ಹಲವಾಯಿ ಮಾತನಾಡಿ, ಇಎಸ್ಐ ಆಸ್ಪತ್ರೆಯಲ್ಲಿ ಕೇವಲ ಒಬ್ಬರೇ ವೈದ್ಯರು ಕೆಲಸ ಮಾಡುತ್ತಿದ್ದು, ಇಲ್ಲಿ ವೈದ್ಯರ ನಿಯೋಜನೆಗೆ ಸಾಕಷ್ಟು ಬಾರಿ ಮನವಿ ಮಾಡುತ್ತಲೇ ಬಂದಿದ್ದೇವೆ. ಮೇ15ರೊಳಗೆ ವೈದ್ಯರನ್ನು ನಿಯೋಜಿಸುವುದಾಗಿ ಭರವಸೆ ನೀಡಿದ್ದೀರಿ. ವೈದ್ಯರನ್ನು ನಿಯೋಜಿಸದೇ ಇದ್ದಲ್ಲಿ ಮೇ 20ರ ನಂತರ ಪ್ರತಿಭಟನೆ ನಡೆಸುವುದಾಗಿ ತಿಳಿಸಿದರು.</p>.<p>ನಗರಸಭೆ ಮಾಜಿ ಸದಸ್ಯ ಕೀರ್ತಿ ಗಾಂವಕರ, ಮುಖಂಡರಾದ ಕರೀಂ ಅಜ್ರೇಕರ, ಫಿರೋಜ್ ಫಿರ್ಜಾದೆ, ಹನುಮಂತ ಕಾರ್ಗಿ, ಸಂತೋಷ್ ಬುಲುಬುಲೆ, ದೀಪಕ ಸಾಮಂತ, ಅನಿಲ್ ನಾಯ್ಕರ, ಪ್ರಮೋದ ಸಪ್ರೆ, ದಿವಾಕರ ನಾಯ್ಕ, ದಾದಾಪೀರ್ ನದೀಮುಲ್ಲಾ, ಮಹಾದೇವ ಜಮಾದಾರ, ಗೌರೀಶ ನಾಯ್ಕ, ಫ್ರಾನ್ಸಿಸ್ ಮಸ್ಕರೇನಸ್ ಮಾತನಾಡಿದರು.</p>.<p>ನಂತರ ಮಾತನಾಡಿದ ರಾಜ್ಯ ಕಾರ್ಮಿಕ ವಿಮಾ ಆಯುಕ್ತ ದಿನೇಶ ಕುಮಾರ್ ಇಲ್ಲಿಯ ಸಮಸ್ಯೆಗಳ ಬಗ್ಗೆ ಹಾಗೂ ವಸ್ತು ಸ್ಥಿತಿಯನ್ನು ಅರಿತುಕೊಳ್ಳಲು ಮತ್ತು ಕಾರವಾರದ ಮೆಡಿಕಲ್ ಕಾಲೇಜಿನ ಜೊತೆ ಎಂಒಯು ಮಾಡುವ ಉದ್ದೇಶದಿಂದ ಭೇಟಿ ನೀಡಿದ್ದೇವೆ. ಇಎಸ್ಐ ಆಸ್ಪತ್ರೆಯನ್ನು ಸೊಸೈಟಿ ವ್ಯಾಪ್ತಿಯಡಿ ತರಲಾಗಿದೆ. ಇದು ತ್ವರಿತ ಸ್ಪಂದನೆಗೆ ಹಾಗೂ ಆಸ್ಪತ್ರೆಗಳ ಬಲವರ್ಧನೆಗೆ ಪರಿಣಾಮಕಾರಿಯಾಗಲಿದೆ. ಹಣಕಾಸಿನ ನಿರ್ವಹಣೆ ಸೇರಿದಂತೆ ಎಲ್ಲಾ ಅನುಮೋದನೆಗಳನ್ನು ಸಮಿತಿಯೇ ನೇರವಾಗಿ ಮಾಡಲಿದ್ದು, ಕೇಂದ್ರ ಸರ್ಕಾರದಿಂದ ಬರುವ ಅನುದಾನವನ್ನು ಸಮಿತಿಯಲ್ಲಿ ನಿರ್ಧರಿಸಿ ಸದ್ಬಳಕೆ ಮಾಡಿಕೊಳ್ಳಲು ಅವಕಾಶವಿರುವುದರಿಂದ ಅನೇಕ ಸಮಸ್ಯೆಗಳಿಗೆ ಪರಿಹಾರವಾಗಲಿದೆ. ವೈದ್ಯರ ನಿಯೋಜನೆಗೆ ಸಂಬಂಧಪಟ್ಟಂತೆ ಅಗತ್ಯ ಕ್ರಮವನ್ನು ಕೈಗೊಳ್ಳಲಾಗಿದೆ. ದಾಂಡೇಲಿಯ ಇಎಸ್ಐ ಆಸ್ಪತ್ರೆಗೆ ಮೇ 15ರೊಳಗೆ ವೈದ್ಯರನ್ನು ನಿಯೋಜಿಸಲಾಗುವುದು ಎಂದರು.</p>.<p>ಹುಬ್ಬಳ್ಳಿಯ ಕಿಮ್ಸ್ ವೈದ್ಯಕೀಯ ಅಧೀಕ್ಷಕ ಯೂನುಸ್ ಎಸ್.ನಾಜ್ಮಿ, ಕಾರವಾರದ ಕ್ರಿಮ್ಸ್ ವೈದ್ಯಕೀಯ ಅಧೀಕ್ಷಕ ನರೇಶ ಪಾವಸ್ಕರ, ಇಎಸ್ಐ ಆಸ್ಪತ್ರೆಯ ವೈದ್ಯಾಧಿಕಾರಿ ಜಿ.ಎಸ್.ಸೈಯದ್, ತಾಲ್ಲೂಕು ಆಡಳಿತ ವೈದ್ಯಾಧಿಕಾರಿ ಅನಿಲ್ ಕುಮಾರ್ ನಾಯ್ಕ , ವಿನಾಯಕ ಪವಾರ ಇದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260427-20-807755759</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ದಾಂಡೇಲಿ: ನಗರದ ಇಎಸ್ಐ ಆಸ್ಪತ್ರೆಗೆ ಮೇ 15ರೊಳಗೆ ಅಗತ್ಯ ವೈದ್ಯರನ್ನು ನಿಯೋಜಿಸುವುದಾಗಿ ರಾಜ್ಯ ಕಾರ್ಮಿಕ ವಿಮಾ ಆಯುಕ್ತ ದಿನೇಶ್ಕುಮಾರ್ ಮತ್ತು ಸರ್ಕಾರದ ಕಾರ್ಮಿಕ ಇಲಾಖೆ ಕಾರ್ಯದರ್ಶಿ ಸಲ್ಮಾ ಫಾತಿಮಾ ಅವರು ಭರವಸೆ ನೀಡಿದರು.</p>.<p>ನಗರದ ಇಎಸ್ಐ ಆಸ್ಪತ್ರೆಗೆ ಶುಕ್ರವಾರ ಭೇಟಿ ನೀಡಿದ ಸ್ಥಳೀಯ ಮುಖಂಡರು ಹಾಗೂ ಕಾರ್ಮಿಕ ಮುಖಂಡರ ಮನವಿಗೆ ಸ್ಪಂದಿಸಿ ಮಾತನಾಡಿದರು.</p>.<p>ನಗರದ ಇಎಸ್ಐ ಆಸ್ಪತ್ರೆಯಡಿ ಸಾಕಷ್ಟು ಭೂಮಿ ಇದ್ದು, ಇಎಸ್ಐ ಆಸ್ಪತ್ರೆಯನ್ನು ಮಲ್ಟಿ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಯನ್ನಾಗಿ ಮಾಡುವಂತೆಯ ಮಾಡುವಂತೆ ಕಾರ್ಮಿಕ ಸಂಘದ ಕಾರ್ಯದರ್ಶಿ ರಾಜೇಸಾಬ ಕೆಸನೂರು ಆಗ್ರಹಿಸಿದರು.</p>.<p>ಇಎಸ್ಐ ಸೌಲಭ್ಯಗಳನ್ನು ಪಡೆಯಲು ಅನುಕೂಲ ಮಾಡಿಕೊಡಬೇಕೆಂದು ಮನವಿ ಮಾಡಿದರು.</p>.<p>ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಮೋಹನ ಹಲವಾಯಿ ಮಾತನಾಡಿ, ಇಎಸ್ಐ ಆಸ್ಪತ್ರೆಯಲ್ಲಿ ಕೇವಲ ಒಬ್ಬರೇ ವೈದ್ಯರು ಕೆಲಸ ಮಾಡುತ್ತಿದ್ದು, ಇಲ್ಲಿ ವೈದ್ಯರ ನಿಯೋಜನೆಗೆ ಸಾಕಷ್ಟು ಬಾರಿ ಮನವಿ ಮಾಡುತ್ತಲೇ ಬಂದಿದ್ದೇವೆ. ಮೇ15ರೊಳಗೆ ವೈದ್ಯರನ್ನು ನಿಯೋಜಿಸುವುದಾಗಿ ಭರವಸೆ ನೀಡಿದ್ದೀರಿ. ವೈದ್ಯರನ್ನು ನಿಯೋಜಿಸದೇ ಇದ್ದಲ್ಲಿ ಮೇ 20ರ ನಂತರ ಪ್ರತಿಭಟನೆ ನಡೆಸುವುದಾಗಿ ತಿಳಿಸಿದರು.</p>.<p>ನಗರಸಭೆ ಮಾಜಿ ಸದಸ್ಯ ಕೀರ್ತಿ ಗಾಂವಕರ, ಮುಖಂಡರಾದ ಕರೀಂ ಅಜ್ರೇಕರ, ಫಿರೋಜ್ ಫಿರ್ಜಾದೆ, ಹನುಮಂತ ಕಾರ್ಗಿ, ಸಂತೋಷ್ ಬುಲುಬುಲೆ, ದೀಪಕ ಸಾಮಂತ, ಅನಿಲ್ ನಾಯ್ಕರ, ಪ್ರಮೋದ ಸಪ್ರೆ, ದಿವಾಕರ ನಾಯ್ಕ, ದಾದಾಪೀರ್ ನದೀಮುಲ್ಲಾ, ಮಹಾದೇವ ಜಮಾದಾರ, ಗೌರೀಶ ನಾಯ್ಕ, ಫ್ರಾನ್ಸಿಸ್ ಮಸ್ಕರೇನಸ್ ಮಾತನಾಡಿದರು.</p>.<p>ನಂತರ ಮಾತನಾಡಿದ ರಾಜ್ಯ ಕಾರ್ಮಿಕ ವಿಮಾ ಆಯುಕ್ತ ದಿನೇಶ ಕುಮಾರ್ ಇಲ್ಲಿಯ ಸಮಸ್ಯೆಗಳ ಬಗ್ಗೆ ಹಾಗೂ ವಸ್ತು ಸ್ಥಿತಿಯನ್ನು ಅರಿತುಕೊಳ್ಳಲು ಮತ್ತು ಕಾರವಾರದ ಮೆಡಿಕಲ್ ಕಾಲೇಜಿನ ಜೊತೆ ಎಂಒಯು ಮಾಡುವ ಉದ್ದೇಶದಿಂದ ಭೇಟಿ ನೀಡಿದ್ದೇವೆ. ಇಎಸ್ಐ ಆಸ್ಪತ್ರೆಯನ್ನು ಸೊಸೈಟಿ ವ್ಯಾಪ್ತಿಯಡಿ ತರಲಾಗಿದೆ. ಇದು ತ್ವರಿತ ಸ್ಪಂದನೆಗೆ ಹಾಗೂ ಆಸ್ಪತ್ರೆಗಳ ಬಲವರ್ಧನೆಗೆ ಪರಿಣಾಮಕಾರಿಯಾಗಲಿದೆ. ಹಣಕಾಸಿನ ನಿರ್ವಹಣೆ ಸೇರಿದಂತೆ ಎಲ್ಲಾ ಅನುಮೋದನೆಗಳನ್ನು ಸಮಿತಿಯೇ ನೇರವಾಗಿ ಮಾಡಲಿದ್ದು, ಕೇಂದ್ರ ಸರ್ಕಾರದಿಂದ ಬರುವ ಅನುದಾನವನ್ನು ಸಮಿತಿಯಲ್ಲಿ ನಿರ್ಧರಿಸಿ ಸದ್ಬಳಕೆ ಮಾಡಿಕೊಳ್ಳಲು ಅವಕಾಶವಿರುವುದರಿಂದ ಅನೇಕ ಸಮಸ್ಯೆಗಳಿಗೆ ಪರಿಹಾರವಾಗಲಿದೆ. ವೈದ್ಯರ ನಿಯೋಜನೆಗೆ ಸಂಬಂಧಪಟ್ಟಂತೆ ಅಗತ್ಯ ಕ್ರಮವನ್ನು ಕೈಗೊಳ್ಳಲಾಗಿದೆ. ದಾಂಡೇಲಿಯ ಇಎಸ್ಐ ಆಸ್ಪತ್ರೆಗೆ ಮೇ 15ರೊಳಗೆ ವೈದ್ಯರನ್ನು ನಿಯೋಜಿಸಲಾಗುವುದು ಎಂದರು.</p>.<p>ಹುಬ್ಬಳ್ಳಿಯ ಕಿಮ್ಸ್ ವೈದ್ಯಕೀಯ ಅಧೀಕ್ಷಕ ಯೂನುಸ್ ಎಸ್.ನಾಜ್ಮಿ, ಕಾರವಾರದ ಕ್ರಿಮ್ಸ್ ವೈದ್ಯಕೀಯ ಅಧೀಕ್ಷಕ ನರೇಶ ಪಾವಸ್ಕರ, ಇಎಸ್ಐ ಆಸ್ಪತ್ರೆಯ ವೈದ್ಯಾಧಿಕಾರಿ ಜಿ.ಎಸ್.ಸೈಯದ್, ತಾಲ್ಲೂಕು ಆಡಳಿತ ವೈದ್ಯಾಧಿಕಾರಿ ಅನಿಲ್ ಕುಮಾರ್ ನಾಯ್ಕ , ವಿನಾಯಕ ಪವಾರ ಇದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260427-20-807755759</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>