<p>ದಾಂಡೇಲಿ: ಜಿಲ್ಲಾಡಾಳಿತ, ಉತ್ತರ ಕನ್ನಡ ಜಿಲ್ಲಾ ಪಂಚಾಯಿತಿಯ 2025 - 26 ನೇ ಸಾಲಿನ ಮುಖ್ಯಮಂತ್ರಿಗಳ ಮೂಲಸೌಕರ್ಯ ಅಭಿವೃದ್ಧಿ ಯೋಜನೆಯಡಿ ಮಂಜೂರಾದ ದಾಂಡೇಲಿಯ ಅಂಜುಮನ್ ಅಹಲ್ಲೆ ಸುನ್ನತ್ ಸಂಸ್ಥೆಯ ಅಡಿಯಲ್ಲಿರುವ 11 ಮಸೀದಿಗಳ ನವೀಕರಣ ಕಾಮಗಾರಿಗೆ ನಗರದ ಬಾಂಬೆಚಾಳದಲ್ಲಿ ಶಾಸಕ ಆರ್.ವಿ.ದೇಶಪಾಂಡೆ ಸೋಮವಾರ ಚಾಲನೆ ನೀಡಿದರು.</p>.<p>ಈ ಸಂದರ್ಭದಲ್ಲಿ ಮಾತನಾಡಿದ ಶಾಸಕ ಆರ್.ವಿ.ದೇಶಪಾಂಡೆ ಈ ಭೂಮಿಯಲ್ಲಿ ಹುಟ್ಟಿದ ಮನುಷ್ಯರೆಲ್ಲರೂ ಒಂದೇ. ನನಗೆ ಎಲ್ಲ ಧರ್ಮ ಬಾಂಧವರು ಒಂದಾಗಿಯೇ ಕಾಣುತ್ತಾರೆ. ಜಾತಿ ಜಾತಿಗಳ ನಡುವೆ,ಧರ್ಮ ಧರ್ಮಗಳ ನಡುವೆ ಬಡಿದಾಡಿಕೊಳ್ಳುವುದರ ಬದಲು ಸರ್ವಧರ್ಮ ಸಮನ್ವಯತೆಯ ಬದುಕನ್ನು ನಾವು ಕಟ್ಟಿಕೊಂಡಾಗ ಮಾನವನಾಗಿ ಹುಟ್ಟಿದ್ದಕ್ಕೆ ಸಾರ್ಥಕವಾಗುತ್ತದೆ ಎಂದರು.</p>.<p>ಅಂಜುಮನ್ ಅಹಲ್ಲೆ ಸುನ್ನತ್ ಸಂಸ್ಥೆಯ ಪ್ರಧಾನ ಕಾರ್ಯದರ್ಶಿ ಇಕ್ಬಾಲ್ ಶೇಖ ಮಾತನಾಡಿ, ನಮ್ಮ ಮನವಿಗೆ ಸ್ಪಂದಿಸಿ ಸಾಕಷ್ಟು ಅನುದಾನ ತಂದಿದ್ದಾರೆ. ಅಂಜುಮನ್ ಅಹಲ್ಲೆ ಸುನ್ನತ್ ಸಂಸ್ಥೆಯಡಿ ಇರುವ 11 ಮಸೀದಿಗಳ ನವೀಕರಣಕ್ಕೆ ₹1.15 ಕೋಟಿ ರೂ ಅನುದಾನವನ್ನು ಮಂಜೂರು ಮಾಡಲಾಗಿದೆ. ಈ ಬಾರಿ ಅತಿ ಹೆಚ್ಚು ಅನುದಾನವನ್ನು ತಂದುಕೊಟ್ಟ ಕೀರ್ತಿ ಶಾಸಕರಿಗೆ ಸಲ್ಲಬೇಕು ಎಂದರು.</p>.<p>ವೇದಿಕೆಯಲ್ಲಿ ನಗರಸಭೆಯ ನಿಕಟಪೂರ್ವ ಅಧ್ಯಕ್ಷ ಅಷ್ಟಾಕ ಶೇಖ, ಅಂಜುಮನ್ ಅಹಲ್ಲೆ ಸುನ್ನತ್ ಸಂಸ್ಥೆಯ ಅಧ್ಯಕ್ಷ ನವಾಜ ಕರೀಂ ಖಾನ್, ಉಪಾಧ್ಯಕ್ಷ ಗೌಸ್ ಖತೀಬ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಮೋಹನ ಹಲವಾಯಿ ಹಾಗೂ ಅಧಿಕಾರಿಗಳು ಇದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260422-20-923930465</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ದಾಂಡೇಲಿ: ಜಿಲ್ಲಾಡಾಳಿತ, ಉತ್ತರ ಕನ್ನಡ ಜಿಲ್ಲಾ ಪಂಚಾಯಿತಿಯ 2025 - 26 ನೇ ಸಾಲಿನ ಮುಖ್ಯಮಂತ್ರಿಗಳ ಮೂಲಸೌಕರ್ಯ ಅಭಿವೃದ್ಧಿ ಯೋಜನೆಯಡಿ ಮಂಜೂರಾದ ದಾಂಡೇಲಿಯ ಅಂಜುಮನ್ ಅಹಲ್ಲೆ ಸುನ್ನತ್ ಸಂಸ್ಥೆಯ ಅಡಿಯಲ್ಲಿರುವ 11 ಮಸೀದಿಗಳ ನವೀಕರಣ ಕಾಮಗಾರಿಗೆ ನಗರದ ಬಾಂಬೆಚಾಳದಲ್ಲಿ ಶಾಸಕ ಆರ್.ವಿ.ದೇಶಪಾಂಡೆ ಸೋಮವಾರ ಚಾಲನೆ ನೀಡಿದರು.</p>.<p>ಈ ಸಂದರ್ಭದಲ್ಲಿ ಮಾತನಾಡಿದ ಶಾಸಕ ಆರ್.ವಿ.ದೇಶಪಾಂಡೆ ಈ ಭೂಮಿಯಲ್ಲಿ ಹುಟ್ಟಿದ ಮನುಷ್ಯರೆಲ್ಲರೂ ಒಂದೇ. ನನಗೆ ಎಲ್ಲ ಧರ್ಮ ಬಾಂಧವರು ಒಂದಾಗಿಯೇ ಕಾಣುತ್ತಾರೆ. ಜಾತಿ ಜಾತಿಗಳ ನಡುವೆ,ಧರ್ಮ ಧರ್ಮಗಳ ನಡುವೆ ಬಡಿದಾಡಿಕೊಳ್ಳುವುದರ ಬದಲು ಸರ್ವಧರ್ಮ ಸಮನ್ವಯತೆಯ ಬದುಕನ್ನು ನಾವು ಕಟ್ಟಿಕೊಂಡಾಗ ಮಾನವನಾಗಿ ಹುಟ್ಟಿದ್ದಕ್ಕೆ ಸಾರ್ಥಕವಾಗುತ್ತದೆ ಎಂದರು.</p>.<p>ಅಂಜುಮನ್ ಅಹಲ್ಲೆ ಸುನ್ನತ್ ಸಂಸ್ಥೆಯ ಪ್ರಧಾನ ಕಾರ್ಯದರ್ಶಿ ಇಕ್ಬಾಲ್ ಶೇಖ ಮಾತನಾಡಿ, ನಮ್ಮ ಮನವಿಗೆ ಸ್ಪಂದಿಸಿ ಸಾಕಷ್ಟು ಅನುದಾನ ತಂದಿದ್ದಾರೆ. ಅಂಜುಮನ್ ಅಹಲ್ಲೆ ಸುನ್ನತ್ ಸಂಸ್ಥೆಯಡಿ ಇರುವ 11 ಮಸೀದಿಗಳ ನವೀಕರಣಕ್ಕೆ ₹1.15 ಕೋಟಿ ರೂ ಅನುದಾನವನ್ನು ಮಂಜೂರು ಮಾಡಲಾಗಿದೆ. ಈ ಬಾರಿ ಅತಿ ಹೆಚ್ಚು ಅನುದಾನವನ್ನು ತಂದುಕೊಟ್ಟ ಕೀರ್ತಿ ಶಾಸಕರಿಗೆ ಸಲ್ಲಬೇಕು ಎಂದರು.</p>.<p>ವೇದಿಕೆಯಲ್ಲಿ ನಗರಸಭೆಯ ನಿಕಟಪೂರ್ವ ಅಧ್ಯಕ್ಷ ಅಷ್ಟಾಕ ಶೇಖ, ಅಂಜುಮನ್ ಅಹಲ್ಲೆ ಸುನ್ನತ್ ಸಂಸ್ಥೆಯ ಅಧ್ಯಕ್ಷ ನವಾಜ ಕರೀಂ ಖಾನ್, ಉಪಾಧ್ಯಕ್ಷ ಗೌಸ್ ಖತೀಬ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಮೋಹನ ಹಲವಾಯಿ ಹಾಗೂ ಅಧಿಕಾರಿಗಳು ಇದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260422-20-923930465</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>