<p>ದಾಂಡೇಲಿ: ನ್ಯಾಯಾಧೀಶರಾಗಿ ಆಯ್ಕೆಯಾದ ಪದ್ಮಾವತಿ ಮಾದಿಗ ಅವರ ಮನೆಗೆ ಭೇಟಿ ನೀಡಿದ ಶಾಸಕ ಆರ್.ವಿ. ದೇಶಪಾಂಡೆ, ಅವರನ್ನು ಸನ್ಮಾನಿಸಿ ಗೌರವಿಸಿದರು.</p>.<p>ಈ ವೇಳೆ ಮಾತನಾಡಿದ ಶಾಸಕ, ‘ಬಡತನದಲ್ಲಿ ಓದಿ ಸಹೋದರರು ಮತ್ತು ಮನೆಯವರ ನೆರವಿನೊಂದಿಗೆ ವಕೀಲರಾಗಿ ಇದೀಗ ನ್ಯಾಯಾಧೀಶರಾಗಿ ಆಯ್ಕೆಯಾಗಿರುವುದು ಹೆಮ್ಮೆಯ ವಿಚಾರ. ಇದು ದಾಂಡೇಲಿಗೆ ಅಭಿಮಾನದ ಸಂಗತಿ. ಯುವಜನರಿಗೆ ಪ್ರೇರಣೆ’ ಎಂದರು.</p>.<p>ಪದ್ಮಾವತಿ ಮಾದಿಗ ಅವರ ತಾಯಿ ಮತ್ತು ಸಹೋದರರು ಈಗಲೂ ನಡೆಸುತ್ತಿರುವ ಪಾದರಕ್ಷೆ ಅಂಗಡಿಗೆ ಭೇಟಿ ನೀಡಿದ ಶಾಸಕರು, ಅವರ ಕಸುಬಿಗೆ ನೆರವು ನೀಡುವಂತೆ ಅಧಿಕಾರಿಗಳಿಗೆ ನಿರ್ದೇಶಿಸಿದರು.</p>.<p>ದಾಂಡೇಲಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಮೋಹನ ಹಲವಾಯಿ, ಪ್ರಧಾನ ಕಾರ್ಯದರ್ಶಿ ಕೀರ್ತಿ ಗಾಂವಕರ, ಉಪಾಧ್ಯಕ್ಷ ಬಶೀರ್ ಗಿರಿಯಾಲ, ಕಾರ್ಯದರ್ಶಿ ಉಸ್ಮಾನ್ ಶೇಖ್, ಜಿಲ್ಲಾ ಕಾಂಗ್ರೇಸ್ ಕಾರ್ಯದರ್ಶಿ ಆರ್.ಪಿ. ನಾಯ್ಕ ಇದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260401-20-10640117</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ದಾಂಡೇಲಿ: ನ್ಯಾಯಾಧೀಶರಾಗಿ ಆಯ್ಕೆಯಾದ ಪದ್ಮಾವತಿ ಮಾದಿಗ ಅವರ ಮನೆಗೆ ಭೇಟಿ ನೀಡಿದ ಶಾಸಕ ಆರ್.ವಿ. ದೇಶಪಾಂಡೆ, ಅವರನ್ನು ಸನ್ಮಾನಿಸಿ ಗೌರವಿಸಿದರು.</p>.<p>ಈ ವೇಳೆ ಮಾತನಾಡಿದ ಶಾಸಕ, ‘ಬಡತನದಲ್ಲಿ ಓದಿ ಸಹೋದರರು ಮತ್ತು ಮನೆಯವರ ನೆರವಿನೊಂದಿಗೆ ವಕೀಲರಾಗಿ ಇದೀಗ ನ್ಯಾಯಾಧೀಶರಾಗಿ ಆಯ್ಕೆಯಾಗಿರುವುದು ಹೆಮ್ಮೆಯ ವಿಚಾರ. ಇದು ದಾಂಡೇಲಿಗೆ ಅಭಿಮಾನದ ಸಂಗತಿ. ಯುವಜನರಿಗೆ ಪ್ರೇರಣೆ’ ಎಂದರು.</p>.<p>ಪದ್ಮಾವತಿ ಮಾದಿಗ ಅವರ ತಾಯಿ ಮತ್ತು ಸಹೋದರರು ಈಗಲೂ ನಡೆಸುತ್ತಿರುವ ಪಾದರಕ್ಷೆ ಅಂಗಡಿಗೆ ಭೇಟಿ ನೀಡಿದ ಶಾಸಕರು, ಅವರ ಕಸುಬಿಗೆ ನೆರವು ನೀಡುವಂತೆ ಅಧಿಕಾರಿಗಳಿಗೆ ನಿರ್ದೇಶಿಸಿದರು.</p>.<p>ದಾಂಡೇಲಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಮೋಹನ ಹಲವಾಯಿ, ಪ್ರಧಾನ ಕಾರ್ಯದರ್ಶಿ ಕೀರ್ತಿ ಗಾಂವಕರ, ಉಪಾಧ್ಯಕ್ಷ ಬಶೀರ್ ಗಿರಿಯಾಲ, ಕಾರ್ಯದರ್ಶಿ ಉಸ್ಮಾನ್ ಶೇಖ್, ಜಿಲ್ಲಾ ಕಾಂಗ್ರೇಸ್ ಕಾರ್ಯದರ್ಶಿ ಆರ್.ಪಿ. ನಾಯ್ಕ ಇದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260401-20-10640117</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>