<p><strong>ದಾಂಡೇಲಿ</strong>: ನಗರದ ಸೈಂಟ್ ಮೈಕಲ್ ಕಾನ್ವೆಂಟ್ ಇಂಗ್ಲಿಷ್ ಮಾಧ್ಯಮ ಪ್ರೌಢ ಶಾಲೆಯ ಹತ್ತಿರ ಬೀದಿ ನಾಯಿ ದಾಳಿಯಿಂದ ಮೂವರು ಗಾಯಗೊಂಡ ಘಟನೆ ಶುಕ್ರವಾರ ಜರುಗಿದೆ.</p>.<p>ಪ್ರೌಡಶಾಲೆ 9ನೇ ತರಗತಿ ವಿದ್ಯಾರ್ಥಿನಿ ವೈಷ್ಣವಿ ನಾಗರಾಜ ಮಾಲ್ವಿ, ಸುಭಾಷ್ ನಗರದ ಹಜ್ರತ್ ಹಂಝ ಹಾಗೂ ನಿರ್ಮಲ ನಗರ ರೋಜಿ ಡಯಾಸ್ ಗಾಯಗೊಂಡುವರು. ಸ್ಥಳೀಯ ಸಾರ್ವಜನಿಕ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗಿದೆ.</p>.<p>ನಗರದಲ್ಲಿ ಶಾಲೆ ಆವರಣ, ಪ್ರಮುಖ ರಸ್ತೆಗಳಲ್ಲಿ ಬೀದಿ ನಾಯಿ ಹಾವಳಿ ಹೆಚ್ಚಾಗಿದ್ದು, ನಿಯಂತ್ರಣಕ್ಕೆ ನಗರಾಡಳಿತ ಹಾಗೂ ತಾಲ್ಲೂಕು ಆಡಳಿತ ಕ್ರಮ ಕೈಗೊಳ್ಳುತ್ತಿಲ್ಲ ಎಂದು ಸಾರ್ವಜನಿಕರ ಆಕ್ರೋಶ ವ್ಯಕ್ತ ಪಡಿಸಿದರು.</p>.<p><strong>ಪೌರಾಯುಕ್ತ, ತಹಶೀಲ್ದಾರ್ ಭೇಟಿ</strong>: ತಹಶೀಲ್ದಾರ್ ಮತ್ತು ನಗರ ಸಭೆ ಪೌರಾಯುಕ್ತರು ಸಾರ್ವಜನಿಕ ಆಸ್ಪತ್ರೆಗೆ ಭೇಟಿ ನೀಡಿ ಗಾಯಗೊಂಡವರ ಆರೋಗ್ಯ ವಿಚಾರಿಸಿದರು.</p>.<p>ತಹಶೀಲ್ದಾರ್ ಶೈಲೇಶ್ ಪರಮಾನಂದ ಮಾತನಾಡಿ, ‘ಗಾಯಗೊಂಡ ವಿದ್ಯಾರ್ಥಿಗಳು ಆದಷ್ಟು ಬೇಗನೆ ಗುಣಮುಖರಾಗಲಿ. ಬೀದಿ ನಾಯಿಗಳ ಹಾವಳಿ ನಿಯಂತ್ರಣಕ್ಕೆ ಎರಡು ವಾರಗಳಲ್ಲಿ ಕ್ರಮ ಜರುಗಿಸಲಾಗುವುದು’ ಎಂದರು. ಪೌರಾಯುಕ್ತ ವಿವೇಕ್ ಬನ್ನೆ ಮಾತನಾಡಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ದಾಂಡೇಲಿ</strong>: ನಗರದ ಸೈಂಟ್ ಮೈಕಲ್ ಕಾನ್ವೆಂಟ್ ಇಂಗ್ಲಿಷ್ ಮಾಧ್ಯಮ ಪ್ರೌಢ ಶಾಲೆಯ ಹತ್ತಿರ ಬೀದಿ ನಾಯಿ ದಾಳಿಯಿಂದ ಮೂವರು ಗಾಯಗೊಂಡ ಘಟನೆ ಶುಕ್ರವಾರ ಜರುಗಿದೆ.</p>.<p>ಪ್ರೌಡಶಾಲೆ 9ನೇ ತರಗತಿ ವಿದ್ಯಾರ್ಥಿನಿ ವೈಷ್ಣವಿ ನಾಗರಾಜ ಮಾಲ್ವಿ, ಸುಭಾಷ್ ನಗರದ ಹಜ್ರತ್ ಹಂಝ ಹಾಗೂ ನಿರ್ಮಲ ನಗರ ರೋಜಿ ಡಯಾಸ್ ಗಾಯಗೊಂಡುವರು. ಸ್ಥಳೀಯ ಸಾರ್ವಜನಿಕ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗಿದೆ.</p>.<p>ನಗರದಲ್ಲಿ ಶಾಲೆ ಆವರಣ, ಪ್ರಮುಖ ರಸ್ತೆಗಳಲ್ಲಿ ಬೀದಿ ನಾಯಿ ಹಾವಳಿ ಹೆಚ್ಚಾಗಿದ್ದು, ನಿಯಂತ್ರಣಕ್ಕೆ ನಗರಾಡಳಿತ ಹಾಗೂ ತಾಲ್ಲೂಕು ಆಡಳಿತ ಕ್ರಮ ಕೈಗೊಳ್ಳುತ್ತಿಲ್ಲ ಎಂದು ಸಾರ್ವಜನಿಕರ ಆಕ್ರೋಶ ವ್ಯಕ್ತ ಪಡಿಸಿದರು.</p>.<p><strong>ಪೌರಾಯುಕ್ತ, ತಹಶೀಲ್ದಾರ್ ಭೇಟಿ</strong>: ತಹಶೀಲ್ದಾರ್ ಮತ್ತು ನಗರ ಸಭೆ ಪೌರಾಯುಕ್ತರು ಸಾರ್ವಜನಿಕ ಆಸ್ಪತ್ರೆಗೆ ಭೇಟಿ ನೀಡಿ ಗಾಯಗೊಂಡವರ ಆರೋಗ್ಯ ವಿಚಾರಿಸಿದರು.</p>.<p>ತಹಶೀಲ್ದಾರ್ ಶೈಲೇಶ್ ಪರಮಾನಂದ ಮಾತನಾಡಿ, ‘ಗಾಯಗೊಂಡ ವಿದ್ಯಾರ್ಥಿಗಳು ಆದಷ್ಟು ಬೇಗನೆ ಗುಣಮುಖರಾಗಲಿ. ಬೀದಿ ನಾಯಿಗಳ ಹಾವಳಿ ನಿಯಂತ್ರಣಕ್ಕೆ ಎರಡು ವಾರಗಳಲ್ಲಿ ಕ್ರಮ ಜರುಗಿಸಲಾಗುವುದು’ ಎಂದರು. ಪೌರಾಯುಕ್ತ ವಿವೇಕ್ ಬನ್ನೆ ಮಾತನಾಡಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>