<p><strong>ಸಿದ್ದಾಪುರ</strong>: ಪಟ್ಟಣ ಪಂಚಾಯಿತಿ ವ್ಯಾಪ್ತಿಯ ಗಣಪತಿಗಲ್ಲಿಯ ಉದಯ ರಂಗೈನ್ ಹಾಗೂ ಅಶೋಕ ಪ್ರಭು ಎಂಬುವವರ ಮನೆಯ ಹಿಂಭಾಗದಲ್ಲಿ ಗುರುವಾರ 3 ಮಂಗಗಳು ಏಕಕಾಲದಲ್ಲಿ ಮೃತಪಟ್ಟಿವೆ. </p>.<p>ವಿಷಯ ತಿಳಿದ ಪಟ್ಟಣ ಪಂಚಾಯಿತಿ ಸದಸ್ಯ ಗುರುರಾಜ ಶಾನಭಾಗ ಅವರು ಮಂಗನ ಕಾಯಿಲೆ ಶಿವಮೊಗ್ಗ ಜಿಲ್ಲೆಯಲ್ಲಿ ಈಗಾಗಲೇ ವರದಿಯಾಗಿದ್ದರಿಂದ ಮುಂಜಾಗ್ರತಾ ಕ್ರಮವಾಗಿ ಆರೋಗ್ಯ ಇಲಾಖೆ, ಪಶುಸಂಗೋಪನಾ ಇಲಾಖೆ, ಅರಣ್ಯ ಇಲಾಖೆ ಮತ್ತು ಪಟ್ಟಣ ಪಂಚಾಯಿತಿ ಅಧಿಕಾರಗಳಿಗೆ ವಿಷಯ ತಿಳಿಸಿದರು.</p>.<p>ತಕ್ಷಣ ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳು, ಪಶುಸಂಗೋಪನಾ ಇಲಾಖೆಯ ತಾಲ್ಲೂಕು ಪಶುವೈದ್ಯಾಧಿಕಾರಿಗಳಿಂದ ಮೃತ ಮಂಗಗಳ ಮರಣೋತ್ತರ ಪರೀಕ್ಷೆ ಮಾಡಿಸಿ ಅವಯವಗಳನ್ನು ಸಂಗ್ರಹಿಸಿ ತಾಲ್ಲೂಕು ಪ್ರಾಥಮಿಕ ಆರೋಗ್ಯ ಕೇಂದ್ರದ ವತಿಯಿಂದ ಪುಣೆ ಮತ್ತು ಶಿವಮೊಗ್ಗದ ಸಂಶೋಧನಾಲಯಗಳಿಗೆ ತಪಾಸಣೆಗಾಗಿ ಕಳುಹಿಸಿದ್ದಾರೆ.</p>.<p>ನಂತರ ಅರಣ್ಯ ಇಲಾಖೆಯ ವತಿಯಿಂದ ಮೃತ ಮಂಗಗಳ ದೇಹವನ್ನು ದಹನ ಮಾಡಲಾಯಿತು. ಸಿದ್ದಾಪುರ ಪಟ್ಟಣ ಪಂಚಾಯಿತಿ ವತಿಯಿಂದ ಮಂಗಗಳು ಮರಣಹೊಂದಿದ ಸ್ಥಳದಲ್ಲಿ ಕ್ರಿಮಿನಾಶಕ ಸಿಂಪಡಿಸಿದರು. ಸಂಶೋಧನಾಲಯಗಳ ವರದಿ ಬರುವವರೆಗೆ ಸಾರ್ವಜನಿಕರು ಜಾಗರೂಕರಾಗಿರಬೇಕೆಂದು, ಈ ಭಾಗದಲ್ಲಿ ಮಂಗನ ಕಾಯಿಲೆಯ ಲಕ್ಷಣಗಳಾದ ಜ್ವರ ಹಾಗೂ ಮೈಕೈ ನೋವು ಆರಂಭವಾದರೆ ಕೂಡಲೇ ಸರ್ಕಾರಿ ಆಸ್ಪತ್ರೆಯಲ್ಲಿ ತಪಾಸಣೆ ಮಾಡಿಸಿಕೊಳ್ಳಬೇಕಾಗಿ ಆರೋಗ್ಯ ಇಲಾಖೆಯವರು ವಿನಂತಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಸಿದ್ದಾಪುರ</strong>: ಪಟ್ಟಣ ಪಂಚಾಯಿತಿ ವ್ಯಾಪ್ತಿಯ ಗಣಪತಿಗಲ್ಲಿಯ ಉದಯ ರಂಗೈನ್ ಹಾಗೂ ಅಶೋಕ ಪ್ರಭು ಎಂಬುವವರ ಮನೆಯ ಹಿಂಭಾಗದಲ್ಲಿ ಗುರುವಾರ 3 ಮಂಗಗಳು ಏಕಕಾಲದಲ್ಲಿ ಮೃತಪಟ್ಟಿವೆ. </p>.<p>ವಿಷಯ ತಿಳಿದ ಪಟ್ಟಣ ಪಂಚಾಯಿತಿ ಸದಸ್ಯ ಗುರುರಾಜ ಶಾನಭಾಗ ಅವರು ಮಂಗನ ಕಾಯಿಲೆ ಶಿವಮೊಗ್ಗ ಜಿಲ್ಲೆಯಲ್ಲಿ ಈಗಾಗಲೇ ವರದಿಯಾಗಿದ್ದರಿಂದ ಮುಂಜಾಗ್ರತಾ ಕ್ರಮವಾಗಿ ಆರೋಗ್ಯ ಇಲಾಖೆ, ಪಶುಸಂಗೋಪನಾ ಇಲಾಖೆ, ಅರಣ್ಯ ಇಲಾಖೆ ಮತ್ತು ಪಟ್ಟಣ ಪಂಚಾಯಿತಿ ಅಧಿಕಾರಗಳಿಗೆ ವಿಷಯ ತಿಳಿಸಿದರು.</p>.<p>ತಕ್ಷಣ ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳು, ಪಶುಸಂಗೋಪನಾ ಇಲಾಖೆಯ ತಾಲ್ಲೂಕು ಪಶುವೈದ್ಯಾಧಿಕಾರಿಗಳಿಂದ ಮೃತ ಮಂಗಗಳ ಮರಣೋತ್ತರ ಪರೀಕ್ಷೆ ಮಾಡಿಸಿ ಅವಯವಗಳನ್ನು ಸಂಗ್ರಹಿಸಿ ತಾಲ್ಲೂಕು ಪ್ರಾಥಮಿಕ ಆರೋಗ್ಯ ಕೇಂದ್ರದ ವತಿಯಿಂದ ಪುಣೆ ಮತ್ತು ಶಿವಮೊಗ್ಗದ ಸಂಶೋಧನಾಲಯಗಳಿಗೆ ತಪಾಸಣೆಗಾಗಿ ಕಳುಹಿಸಿದ್ದಾರೆ.</p>.<p>ನಂತರ ಅರಣ್ಯ ಇಲಾಖೆಯ ವತಿಯಿಂದ ಮೃತ ಮಂಗಗಳ ದೇಹವನ್ನು ದಹನ ಮಾಡಲಾಯಿತು. ಸಿದ್ದಾಪುರ ಪಟ್ಟಣ ಪಂಚಾಯಿತಿ ವತಿಯಿಂದ ಮಂಗಗಳು ಮರಣಹೊಂದಿದ ಸ್ಥಳದಲ್ಲಿ ಕ್ರಿಮಿನಾಶಕ ಸಿಂಪಡಿಸಿದರು. ಸಂಶೋಧನಾಲಯಗಳ ವರದಿ ಬರುವವರೆಗೆ ಸಾರ್ವಜನಿಕರು ಜಾಗರೂಕರಾಗಿರಬೇಕೆಂದು, ಈ ಭಾಗದಲ್ಲಿ ಮಂಗನ ಕಾಯಿಲೆಯ ಲಕ್ಷಣಗಳಾದ ಜ್ವರ ಹಾಗೂ ಮೈಕೈ ನೋವು ಆರಂಭವಾದರೆ ಕೂಡಲೇ ಸರ್ಕಾರಿ ಆಸ್ಪತ್ರೆಯಲ್ಲಿ ತಪಾಸಣೆ ಮಾಡಿಸಿಕೊಳ್ಳಬೇಕಾಗಿ ಆರೋಗ್ಯ ಇಲಾಖೆಯವರು ವಿನಂತಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>