ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಶಿವಪ್ರಕಾಶ ದೇವರಾಜು ಮಾತನಾಡಿ, ‘ಸಾರಿಗೆ ಅಧಿಕಾರಿಗಳು ಪ್ರತಿ ವಾಹನದ ಸ್ಥಿತಿಗತಿಯನ್ನು ಪರಿಶೀಲಿಸಿಯೇ ಪರವಾನಗಿ ನೀಡಬೇಕು. ಪ್ರಯಾಣಿಕರಿಗೆ ತೊಂದರೆಯಾದರೆ, ಅಪಘಾತಗಳಿಂದ ಸಾವು–ನೋವು ಉಂಟಾದರೆ ಸಂಬಂಧಪಟ್ಟ ಸಂಸ್ಥೆ, ವಾಹನದ ಚಾಲಕ, ಮಾಲೀಕ ಹಾಗೂ ಆರ್.ಟಿ.ಒ ಅಧಿಕಾರಿಗಳನ್ನು ನೇರ ಹೊಣೆಗಾರರನ್ನಾಗಿ ಮಾಡಿ ದೂರು ದಾಖಲಿಸಲಾಗುವುದು’ ಎಂದು ಎಚ್ಚರಿಕೆ ನೀಡಿದರು.