<p><strong>ಕಾರವಾರ</strong>: ‘ಹೋಳಿ ಹಬ್ಬವನ್ನು ಸಾರ್ವಜನಿಕವಾಗಿ, ಸಾಮೂಹಿಕವಾಗಿ ಆಚರಿಸುವುದನ್ನು ನಿರ್ಬಂಧಿಸಲಾಗಿದೆ. ಸಾರ್ವಜನಿಕರು ತಮ್ಮ ಮನೆಗಳಲ್ಲಿ ಆಚರಿಸಬಹುದು. ಸಮುದ್ರಕ್ಕೆ ಸಾಮೂಹಿಕವಾಗಿ ಹೋಗಿ ಸ್ನಾನ ಮಾಡುವುದನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ’ ಎಂದು ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಆದೇಶಿಸಿದ್ದಾರೆ.</p>.<p>‘ಕೋವಿಡ್ ಪ್ರಕರಣಗಳು ಹೆಚ್ಚಾಗುತ್ತಿವೆ. ಇದನ್ನು ತಡೆಗಟ್ಟುವುದು ಎಲ್ಲರ ಜವಾಬ್ದಾರಿ. ಹಾಗಾಗಿ ಹೋಳಿ, ಷಬ್-ಎ-ಬರಾತ್, ಗುಡ್ ಫ್ರೈಡೇ, ಯುಗಾದಿ ಹಬ್ಬಗಳ ಸಂದರ್ಭದಲ್ಲಿ ಹೆಚ್ಚು ಜನ ಸೇರಿದರೆ ಜಿಲ್ಲೆಯಲ್ಲಿ ಗಣನೀಯ ಪ್ರಮಾಣದಲ್ಲಿ ಸೋಂಕು ಹೆಚ್ಚುವ ಸಾಧ್ಯತೆಯಿದೆ. ಇದನ್ನು ತಡೆಯಲು ಜನರ ಸಹಕಾರ ಅಗತ್ಯ. ಈ ಹಿನ್ನೆಲೆ ಸರ್ಕಾರದ ನಿರ್ದೇಶನದಂತೆ ನಿರ್ಬಂಧ ವಿಧಿಸಲಾಗಿದೆ. ನಿಯಮವನ್ನು ಉಲ್ಲಂಘಿಸಿದರೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲಾಗುವುದು’ ಎಂದು ಎಚ್ಚರಿಕೆ ನೀಡಿದ್ದಾರೆ.</p>.<p>ನಗರಸಭೆ ಆದೇಶ: ಹೋಳಿ ಹಬ್ಬದ ಸಂದರ್ಭದಲ್ಲಿ ನಗರದ ಸಮುದ್ರತೀರದಲ್ಲಿ ಸಾಮೂಹಿಕವಾಗಿ ಸ್ನಾನ ಮಾಡುವುದನ್ನು ನಿಷೇಧಿಸಿ ನಗರಸಭೆ ಪೌರಾಯುಕ್ತರು ಆದೇಶಿಸಿದ್ದಾರೆ.</p>.<p>ಮಾರ್ಚ್ 28ರಂದು ಕಾರವಾರದಲ್ಲಿ ನಡೆಯುವ ಸಂತೆ ಮಾರುಕಟ್ಟೆಗೆ ಬರುವ ಎಲ್ಲರೂ ಮುಖಗವಸು ಕಡ್ಡಾಯವಾಗಿ ಧರಿಸಿರಬೇಕು. ನಗರದಲ್ಲಿರುವ ಮೀನು ಮಾರುಕಟ್ಟೆಯಲ್ಲಿ ಮೀನು ಮಾರಾಟ ಮಾಡುವವರು ಹಾಗೂ ಗ್ರಾಹಕರು ಸೇರಿದಂತೆ ಎಲ್ಲ ಸಾರ್ವಜನಿಕರೂ ಈ ಆದೇಶವನ್ನು ಕಡ್ಡಾಯವಾಗಿ ಪಾಲಿಸಬೇಕು. ತಪ್ಪಿದರೆ ಕಾನೂನು ಕ್ರಮ ಜರುಗಿಸಲಾಗುವುದು ಎಂದು ಎಚ್ಚರಿಕೆ ನೀಡಿದ್ದಾರೆ.</p>.<p class="Subhead"><strong>ಗೊಂದಲ ಮೂಡಿಸಿದ ಪ್ರಕಟಣೆ:</strong></p>.<p>‘ಮೀನು ಮಾರುಕಟ್ಟೆಯಲ್ಲಿ ಮೀನು ಮಾರಾಟ ಮಾಡುವವರು ಮತ್ತು ಸಂತೆಗೆ ಬರುವವರು ಕಡ್ಡಾಯವಾಗಿ ಕೋವಿಡ್ ಲಸಿಕೆ ಪಡೆದುಕೊಳ್ಳಬೇಕು’ ಎಂದು ಕಾರವಾರ ನಗರಸಭೆ ಅಧ್ಯಕ್ಷರು ಮತ್ತು ಪೌರಾಯುಕ್ತರು ಮಾರ್ಚ್ 26ರಂದು ಜಂಟಿಯಾಗಿ ಸಾರ್ವಜನಿಕ ಪ್ರಕಟಣೆ ನೀಡಿದ್ದಾರೆ.</p>.<p>‘ನಿಯಮ ಉಲ್ಲಂಘಿಸಿದವರ ಮೇಲೆ ದಂಡ ಹಾಗೂ ವಿಪತ್ತು ನಿರ್ವಹಣಾ ಕಾಯ್ದೆ 2005, ಭಾರತೀಯ ದಂಡ ಸಂಹಿತೆ ಮತ್ತು ಸಾಂಕ್ರಾಮಿಕ ರೋಗ ತಡೆ ಕಾಯ್ದೆ 2020ರ ಅನ್ವಯ ಕಾನೂನು ಕ್ರಮ ಕೈಗೊಳ್ಳಲಾಗುವುದು’ ಎಂದು ಎಚ್ಚರಿಕೆ ನೀಡಿದ್ದಾರೆ.</p>.<p>ಸರ್ಕಾರವು ಸಾರ್ವಜನಿಕರಿಗೆ ಲಸಿಕೆಯನ್ನು ಕಡ್ಡಾಯಗೊಳಿಸದೇ ಸ್ವಯಂಪ್ರೇರಿತವಾಗಿ ಪಡೆದುಕೊಳ್ಳಬೇಕು. ಅಧಿಕಾರಿಗಳು ಹಾಗೂ ಜನಪ್ರತಿನಿಧಿಗಳು ನಾಗರಿಕರ ಮನವೊಲಿಕೆ ಮಾಡಬೇಕು ಎಂದು ತಿಳಿಸಿದೆ. ಆದರೆ, ಕಾರವಾರ ನಗರಸಭೆಯು ಲಸಿಕೆಯನ್ನು ಕಡ್ಡಾಯವಾಗಿ ಪಡೆದುಕೊಳ್ಳಬೇಕು ಎಂದು ಸೂಚಿಸಿರುವುದು ಗೊಂದಲ ಮೂಡಿಸಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕಾರವಾರ</strong>: ‘ಹೋಳಿ ಹಬ್ಬವನ್ನು ಸಾರ್ವಜನಿಕವಾಗಿ, ಸಾಮೂಹಿಕವಾಗಿ ಆಚರಿಸುವುದನ್ನು ನಿರ್ಬಂಧಿಸಲಾಗಿದೆ. ಸಾರ್ವಜನಿಕರು ತಮ್ಮ ಮನೆಗಳಲ್ಲಿ ಆಚರಿಸಬಹುದು. ಸಮುದ್ರಕ್ಕೆ ಸಾಮೂಹಿಕವಾಗಿ ಹೋಗಿ ಸ್ನಾನ ಮಾಡುವುದನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ’ ಎಂದು ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಆದೇಶಿಸಿದ್ದಾರೆ.</p>.<p>‘ಕೋವಿಡ್ ಪ್ರಕರಣಗಳು ಹೆಚ್ಚಾಗುತ್ತಿವೆ. ಇದನ್ನು ತಡೆಗಟ್ಟುವುದು ಎಲ್ಲರ ಜವಾಬ್ದಾರಿ. ಹಾಗಾಗಿ ಹೋಳಿ, ಷಬ್-ಎ-ಬರಾತ್, ಗುಡ್ ಫ್ರೈಡೇ, ಯುಗಾದಿ ಹಬ್ಬಗಳ ಸಂದರ್ಭದಲ್ಲಿ ಹೆಚ್ಚು ಜನ ಸೇರಿದರೆ ಜಿಲ್ಲೆಯಲ್ಲಿ ಗಣನೀಯ ಪ್ರಮಾಣದಲ್ಲಿ ಸೋಂಕು ಹೆಚ್ಚುವ ಸಾಧ್ಯತೆಯಿದೆ. ಇದನ್ನು ತಡೆಯಲು ಜನರ ಸಹಕಾರ ಅಗತ್ಯ. ಈ ಹಿನ್ನೆಲೆ ಸರ್ಕಾರದ ನಿರ್ದೇಶನದಂತೆ ನಿರ್ಬಂಧ ವಿಧಿಸಲಾಗಿದೆ. ನಿಯಮವನ್ನು ಉಲ್ಲಂಘಿಸಿದರೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲಾಗುವುದು’ ಎಂದು ಎಚ್ಚರಿಕೆ ನೀಡಿದ್ದಾರೆ.</p>.<p>ನಗರಸಭೆ ಆದೇಶ: ಹೋಳಿ ಹಬ್ಬದ ಸಂದರ್ಭದಲ್ಲಿ ನಗರದ ಸಮುದ್ರತೀರದಲ್ಲಿ ಸಾಮೂಹಿಕವಾಗಿ ಸ್ನಾನ ಮಾಡುವುದನ್ನು ನಿಷೇಧಿಸಿ ನಗರಸಭೆ ಪೌರಾಯುಕ್ತರು ಆದೇಶಿಸಿದ್ದಾರೆ.</p>.<p>ಮಾರ್ಚ್ 28ರಂದು ಕಾರವಾರದಲ್ಲಿ ನಡೆಯುವ ಸಂತೆ ಮಾರುಕಟ್ಟೆಗೆ ಬರುವ ಎಲ್ಲರೂ ಮುಖಗವಸು ಕಡ್ಡಾಯವಾಗಿ ಧರಿಸಿರಬೇಕು. ನಗರದಲ್ಲಿರುವ ಮೀನು ಮಾರುಕಟ್ಟೆಯಲ್ಲಿ ಮೀನು ಮಾರಾಟ ಮಾಡುವವರು ಹಾಗೂ ಗ್ರಾಹಕರು ಸೇರಿದಂತೆ ಎಲ್ಲ ಸಾರ್ವಜನಿಕರೂ ಈ ಆದೇಶವನ್ನು ಕಡ್ಡಾಯವಾಗಿ ಪಾಲಿಸಬೇಕು. ತಪ್ಪಿದರೆ ಕಾನೂನು ಕ್ರಮ ಜರುಗಿಸಲಾಗುವುದು ಎಂದು ಎಚ್ಚರಿಕೆ ನೀಡಿದ್ದಾರೆ.</p>.<p class="Subhead"><strong>ಗೊಂದಲ ಮೂಡಿಸಿದ ಪ್ರಕಟಣೆ:</strong></p>.<p>‘ಮೀನು ಮಾರುಕಟ್ಟೆಯಲ್ಲಿ ಮೀನು ಮಾರಾಟ ಮಾಡುವವರು ಮತ್ತು ಸಂತೆಗೆ ಬರುವವರು ಕಡ್ಡಾಯವಾಗಿ ಕೋವಿಡ್ ಲಸಿಕೆ ಪಡೆದುಕೊಳ್ಳಬೇಕು’ ಎಂದು ಕಾರವಾರ ನಗರಸಭೆ ಅಧ್ಯಕ್ಷರು ಮತ್ತು ಪೌರಾಯುಕ್ತರು ಮಾರ್ಚ್ 26ರಂದು ಜಂಟಿಯಾಗಿ ಸಾರ್ವಜನಿಕ ಪ್ರಕಟಣೆ ನೀಡಿದ್ದಾರೆ.</p>.<p>‘ನಿಯಮ ಉಲ್ಲಂಘಿಸಿದವರ ಮೇಲೆ ದಂಡ ಹಾಗೂ ವಿಪತ್ತು ನಿರ್ವಹಣಾ ಕಾಯ್ದೆ 2005, ಭಾರತೀಯ ದಂಡ ಸಂಹಿತೆ ಮತ್ತು ಸಾಂಕ್ರಾಮಿಕ ರೋಗ ತಡೆ ಕಾಯ್ದೆ 2020ರ ಅನ್ವಯ ಕಾನೂನು ಕ್ರಮ ಕೈಗೊಳ್ಳಲಾಗುವುದು’ ಎಂದು ಎಚ್ಚರಿಕೆ ನೀಡಿದ್ದಾರೆ.</p>.<p>ಸರ್ಕಾರವು ಸಾರ್ವಜನಿಕರಿಗೆ ಲಸಿಕೆಯನ್ನು ಕಡ್ಡಾಯಗೊಳಿಸದೇ ಸ್ವಯಂಪ್ರೇರಿತವಾಗಿ ಪಡೆದುಕೊಳ್ಳಬೇಕು. ಅಧಿಕಾರಿಗಳು ಹಾಗೂ ಜನಪ್ರತಿನಿಧಿಗಳು ನಾಗರಿಕರ ಮನವೊಲಿಕೆ ಮಾಡಬೇಕು ಎಂದು ತಿಳಿಸಿದೆ. ಆದರೆ, ಕಾರವಾರ ನಗರಸಭೆಯು ಲಸಿಕೆಯನ್ನು ಕಡ್ಡಾಯವಾಗಿ ಪಡೆದುಕೊಳ್ಳಬೇಕು ಎಂದು ಸೂಚಿಸಿರುವುದು ಗೊಂದಲ ಮೂಡಿಸಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>