ಸಂಘದ ಪ್ರಭಾರಿ ಪ್ರಧಾನ ವ್ಯವಸ್ಥಾಪಕ ವಿಜಯಾನಂದ ಭಟ್ ಮಂಗಳವಾರ ಸಂಜೆ ಪ್ರಕರಣ ದಾಖಲಿಸಿದ್ದು, ‘ರವೀಶ ಹೆಗಡೆ ಹಾಗೂ ರಾಮಕೃಷ್ಣ ಹೆಗಡೆ ಕಡವೆ ಅವರು ಜತೆಯಾಗಿ ಸಂಘದ ನಿವೃತ್ತ ಸಿಬ್ಬಂದಿ ಅನಿಲಕುಮಾರ ಸಿದ್ದಪ್ಪ ಮುಷ್ಟಗಿ ಹೆಸರಿನಲ್ಲಿ ₹44.09 ಕೋಟಿ, ಸದಸ್ಯರಾದ ಪ್ರವೀಣ ಹೆಗಡೆ ಹೆಸರಲ್ಲಿ ₹33.66 ಕೋಟಿ ಹಾಗೂ ಮಹಾಬಲೇಶ್ವರ ಗಣಪತಿ ಹೆಗಡೆ ಹೆಸರಿನಲ್ಲಿ ₹22.88 ಕೋಟಿ ಸಾಲವನ್ನು ಸ್ವಂತಕ್ಕೆ ಲಾಭ ಮಾಡಿಕೊಳ್ಳುವ ಮತ್ತು ಸಂಘಕ್ಕೆ ನಷ್ಟ ಮಾಡುವ ದುರುದ್ದೇಶದಿಂದ ನೀಡಿದ್ದಾರೆ’ ಎಂದು ದೂರಿನಲ್ಲಿ ಆರೋಪಿಸಿದ್ದಾರೆ.