<p>ಕಾರವಾರ: ‘ದಾಂಡೇಲಿ ನಗರದಲ್ಲಿ ಸ್ಥಗಿತಗೊಂಡಿರುವ ಜಿ+2 ಮನೆಗಳ ಕಾಮಗಾರಿ ಪೂರ್ಣಗೊಳಿಸಲು ವಿಶೇಷ ಅನುದಾನ ಬಿಡುಗಡೆಗೊಳಿಸಬೇಕು ಎಂದು ಒತ್ತಾಯಿಸಿ ಏ.8ರಂದು ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಲಾಗುವುದು’ ಎಂದು ದಾಂಡೇಲಿ ಸಮಗ್ರ ಅಭಿವೃದ್ಧಿ ಹೋರಾಟ ಸಮಿತಿ ಅಧ್ಯಕ್ಷ ಅಕ್ರಂ ಖಾನ್ ಹೇಳಿದರು.</p>.<p>ಬುಧವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ‘ನಿವೇಶನ ರಹಿತ, ಬಡ ಕುಟುಂಬಗಳಿಗೆ ಸ್ವಂತ ಸೂರು ಪಡೆಯಲು ಆಶ್ರಯ ಯೋಜನೆ ಅಡಿಯಲ್ಲಿ ಬಹಮಹಡಿಯ ವಸತಿ ಸಮುಚ್ಚಯ ಕಟ್ಟುವ ಯೋಜನೆ ಹಲವು ವರ್ಷ ಕಳೆದರೂ ಪೂರ್ಣಗೊಳಿಸಿಲ್ಲ. ಬಡವರಿಂದ ಪ್ರಧಾನ ಮಂತ್ರಿ ಆವಾಸ ಯೋಜನೆಯಡಿ ಸರಾಸರಿ ₹50 ಸಾವಿರದಿಂದ ₹60 ಸಾವಿರ ಹಣ ಪಡೆದು, ಅರ್ಜಿ ಪಡೆದು ದಶಕ ಕಳೆದಿದೆ. ಈವರೆಗೂ ಮನೆ ಹಂಚಿಕೆ ನಡೆದಿಲ್ಲ’ ಎಂದು ದೂರಿದರು.</p>.<p>‘ಹಲವು ಬಾರಿ ಸ್ಥಳೀಯ ಶಾಸಕರು ಸೇರಿದಂತೆ ಸರ್ಕಾರಕ್ಕೆ ಮನವಿ ನೀಡಲಾಗಿದೆ. ಈವರೆಗೂ ಸ್ಪಂದನೆ ಸಿಗದ ಹಿನ್ನೆಲೆಯಲ್ಲಿ ಹೋರಾಟ ಕೈಗೊಳ್ಳುವುದು ಅನಿವಾರ್ಯವಾಗಿದೆ’ ಎಂದರು.</p>.<p>‘ದಾಂಡೇಲಿಯಲ್ಲಿ ಹಣ ಇದ್ದವರು, ಪ್ರಭಾವ ಇದ್ದವರು ಜಾಗ ಒತ್ತುವರಿ ಮಾಡುತ್ತಿದ್ದಾರೆ. ಬಡವರಲ್ಲದವರಿಗೆ ಪಟ್ಟಾ ಹಂಚಿಕೆ ನಡೆದಿದೆ. ಸ್ಮಶಾನಕ್ಕೆ ಮೀಸಲಿಟ್ಟಿದ್ದ ಜಾಗದ ಪೈಕಿ ಶೇ 80ರಷ್ಟು ಒತ್ತುವರಿಯಾಗಿದೆ’ ಎಂದರು.</p>.<p>ಉಪಾಧ್ಯಕ್ಷ ಅಶೋಕ ಪಾಟೀಲ, ಮಧುಕರ ಸಾಂಗೇಕರ, ನಾಮದೇವ ಶಿಕಾರಿ, ಅಶೋಕ ಗೋಪಾಲ ಇದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260402-20-2006413829</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಕಾರವಾರ: ‘ದಾಂಡೇಲಿ ನಗರದಲ್ಲಿ ಸ್ಥಗಿತಗೊಂಡಿರುವ ಜಿ+2 ಮನೆಗಳ ಕಾಮಗಾರಿ ಪೂರ್ಣಗೊಳಿಸಲು ವಿಶೇಷ ಅನುದಾನ ಬಿಡುಗಡೆಗೊಳಿಸಬೇಕು ಎಂದು ಒತ್ತಾಯಿಸಿ ಏ.8ರಂದು ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಲಾಗುವುದು’ ಎಂದು ದಾಂಡೇಲಿ ಸಮಗ್ರ ಅಭಿವೃದ್ಧಿ ಹೋರಾಟ ಸಮಿತಿ ಅಧ್ಯಕ್ಷ ಅಕ್ರಂ ಖಾನ್ ಹೇಳಿದರು.</p>.<p>ಬುಧವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ‘ನಿವೇಶನ ರಹಿತ, ಬಡ ಕುಟುಂಬಗಳಿಗೆ ಸ್ವಂತ ಸೂರು ಪಡೆಯಲು ಆಶ್ರಯ ಯೋಜನೆ ಅಡಿಯಲ್ಲಿ ಬಹಮಹಡಿಯ ವಸತಿ ಸಮುಚ್ಚಯ ಕಟ್ಟುವ ಯೋಜನೆ ಹಲವು ವರ್ಷ ಕಳೆದರೂ ಪೂರ್ಣಗೊಳಿಸಿಲ್ಲ. ಬಡವರಿಂದ ಪ್ರಧಾನ ಮಂತ್ರಿ ಆವಾಸ ಯೋಜನೆಯಡಿ ಸರಾಸರಿ ₹50 ಸಾವಿರದಿಂದ ₹60 ಸಾವಿರ ಹಣ ಪಡೆದು, ಅರ್ಜಿ ಪಡೆದು ದಶಕ ಕಳೆದಿದೆ. ಈವರೆಗೂ ಮನೆ ಹಂಚಿಕೆ ನಡೆದಿಲ್ಲ’ ಎಂದು ದೂರಿದರು.</p>.<p>‘ಹಲವು ಬಾರಿ ಸ್ಥಳೀಯ ಶಾಸಕರು ಸೇರಿದಂತೆ ಸರ್ಕಾರಕ್ಕೆ ಮನವಿ ನೀಡಲಾಗಿದೆ. ಈವರೆಗೂ ಸ್ಪಂದನೆ ಸಿಗದ ಹಿನ್ನೆಲೆಯಲ್ಲಿ ಹೋರಾಟ ಕೈಗೊಳ್ಳುವುದು ಅನಿವಾರ್ಯವಾಗಿದೆ’ ಎಂದರು.</p>.<p>‘ದಾಂಡೇಲಿಯಲ್ಲಿ ಹಣ ಇದ್ದವರು, ಪ್ರಭಾವ ಇದ್ದವರು ಜಾಗ ಒತ್ತುವರಿ ಮಾಡುತ್ತಿದ್ದಾರೆ. ಬಡವರಲ್ಲದವರಿಗೆ ಪಟ್ಟಾ ಹಂಚಿಕೆ ನಡೆದಿದೆ. ಸ್ಮಶಾನಕ್ಕೆ ಮೀಸಲಿಟ್ಟಿದ್ದ ಜಾಗದ ಪೈಕಿ ಶೇ 80ರಷ್ಟು ಒತ್ತುವರಿಯಾಗಿದೆ’ ಎಂದರು.</p>.<p>ಉಪಾಧ್ಯಕ್ಷ ಅಶೋಕ ಪಾಟೀಲ, ಮಧುಕರ ಸಾಂಗೇಕರ, ನಾಮದೇವ ಶಿಕಾರಿ, ಅಶೋಕ ಗೋಪಾಲ ಇದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260402-20-2006413829</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>