<p>ದಾಂಡೇಲಿ: ಇಲ್ಲಿಯ ತಾಮೀರ ಕೋ– ಆಪರೇಟಿವ್ ಸೊಸೈಟಿಯಲ್ಲಿ ₹5.09 ಕೋಟಿ ಮೊತ್ತದ ದುರುಪಯೋಗ ಮತ್ತು ವಂಚನೆ ಪ್ರಕರಣ ಪತ್ತೆಯಾಗಿದ್ದು, ನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.</p>.<p>‘ಸಾಲಗಾರರಿಂದ ಸರಿಯಾದ ಭದ್ರತಾ ಬಾಂಡ್ ಪಡೆಯದೆ ಹಾಗೂ ಕೆವೈಸಿ ದಾಖಲೆಗಳಿಲ್ಲದೆ, ಸುಳ್ಳು ಸಾಲಗಾರರ ಹೆಸರಿನಲ್ಲಿ ನಕಲಿ ಬಂಗಾರವನ್ನು ಅಡವಿಟ್ಟು ಸಾಲ ಮಂಜೂರು ಮಾಡಲಾಗಿದೆ. ಒಟ್ಟು 208 ಖಾತೆಗಳ ಮೂಲಕ ₹5,09,09,450 ಮೊತ್ತವನ್ನು ಪಡೆದುಕೊಂಡು, ಅದನ್ನು ಪದಾಧಿಕಾರಿಗಳು ಸ್ವಂತಕ್ಕೆ ಬಳಸಿಕೊಂಡಿದ್ದಾರೆ’ ಎಂದು ದೂರಿನಲ್ಲಿ ವಿವರಿಸಲಾಗಿದೆ.</p>.<p>ಸೊಸೈಟಿಯ ದಾಂಡೇಲಿ ಶಾಖೆಯಲ್ಲಿ 2021ರ ಮಾರ್ಚ್ 17ರಿಂದ 2024ರ ಜನವರಿ 2ರ ಅವಧಿಯಲ್ಲಿ ವ್ಯವಸ್ಥಿತವಾಗಿ ಸಂಚು ರೂಪಿಸಿ ವಂಚನೆ ಎಸಗಲಾಗಿದೆ. 2023–24ನೇ ಸಾಲಿನ ಲೆಕ್ಕಪರಿಶೋಧನಾ ವರದಿಯಲ್ಲಿ ಹಗರಣ ಬಯಲಿಗೆ ಬಂದಿದೆ.</p>.<p>‘ಸಂಘದ ಆಡಳಿತ ಮಂಡಳಿ ಅಸ್ತಿತ್ವದಲ್ಲಿ ಇಲ್ಲದ ಕಾರಣ, ಆಡಳಿತಾಧಿಕಾರಿಗಳು ಹಾಗೂ ಕಾರವಾರದ ಉಪ ನಿಬಂಧಕರೊಂದಿಗೆ ಚರ್ಚಿಸಿ ನಿರ್ಣಯ ಕೈಗೊಳ್ಳಬೇಕಾದ ಹಿನ್ನೆಲೆಯಲ್ಲಿ ದೂರು ದಾಖಲಿಸಲು ವಿಳಂಬವಾಗಿದೆ’ ಎಂದು ಸೊಸೈಟಿಯ ಪ್ರಧಾನ ವ್ಯವಸ್ಥಾಪಕ ಮೊಹ್ಮದ ಅಜೀಮ್ ರುಕ್ಷುದ್ದೀನ್ ಶೇಖ ಅವರು ದೂರಿನಲ್ಲಿ ತಿಳಿಸಿದ್ದಾರೆ.</p>.<p>ಹೊನ್ನಾವರ: ತಾಲ್ಲೂಕಿನ ಕಾಸರಕೋಡದಲ್ಲಿರುವ ದುರ್ಗಾಂಬಾ ಹೋಟೆಲ್ ಎದುರು ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಬುಧವಾರ ತಡರಾತ್ರಿ ವಾಹನವೊಂದು ಡಿಕ್ಕಿ ಹೊಡೆದು ಬೈಕ್ ಸವಾರ ಮೃತಪಟ್ಟಿದ್ದಾರೆ.</p>.<p>ಕೆಳಗಿನ ಇಡಗುಂಜಿ ಅಂಗಡಿಮನೆ ನಿವಾಸಿ ಕಿರಣ ಬಾಲಚಂದ್ರ ನಾಯ್ಕ (24) ಮೃತರು.</p>.<p>‘ಬೈಕ್ ಸವಾರ ಸ್ಥಳದಲ್ಲಿಯೇ ಮೃತಪಟ್ಟಿದ್ದು, ಡಿಕ್ಕಿ ಹೊಡೆದ ವಾಹನದ ಗುರುತು ಪತ್ತೆಯಾಗಿಲ್ಲ’ ಎಂದು ಇಲ್ಲಿನ ಪೊಲೀಸರು ತಿಳಿಸಿದ್ದಾರೆ.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260403-20-713176977</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ದಾಂಡೇಲಿ: ಇಲ್ಲಿಯ ತಾಮೀರ ಕೋ– ಆಪರೇಟಿವ್ ಸೊಸೈಟಿಯಲ್ಲಿ ₹5.09 ಕೋಟಿ ಮೊತ್ತದ ದುರುಪಯೋಗ ಮತ್ತು ವಂಚನೆ ಪ್ರಕರಣ ಪತ್ತೆಯಾಗಿದ್ದು, ನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.</p>.<p>‘ಸಾಲಗಾರರಿಂದ ಸರಿಯಾದ ಭದ್ರತಾ ಬಾಂಡ್ ಪಡೆಯದೆ ಹಾಗೂ ಕೆವೈಸಿ ದಾಖಲೆಗಳಿಲ್ಲದೆ, ಸುಳ್ಳು ಸಾಲಗಾರರ ಹೆಸರಿನಲ್ಲಿ ನಕಲಿ ಬಂಗಾರವನ್ನು ಅಡವಿಟ್ಟು ಸಾಲ ಮಂಜೂರು ಮಾಡಲಾಗಿದೆ. ಒಟ್ಟು 208 ಖಾತೆಗಳ ಮೂಲಕ ₹5,09,09,450 ಮೊತ್ತವನ್ನು ಪಡೆದುಕೊಂಡು, ಅದನ್ನು ಪದಾಧಿಕಾರಿಗಳು ಸ್ವಂತಕ್ಕೆ ಬಳಸಿಕೊಂಡಿದ್ದಾರೆ’ ಎಂದು ದೂರಿನಲ್ಲಿ ವಿವರಿಸಲಾಗಿದೆ.</p>.<p>ಸೊಸೈಟಿಯ ದಾಂಡೇಲಿ ಶಾಖೆಯಲ್ಲಿ 2021ರ ಮಾರ್ಚ್ 17ರಿಂದ 2024ರ ಜನವರಿ 2ರ ಅವಧಿಯಲ್ಲಿ ವ್ಯವಸ್ಥಿತವಾಗಿ ಸಂಚು ರೂಪಿಸಿ ವಂಚನೆ ಎಸಗಲಾಗಿದೆ. 2023–24ನೇ ಸಾಲಿನ ಲೆಕ್ಕಪರಿಶೋಧನಾ ವರದಿಯಲ್ಲಿ ಹಗರಣ ಬಯಲಿಗೆ ಬಂದಿದೆ.</p>.<p>‘ಸಂಘದ ಆಡಳಿತ ಮಂಡಳಿ ಅಸ್ತಿತ್ವದಲ್ಲಿ ಇಲ್ಲದ ಕಾರಣ, ಆಡಳಿತಾಧಿಕಾರಿಗಳು ಹಾಗೂ ಕಾರವಾರದ ಉಪ ನಿಬಂಧಕರೊಂದಿಗೆ ಚರ್ಚಿಸಿ ನಿರ್ಣಯ ಕೈಗೊಳ್ಳಬೇಕಾದ ಹಿನ್ನೆಲೆಯಲ್ಲಿ ದೂರು ದಾಖಲಿಸಲು ವಿಳಂಬವಾಗಿದೆ’ ಎಂದು ಸೊಸೈಟಿಯ ಪ್ರಧಾನ ವ್ಯವಸ್ಥಾಪಕ ಮೊಹ್ಮದ ಅಜೀಮ್ ರುಕ್ಷುದ್ದೀನ್ ಶೇಖ ಅವರು ದೂರಿನಲ್ಲಿ ತಿಳಿಸಿದ್ದಾರೆ.</p>.<p>ಹೊನ್ನಾವರ: ತಾಲ್ಲೂಕಿನ ಕಾಸರಕೋಡದಲ್ಲಿರುವ ದುರ್ಗಾಂಬಾ ಹೋಟೆಲ್ ಎದುರು ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಬುಧವಾರ ತಡರಾತ್ರಿ ವಾಹನವೊಂದು ಡಿಕ್ಕಿ ಹೊಡೆದು ಬೈಕ್ ಸವಾರ ಮೃತಪಟ್ಟಿದ್ದಾರೆ.</p>.<p>ಕೆಳಗಿನ ಇಡಗುಂಜಿ ಅಂಗಡಿಮನೆ ನಿವಾಸಿ ಕಿರಣ ಬಾಲಚಂದ್ರ ನಾಯ್ಕ (24) ಮೃತರು.</p>.<p>‘ಬೈಕ್ ಸವಾರ ಸ್ಥಳದಲ್ಲಿಯೇ ಮೃತಪಟ್ಟಿದ್ದು, ಡಿಕ್ಕಿ ಹೊಡೆದ ವಾಹನದ ಗುರುತು ಪತ್ತೆಯಾಗಿಲ್ಲ’ ಎಂದು ಇಲ್ಲಿನ ಪೊಲೀಸರು ತಿಳಿಸಿದ್ದಾರೆ.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260403-20-713176977</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>