<p><strong>ಕಾರವಾರ/ ದಾಂಡೇಲಿ:</strong> ಹಳೆ ದಾಂಡೇಲಿಯಲ್ಲಿ ಮನೆಯೊಂದರ ಶೌಚಾಲಯದಿಂದ ಮಲವನ್ನು ಪೌರ ಕಾರ್ಮಿಕರಿಂದ ಹೊರಿಸಿ ಸಾಗಿಸಿದ ಪ್ರಕರಣದಲ್ಲಿಕೂಲಂಕಷವಾಗಿ ಪರಿಶೀಲಿಸಿ ವರದಿ ನೀಡಲು ಜಿಲ್ಲಾಧಿಕಾರಿ ಆದೇಶಿಸಿದ್ದಾರೆ.</p>.<p>ಈ ಬಗ್ಗೆ ಸಮಾಜ ಕಲ್ಯಾಣ ಇಲಾಖೆ ಉಪ ನಿರ್ದೇಶಕ ಹಾಗೂ ದಾಂಡೇಲಿ ಪೌರಾಯುಕ್ತರು ಜಂಟಿಯಾಗಿ ಪರಿಶೀಲನೆ ನಡೆಸಬೇಕು. ಒಂದುವೇಳೆ ಪ್ರಕರಣ ಸಾಬೀತಾದರೆ ತಪ್ಪಿತಸ್ಥರ ವಿರುದ್ಧ ನಿಯಮಾನುಸಾರ ಕಠಿಣ ಕ್ರಮ ಕೈಗೊಳ್ಳಬೇಕು. ಈ ಬಗ್ಗೆ ಮೂರು ದಿನಗಳ ಒಳಗಾಗಿ ವರದಿ ಸಲ್ಲಿಸಬೇಕು ಎಂದು ಜಿಲ್ಲಾಧಿಕಾರಿ ಸೂಚಿಸಿದ್ದಾರೆ.</p>.<p class="Subhead">ಪ್ರತ್ಯೇಕ ದೂರು:ಈ ನಡುವೆ ಶೌಚಾಲಯ ಸ್ವಚ್ಛಗೊಳಿಸಿ, ಮಲ ಹೊರಿಸಿದ ಪ್ರಕರಣದಲ್ಲಿ ಭಾಗಿಯಾದ ಪೌರ ಕಾರ್ಮಿಕರೇ ದಾಂಡೇಲಿ ಪೊಲೀಸ್ ಠಾಣೆಯಲ್ಲಿ ಶುಕ್ರವಾರ ಪ್ರತ್ಯೇಕ ದೂರೊಂದನ್ನು ದಾಖಲಿಸಿದ್ದಾರೆ.</p>.<p>‘ಪೌರ ಕಾರ್ಮಿಕರ ಮೊಕದ್ದಂ ನಮ್ಮಿಂದ ಒತ್ತಾಯದಿಂದ ಡಿ.11ರಂದು ಈ ಕೆಲಸ ಮಾಡಿಸಿದ್ದಾರೆ. ನಾವು ಒಪ್ಪದಿದ್ದಾಗ ಪೌರಾಯುಕ್ತರೇ ಈ ಕೆಲಸ ಮಾಡಲು ಹೇಳಿದ್ದಾರೆ ಎಂದು ಹೆದರಿಸಿದ್ದಾರೆ. ಆ ಕಾರಣಕ್ಕಾಗಿ ನಾವು ಮಲ ಸಾಗಿಸುವ ಕೆಲಸ ಮಾಡಿದ್ದೇವೆ. ನಮಗೆ ಅನ್ಯಾಯವಾಗಿದೆ. ಹಾಗಾಗಿ ಸಂಬಂಧಪಟ್ಟವರ ಮೇಲೆ ಪ್ರಕರಣ ದಾಖಲಿಸಬೇಕು’ ಎಂದು ಪೌರ ಕಾರ್ಮಿಕರಾದ ರಂಗನಾಯಕಲು, ಅಭಿಷೇಕದೊಗಿಪೊಳು, ಮಂಜುನಾಥ ಮೊಹಿಕ್ಕರ, ನರಸಿಂಹ ದಾಸರಿ ದೂರಿನಲ್ಲಿ ಮನವಿ ಮಾಡಿದ್ದಾರೆ.</p>.<p>ಡಿ.ವೈ.ಎಸ್.ಪಿ ಮೋಹನಪ್ರಸಾದ ನೇತೃತ್ವದಲ್ಲಿ ಪೊಲೀಸರು ಶುಕ್ರವಾರ ಸ್ಥಳಕ್ಕೆ ಭೇಟಿ ನೀಡಿ ಸ್ಥಳ ಪಂಚನಾಮೆ ನಡೆಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕಾರವಾರ/ ದಾಂಡೇಲಿ:</strong> ಹಳೆ ದಾಂಡೇಲಿಯಲ್ಲಿ ಮನೆಯೊಂದರ ಶೌಚಾಲಯದಿಂದ ಮಲವನ್ನು ಪೌರ ಕಾರ್ಮಿಕರಿಂದ ಹೊರಿಸಿ ಸಾಗಿಸಿದ ಪ್ರಕರಣದಲ್ಲಿಕೂಲಂಕಷವಾಗಿ ಪರಿಶೀಲಿಸಿ ವರದಿ ನೀಡಲು ಜಿಲ್ಲಾಧಿಕಾರಿ ಆದೇಶಿಸಿದ್ದಾರೆ.</p>.<p>ಈ ಬಗ್ಗೆ ಸಮಾಜ ಕಲ್ಯಾಣ ಇಲಾಖೆ ಉಪ ನಿರ್ದೇಶಕ ಹಾಗೂ ದಾಂಡೇಲಿ ಪೌರಾಯುಕ್ತರು ಜಂಟಿಯಾಗಿ ಪರಿಶೀಲನೆ ನಡೆಸಬೇಕು. ಒಂದುವೇಳೆ ಪ್ರಕರಣ ಸಾಬೀತಾದರೆ ತಪ್ಪಿತಸ್ಥರ ವಿರುದ್ಧ ನಿಯಮಾನುಸಾರ ಕಠಿಣ ಕ್ರಮ ಕೈಗೊಳ್ಳಬೇಕು. ಈ ಬಗ್ಗೆ ಮೂರು ದಿನಗಳ ಒಳಗಾಗಿ ವರದಿ ಸಲ್ಲಿಸಬೇಕು ಎಂದು ಜಿಲ್ಲಾಧಿಕಾರಿ ಸೂಚಿಸಿದ್ದಾರೆ.</p>.<p class="Subhead">ಪ್ರತ್ಯೇಕ ದೂರು:ಈ ನಡುವೆ ಶೌಚಾಲಯ ಸ್ವಚ್ಛಗೊಳಿಸಿ, ಮಲ ಹೊರಿಸಿದ ಪ್ರಕರಣದಲ್ಲಿ ಭಾಗಿಯಾದ ಪೌರ ಕಾರ್ಮಿಕರೇ ದಾಂಡೇಲಿ ಪೊಲೀಸ್ ಠಾಣೆಯಲ್ಲಿ ಶುಕ್ರವಾರ ಪ್ರತ್ಯೇಕ ದೂರೊಂದನ್ನು ದಾಖಲಿಸಿದ್ದಾರೆ.</p>.<p>‘ಪೌರ ಕಾರ್ಮಿಕರ ಮೊಕದ್ದಂ ನಮ್ಮಿಂದ ಒತ್ತಾಯದಿಂದ ಡಿ.11ರಂದು ಈ ಕೆಲಸ ಮಾಡಿಸಿದ್ದಾರೆ. ನಾವು ಒಪ್ಪದಿದ್ದಾಗ ಪೌರಾಯುಕ್ತರೇ ಈ ಕೆಲಸ ಮಾಡಲು ಹೇಳಿದ್ದಾರೆ ಎಂದು ಹೆದರಿಸಿದ್ದಾರೆ. ಆ ಕಾರಣಕ್ಕಾಗಿ ನಾವು ಮಲ ಸಾಗಿಸುವ ಕೆಲಸ ಮಾಡಿದ್ದೇವೆ. ನಮಗೆ ಅನ್ಯಾಯವಾಗಿದೆ. ಹಾಗಾಗಿ ಸಂಬಂಧಪಟ್ಟವರ ಮೇಲೆ ಪ್ರಕರಣ ದಾಖಲಿಸಬೇಕು’ ಎಂದು ಪೌರ ಕಾರ್ಮಿಕರಾದ ರಂಗನಾಯಕಲು, ಅಭಿಷೇಕದೊಗಿಪೊಳು, ಮಂಜುನಾಥ ಮೊಹಿಕ್ಕರ, ನರಸಿಂಹ ದಾಸರಿ ದೂರಿನಲ್ಲಿ ಮನವಿ ಮಾಡಿದ್ದಾರೆ.</p>.<p>ಡಿ.ವೈ.ಎಸ್.ಪಿ ಮೋಹನಪ್ರಸಾದ ನೇತೃತ್ವದಲ್ಲಿ ಪೊಲೀಸರು ಶುಕ್ರವಾರ ಸ್ಥಳಕ್ಕೆ ಭೇಟಿ ನೀಡಿ ಸ್ಥಳ ಪಂಚನಾಮೆ ನಡೆಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>