<p><strong>ದಾಂಡೇಲಿ:</strong> ಮಾನವನಾಗಿ ಹುಟ್ಟಿದ ಮೇಲೆ ಮಾನವನಾಗಿ ಬಾಳಬೇಕು. ಸಮಾಜಮುಖಿ ಕೆಲಸಗಳಿಗೆ ಹಣ ಉಪಯೋಗ ಮಾಡಬೇಕು. ಕ್ಷೇತ್ರದಲ್ಲಿ ಪ್ರವಾಸೋದ್ಯಮದ ಅಭಿವೃದ್ಧಿಗೆ ಹೆಚ್ಚಿನ ಅನುದಾನ ತಂದಿದ್ದೇನೆ. ಇದರಿಂದಾಗಿ ತಾಲ್ಲೂಕಿನ ಆರ್ಥಿಕ ಸ್ಥಿತಿ ಸುಧಾರಣೆಯಾಗಿದೆ ಎಂದು ಶಾಸಕ ಆರ್.ವಿ ದೇಶಪಾಂಡೆ ಹೇಳಿದರು.</p>.<p>ಕರ್ನಾಟಕ ಸರ್ಕಾರದ ಮುಖ್ಯ ಮಂತ್ರಿಗಳ ಮೂಲಸೌಕರ್ಯ ಅಭಿವೃದ್ದಿ ಯೋಜನೆ ಅನುದಾನ ಅಡಿಯಲ್ಲಿ ₹ 16 ಕೋಟಿ ವಿವಿಧ ಕಾಮಗಾರಿಗಳಿಗೆ ಸೋಮವಾರ ದಾಂಡೇಲಿ ನಗರಸಭೆ ಆವರಣದಲ್ಲಿ ಶಿಲಾನ್ಯಾಸ ನೆರವೇರಿಸಿ ಮಾತನಾಡಿದರು.</p>.<p>ಕಾಮಗಾರಿಗಳು ಗುಣಮಟ್ಟದಿಂದ ಕೂಡಿರಬೇಕು. ಜನರಿಗೆ ಅನುಕೂಲವಾಗುವಂತೆ ದೀರ್ಘ ಕಾಲ ಬಾಳಿಕೆ ಬರುವಂತೆ ಗುತ್ತಿಗೆದಾರರು ಕೆಲಸದ ಬಗ್ಗೆ ಎಚ್ಚರ ವಹಿಸಿ ಈ ವಿಷಯದಲ್ಲಿ ರಾಜಿ ಮಾಡಿಕೊಳ್ಳಬಾರದು. ಕಾಮಗಾರಿಗಳನ್ನು ಸಮಯಕ್ಕೆ ಮುಗಿಸಿ, ಕಳಪೆ ಆಗದಂತೆ ಎಚ್ಚರ ವಹಿಸುವುದು ಮುಖ್ಯ ಎಂದ ಅವರು, ಅಭಿವೃದ್ಧಿ ಪರ ನನ್ನ ಚಿಂತನೆ ಇದ್ದೇ ಇರುತ್ತದೆ. ಮೂಲಭೂತ ಸೌಕರ್ಯ ಬಗ್ಗೆ ಕಾಳಜಿ ವಹಿಸುತ್ತೇವೆ ಎಂದರು.</p>.<p>ಪೌರಾಯುಕ್ತ ವಿವೇಕ ಬನ್ನೆ ಸ್ವಾಗತಿಸಿ, ಪ್ರಾಸ್ತಾವಿಕವಾಗಿ ಮಾತನಾಡಿ, ಗಣೇಶ ನಗರ ಕ್ರಾಸ್ ಡಾಂಬರೀಕರಣಕ್ಕೆ ₹ 49.95 ಲಕ್ಷ ಮತ್ತು ವಾರ್ಡ 7 ಮತ್ತು 8 ಮರು ಡಾಂಬರೀಕರಣ, ವಾರ್ಡ್ ನಂಬರ್ 20, ಡಾಂಬರೀಕರಣಕ್ಕೆ ₹ 49.93 ಲಕ್ಷ , ವಾರ್ಡ್ 1ರ ಸಿಸಿ ರೋಡ್ ಅಭಿವೃದ್ಧಿಗೆ ₹ 38.90 ಲಕ್ಷ ಸೇರಿದಂತೆ 18 ಕಾಮಗಾರಿಗಳಿಗೆ ಚಾಲನೆ ನೀಡಲಾಗುತ್ತಿದೆ ಎಂದು ಮಾಹಿತಿ ನೀಡಿದರು.</p>.<p>ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ಟಿ. ಸಿ . ಹಾದಿಮನಿ, ಪಂಚ ಗ್ಯಾರಂಟಿ ಯೋಜನೆಯ ಸಮಿತಿ ಅಧ್ಯಕ್ಷ ರಿಯಾಜ್ ಸೈಯದ್, ತಹಶೀಲ್ದಾರ್ ಶೈಲೇಶ ಪರಮಾನಂದ ಇದ್ದರು.ನಗರಸಭೆ ಕಚೇರಿ ವ್ಯವಸ್ಥಾಪಕ ಪರಶುರಾಮ ಸಿಂಧೆ ವಂದಿಸಿದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260526-20-874222615</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ದಾಂಡೇಲಿ:</strong> ಮಾನವನಾಗಿ ಹುಟ್ಟಿದ ಮೇಲೆ ಮಾನವನಾಗಿ ಬಾಳಬೇಕು. ಸಮಾಜಮುಖಿ ಕೆಲಸಗಳಿಗೆ ಹಣ ಉಪಯೋಗ ಮಾಡಬೇಕು. ಕ್ಷೇತ್ರದಲ್ಲಿ ಪ್ರವಾಸೋದ್ಯಮದ ಅಭಿವೃದ್ಧಿಗೆ ಹೆಚ್ಚಿನ ಅನುದಾನ ತಂದಿದ್ದೇನೆ. ಇದರಿಂದಾಗಿ ತಾಲ್ಲೂಕಿನ ಆರ್ಥಿಕ ಸ್ಥಿತಿ ಸುಧಾರಣೆಯಾಗಿದೆ ಎಂದು ಶಾಸಕ ಆರ್.ವಿ ದೇಶಪಾಂಡೆ ಹೇಳಿದರು.</p>.<p>ಕರ್ನಾಟಕ ಸರ್ಕಾರದ ಮುಖ್ಯ ಮಂತ್ರಿಗಳ ಮೂಲಸೌಕರ್ಯ ಅಭಿವೃದ್ದಿ ಯೋಜನೆ ಅನುದಾನ ಅಡಿಯಲ್ಲಿ ₹ 16 ಕೋಟಿ ವಿವಿಧ ಕಾಮಗಾರಿಗಳಿಗೆ ಸೋಮವಾರ ದಾಂಡೇಲಿ ನಗರಸಭೆ ಆವರಣದಲ್ಲಿ ಶಿಲಾನ್ಯಾಸ ನೆರವೇರಿಸಿ ಮಾತನಾಡಿದರು.</p>.<p>ಕಾಮಗಾರಿಗಳು ಗುಣಮಟ್ಟದಿಂದ ಕೂಡಿರಬೇಕು. ಜನರಿಗೆ ಅನುಕೂಲವಾಗುವಂತೆ ದೀರ್ಘ ಕಾಲ ಬಾಳಿಕೆ ಬರುವಂತೆ ಗುತ್ತಿಗೆದಾರರು ಕೆಲಸದ ಬಗ್ಗೆ ಎಚ್ಚರ ವಹಿಸಿ ಈ ವಿಷಯದಲ್ಲಿ ರಾಜಿ ಮಾಡಿಕೊಳ್ಳಬಾರದು. ಕಾಮಗಾರಿಗಳನ್ನು ಸಮಯಕ್ಕೆ ಮುಗಿಸಿ, ಕಳಪೆ ಆಗದಂತೆ ಎಚ್ಚರ ವಹಿಸುವುದು ಮುಖ್ಯ ಎಂದ ಅವರು, ಅಭಿವೃದ್ಧಿ ಪರ ನನ್ನ ಚಿಂತನೆ ಇದ್ದೇ ಇರುತ್ತದೆ. ಮೂಲಭೂತ ಸೌಕರ್ಯ ಬಗ್ಗೆ ಕಾಳಜಿ ವಹಿಸುತ್ತೇವೆ ಎಂದರು.</p>.<p>ಪೌರಾಯುಕ್ತ ವಿವೇಕ ಬನ್ನೆ ಸ್ವಾಗತಿಸಿ, ಪ್ರಾಸ್ತಾವಿಕವಾಗಿ ಮಾತನಾಡಿ, ಗಣೇಶ ನಗರ ಕ್ರಾಸ್ ಡಾಂಬರೀಕರಣಕ್ಕೆ ₹ 49.95 ಲಕ್ಷ ಮತ್ತು ವಾರ್ಡ 7 ಮತ್ತು 8 ಮರು ಡಾಂಬರೀಕರಣ, ವಾರ್ಡ್ ನಂಬರ್ 20, ಡಾಂಬರೀಕರಣಕ್ಕೆ ₹ 49.93 ಲಕ್ಷ , ವಾರ್ಡ್ 1ರ ಸಿಸಿ ರೋಡ್ ಅಭಿವೃದ್ಧಿಗೆ ₹ 38.90 ಲಕ್ಷ ಸೇರಿದಂತೆ 18 ಕಾಮಗಾರಿಗಳಿಗೆ ಚಾಲನೆ ನೀಡಲಾಗುತ್ತಿದೆ ಎಂದು ಮಾಹಿತಿ ನೀಡಿದರು.</p>.<p>ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ಟಿ. ಸಿ . ಹಾದಿಮನಿ, ಪಂಚ ಗ್ಯಾರಂಟಿ ಯೋಜನೆಯ ಸಮಿತಿ ಅಧ್ಯಕ್ಷ ರಿಯಾಜ್ ಸೈಯದ್, ತಹಶೀಲ್ದಾರ್ ಶೈಲೇಶ ಪರಮಾನಂದ ಇದ್ದರು.ನಗರಸಭೆ ಕಚೇರಿ ವ್ಯವಸ್ಥಾಪಕ ಪರಶುರಾಮ ಸಿಂಧೆ ವಂದಿಸಿದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260526-20-874222615</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>