<p><strong>ಕಾರವಾರ</strong>: ‘ಸರ್ಕಾರದ ನಿಯಮಾವಳಿಯಂತೆ ಶವ ಸಂಸ್ಕಾರಮಾಡುವುದಕ್ಕೆ ಅಡ್ಡಿ ಪಡಿಸುವವರ ವಿರುದ್ಧ ಪ್ರಕರಣ ದಾಖಲಿಸಬೇಕು.ಯಾವುದೇ ವ್ಯಕ್ತಿ ಮೃತಪಟ್ಟಾಗ ನಿಯಮಗಳಿಗೆ ಅನುಸಾರವಾಗಿ ಶವ ಸಂಸ್ಕಾರವನ್ನು ಕೈಗೊಳ್ಳುವ ಅಧಿಕಾರ ಸ್ಥಳೀಯ ಸಂಸ್ಥೆ ಮತ್ತು ಅಧಿಕಾರಿಗಳಿಗಿದೆ’ ಎಂದು ಜಿಲ್ಲಾಧಿಕಾರಿ ಡಾ.ಕೆ.ಹರೀಶಕುಮಾರ್ನಿರ್ದೇಶನ ನೀಡಿದ್ದಾರೆ.</p>.<p>ನಗರದಲ್ಲಿ ಬುಧವಾರ ಎಲ್ಲ ಉಪವಿಭಾಗಾಧಿಕಾರಿಗಳು, ತಹಶೀಲ್ದಾರರು, ತಾಲ್ಲೂಕು ಪಂಚಾಯ್ತಿ ಕಾರ್ಯ ನಿರ್ವಹಣಾಧಿಕಾರಿಗಳುಹಾಗೂ ಸ್ಥಳೀಯ ಸಂಸ್ಥೆಗಳ ಅಧಿಕಾರಿಗಳ ಜೊತೆ ವಿಡಿಯೊಸಂವಾದ ನಡೆಸಿ ಅವರು ಮಾತನಾಡಿದರು.</p>.<p>‘ಇನ್ನುಮುಂದೆ ಜಿಲ್ಲೆಗೆ ಹೊರಗಿನಿಂದ ಬಂದ ಎಲ್ಲರಿಗೂ ಹೋಂ ಕ್ವಾರಂಟೈನ್ ಕಡ್ಡಾಯವಾಗಿದೆ.ಇದನ್ನು ಉಲ್ಲಂಘಿಸುವವರ ವಿರುದ್ಧ ಕ್ರಮ ಕೈಗೊಳ್ಳಬೇಕು’ ಎಂದು ಸೂಚಿಸಿದರು.</p>.<p>‘ಎಲ್ಲ ತಾಲ್ಲೂಕುಗಳಲ್ಲಿ ಕೋವಿಡ್ –19ಗೆ ಚಿಕಿತ್ಸೆ ನೀಡಲು ವ್ಯವಸ್ಥೆಯಿದೆ. ಸೋಂಕಿತರಿಗೆ ಕೋವಿಡ್ಮತ್ತು ಇತರ ಕಾಯಿಲೆಗಳಿದ್ದಲ್ಲಿ ಅವುಗಳಿಗೂ ಚಿಕಿತ್ಸೆನೀಡಬೇಕು. ಎಲ್ಲ ರೋಗಿಗಳನ್ನು ಕಾರವಾರದ ವೈದ್ಯಕೀಯ ಸಂಸ್ಥೆಯ ಕೋವಿಡ್ ವಾರ್ಡ್ಗೆಕಳುಹಿಸಿ ಕೊಟ್ಟರೆವಿಳಂಬವಾಗಿ ಸಮಸ್ಯೆಯಾಗುವ ಸಾಧ್ಯತೆಯಿದೆ’ ಎಂದುಹೇಳಿದರು.</p>.<p>‘ಎಲ್ಲ ಅಧಿಕಾರಿಗಳೂ ತಂಡವಾಗಿ ಕಾರ್ಯ ನಿರ್ವಹಿಸಿದರೆ ಯಾವುದೇ ಸಮಸ್ಯೆ ಅಥವಾ ಸಾವು ಸಂಭವಿಸುವುದಿಲ್ಲ. ಪ್ರತಿ ರೋಗಿಯ ಬಗ್ಗೆ ಲಕ್ಷ್ಯವಹಿಸಿ ಚಿಕಿತ್ಸೆ ಕೊಡಿಸಬೇಕು. ಇದರಲ್ಲಿ ವಿಫಲವಾದಲ್ಲಿ ಉಪ ವಿಭಾಗಾಧಿಕಾರಿಗಳು ಮತ್ತು ತಹಶೀಲ್ದಾರರು ನೇರ ಹೊಣೆಗಾರರಾಗುತ್ತಾರೆ’ ಎಂದು ಎಚ್ಚರಿಕೆ ನೀಡಿದರು.</p>.<p>ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಶಿವಪ್ರಕಾಶ ದೇವರಾಜು ಮಾತನಾಡಿ, ‘ಸೋಂಕಿತರ ಸಂಪರ್ಕದ ಮಾಹಿತಿ ಮತ್ತು ಕ್ವಾರಂಟೈನ್ ಬಗ್ಗೆ ಸೂಕ್ತವಾಗಿ ನಿಗಾ ವಹಿಸಬೇಕು. ಕಂಟೈನ್ಮೆಂಟ್ ವಲಯಗಳ ನಿರ್ವಹಣೆ ಅತಿಮುಖ್ಯವಾಗಿದೆ’ ಎಂದು ಹೇಳಿದರು.</p>.<p>ಈ ಸಂದರ್ಭದಲ್ಲಿ ಹೆಚ್ಚುವರಿ ಜಿಲ್ಲಾಧಿಕಾರಿ ನಾಗರಾಜ್ ಸಿಂಗ್ರೇರ್, ಉಪ ವಿಭಾಗಾಧಿಕಾರಿ ಎಂ.ಪ್ರಿಯಾಂಗಾ, ಜಿಲ್ಲಾ ಸರ್ವೇಕ್ಷಣಾಧಿಕಾರಿ ವಿನೋದ ಭೂತೆ, ತಹಶೀಲ್ದಾರ್ ಆರ್.ವಿ.ಕಟ್ಟಿ, ತಾಲ್ಲೂಕು ವೈದ್ಯಾಧಿಕಾರಿ ಸೂರಜಾನಾಯ್ಕಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕಾರವಾರ</strong>: ‘ಸರ್ಕಾರದ ನಿಯಮಾವಳಿಯಂತೆ ಶವ ಸಂಸ್ಕಾರಮಾಡುವುದಕ್ಕೆ ಅಡ್ಡಿ ಪಡಿಸುವವರ ವಿರುದ್ಧ ಪ್ರಕರಣ ದಾಖಲಿಸಬೇಕು.ಯಾವುದೇ ವ್ಯಕ್ತಿ ಮೃತಪಟ್ಟಾಗ ನಿಯಮಗಳಿಗೆ ಅನುಸಾರವಾಗಿ ಶವ ಸಂಸ್ಕಾರವನ್ನು ಕೈಗೊಳ್ಳುವ ಅಧಿಕಾರ ಸ್ಥಳೀಯ ಸಂಸ್ಥೆ ಮತ್ತು ಅಧಿಕಾರಿಗಳಿಗಿದೆ’ ಎಂದು ಜಿಲ್ಲಾಧಿಕಾರಿ ಡಾ.ಕೆ.ಹರೀಶಕುಮಾರ್ನಿರ್ದೇಶನ ನೀಡಿದ್ದಾರೆ.</p>.<p>ನಗರದಲ್ಲಿ ಬುಧವಾರ ಎಲ್ಲ ಉಪವಿಭಾಗಾಧಿಕಾರಿಗಳು, ತಹಶೀಲ್ದಾರರು, ತಾಲ್ಲೂಕು ಪಂಚಾಯ್ತಿ ಕಾರ್ಯ ನಿರ್ವಹಣಾಧಿಕಾರಿಗಳುಹಾಗೂ ಸ್ಥಳೀಯ ಸಂಸ್ಥೆಗಳ ಅಧಿಕಾರಿಗಳ ಜೊತೆ ವಿಡಿಯೊಸಂವಾದ ನಡೆಸಿ ಅವರು ಮಾತನಾಡಿದರು.</p>.<p>‘ಇನ್ನುಮುಂದೆ ಜಿಲ್ಲೆಗೆ ಹೊರಗಿನಿಂದ ಬಂದ ಎಲ್ಲರಿಗೂ ಹೋಂ ಕ್ವಾರಂಟೈನ್ ಕಡ್ಡಾಯವಾಗಿದೆ.ಇದನ್ನು ಉಲ್ಲಂಘಿಸುವವರ ವಿರುದ್ಧ ಕ್ರಮ ಕೈಗೊಳ್ಳಬೇಕು’ ಎಂದು ಸೂಚಿಸಿದರು.</p>.<p>‘ಎಲ್ಲ ತಾಲ್ಲೂಕುಗಳಲ್ಲಿ ಕೋವಿಡ್ –19ಗೆ ಚಿಕಿತ್ಸೆ ನೀಡಲು ವ್ಯವಸ್ಥೆಯಿದೆ. ಸೋಂಕಿತರಿಗೆ ಕೋವಿಡ್ಮತ್ತು ಇತರ ಕಾಯಿಲೆಗಳಿದ್ದಲ್ಲಿ ಅವುಗಳಿಗೂ ಚಿಕಿತ್ಸೆನೀಡಬೇಕು. ಎಲ್ಲ ರೋಗಿಗಳನ್ನು ಕಾರವಾರದ ವೈದ್ಯಕೀಯ ಸಂಸ್ಥೆಯ ಕೋವಿಡ್ ವಾರ್ಡ್ಗೆಕಳುಹಿಸಿ ಕೊಟ್ಟರೆವಿಳಂಬವಾಗಿ ಸಮಸ್ಯೆಯಾಗುವ ಸಾಧ್ಯತೆಯಿದೆ’ ಎಂದುಹೇಳಿದರು.</p>.<p>‘ಎಲ್ಲ ಅಧಿಕಾರಿಗಳೂ ತಂಡವಾಗಿ ಕಾರ್ಯ ನಿರ್ವಹಿಸಿದರೆ ಯಾವುದೇ ಸಮಸ್ಯೆ ಅಥವಾ ಸಾವು ಸಂಭವಿಸುವುದಿಲ್ಲ. ಪ್ರತಿ ರೋಗಿಯ ಬಗ್ಗೆ ಲಕ್ಷ್ಯವಹಿಸಿ ಚಿಕಿತ್ಸೆ ಕೊಡಿಸಬೇಕು. ಇದರಲ್ಲಿ ವಿಫಲವಾದಲ್ಲಿ ಉಪ ವಿಭಾಗಾಧಿಕಾರಿಗಳು ಮತ್ತು ತಹಶೀಲ್ದಾರರು ನೇರ ಹೊಣೆಗಾರರಾಗುತ್ತಾರೆ’ ಎಂದು ಎಚ್ಚರಿಕೆ ನೀಡಿದರು.</p>.<p>ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಶಿವಪ್ರಕಾಶ ದೇವರಾಜು ಮಾತನಾಡಿ, ‘ಸೋಂಕಿತರ ಸಂಪರ್ಕದ ಮಾಹಿತಿ ಮತ್ತು ಕ್ವಾರಂಟೈನ್ ಬಗ್ಗೆ ಸೂಕ್ತವಾಗಿ ನಿಗಾ ವಹಿಸಬೇಕು. ಕಂಟೈನ್ಮೆಂಟ್ ವಲಯಗಳ ನಿರ್ವಹಣೆ ಅತಿಮುಖ್ಯವಾಗಿದೆ’ ಎಂದು ಹೇಳಿದರು.</p>.<p>ಈ ಸಂದರ್ಭದಲ್ಲಿ ಹೆಚ್ಚುವರಿ ಜಿಲ್ಲಾಧಿಕಾರಿ ನಾಗರಾಜ್ ಸಿಂಗ್ರೇರ್, ಉಪ ವಿಭಾಗಾಧಿಕಾರಿ ಎಂ.ಪ್ರಿಯಾಂಗಾ, ಜಿಲ್ಲಾ ಸರ್ವೇಕ್ಷಣಾಧಿಕಾರಿ ವಿನೋದ ಭೂತೆ, ತಹಶೀಲ್ದಾರ್ ಆರ್.ವಿ.ಕಟ್ಟಿ, ತಾಲ್ಲೂಕು ವೈದ್ಯಾಧಿಕಾರಿ ಸೂರಜಾನಾಯ್ಕಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>